ಡಿಸೆಂಬರ್ನಲ್ಲಿ ಲೋಕಸಭೆ ಚುನಾವಣೆ: ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್ಗಳನ್ನು ಬುಕ್ ಮಾಡಿದ ಬಿಜೆಪಿ- ಮಮತಾ ಬ್ಯಾನರ್ಜಿ ಮಾಹಿತಿ
ಕೋಲ್ಕತ್ತ, ಆಗಸ್ಟ್ 28: ಬಿಜೆಪಿಯು ಡಿಸೆಂಬರ್ನಲ್ಲಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್ಗಳನ್ನು ಬಿಜೆಪಿ ಬುಕ್ ಮಾಡಿದೆ ಎಂಬ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಟಿಎಂಸಿ ಯುವ ಘಟಕದ ರ್ಯಾಲಿಯಲ್ಲಿ ಮಾತನಾಡಿದ ಮಮರಾ ಬ್ಯಾನರ್ಜಿ, ಭಾರತದಲ್ಲಿ ಬಿಜೆಪಿಗೆ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ದೇಶವು ಸರ್ವಾಧಿಕಾರಿ ಆಡಳಿತವನ್ನು ಎದುರಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.

'ಸತತ ಮೂರನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶವು ನಿರಂಕುಶ ಆಡಳಿತವನ್ನು ಎದುರಿಸಬೇಕಾಗುತ್ತದೆ. ಅವರು (ಬಿಜೆಪಿ) ಡಿಸೆಂಬರ್ 2023 ರಲ್ಲಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂಬ ಆತಂಕ ನನ್ನಲ್ಲಿದೆ' ಎಂದು ಹೇಳಿದ್ದಾರೆ.
ಕೇಸರಿ ಪಕ್ಷವು ಈಗಾಗಲೇ ನಮ್ಮ ದೇಶದಲ್ಲಿ ಸಮೂಹಗಳ ನಡುವೆ ಒಡುಕು ಉಂಟು ಮಾಡಿದೆ. ವೈರತ್ವದ ರಾಷ್ಟ್ರವನ್ನಾಗಿ ಪರಿವರ್ತಿಸಿದೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ, ನಮ್ಮ ದೇಶವನ್ನು ದ್ವೇಷದ ರಾಷ್ಟ್ರವನ್ನಾಗಿ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಬಿಜೆಪಿ ಈಗಾಗಲೇ ಎಲ್ಲಾ ಚಾಪರ್ಗಳನ್ನು ಕಾಯ್ದಿರಿಸಿದೆ. ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಅವುಗಳನ್ನು ಬಳಸಬಾರದು ಎಂಬ ಉದ್ದೇಶ ಅವರಲ್ಲಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಸಂಭವಿಸಿದ ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟದ ಬಗ್ಗೆ ಮಾತನಾಡಿದ ಅವರು ಕೆಲವರು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.
ಕೆಲವು ಪೊಲೀಸ್ ಸಿಬ್ಬಂದಿಯ ಬೆಂಬಲದೊಂದಿಗೆ ಇದೆಲ್ಲವನ್ನೂ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬಂಗಾಳದಲ್ಲಿ ಮೂರು ದಶಕಗಳ ಸಿಪಿಐ(ಎಂ) ಆಡಳಿತವನ್ನು ಸೋಲಿಸಿದ್ದೇನೆ. ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಜಾದವ್ಪುರ ವಿಶ್ವವಿದ್ಯಾನಿಲಯದಲ್ಲಿ ' ಗೋಲಿ ಮಾರೋ ' ಘೋಷಣೆಗಳನ್ನು ಕೂಗಿದ ಎಬಿವಿಪಿ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.
ಯುನಿವರ್ಸಿಟಿಯಲ್ಲಿ ದ್ವೇಷದ ಘೋಷಣೆಗಳಲ್ಲಿ ತೊಡಗಿರುವವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಮಮತಾ ಹೇಳಿದ್ದಾರೆ.
ಇಂತಹ ಘೋಷಣೆಗಳನ್ನು ಕೂಗುವವರು ಇದು ಬಂಗಾಳ ಎಂಬುದನ್ನು ಮರೆಯಬಾರದು. ಇದು ಉತ್ತರ ಪ್ರದೇಶ ಅಲ್ಲ ಎಂದು ಅವರು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications