ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನಾಗ್ಪುರದಲ್ಲಿ ಬಿಜೆಪಿ ಕಾರ್ಯಕರ್ತ ಮತ್ತು ಕುಟುಂಬಸ್ಥರ ಬರ್ಬರ ಹತ್ಯೆ
ನಾಗ್ಪುರ, ಜೂನ್ 11: ಓರ್ವ ಬಿಜೆಪಿ ಕಾರ್ಯಕರ್ತ ಮತ್ತು ಆತನ ಕುಟುಂಬದ ನಾಲ್ವರು ಸದಸ್ಯರು ಕೊಲೆಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ನಾಗ್ಪುರದ ಆರಾಧನ ನಗರ ಎಂಬಲ್ಲಿ ಘಟನೆ ನಡೆದಿದ್ದು, ಮೃತ ಬಿಜೆಪಿ ಕಾರ್ಯಕರ್ತನನ್ನು ಕಮಲಾಕರ್ ಪವನ್ಕರ್ ಎಂದು ಗುರುತಿಸಲಾಗಿದೆ.
ರಾಜೀವ್ ಹತ್ಯೆ ಮಾದರಿಯಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಮಾವೊವಾದಿಗಳ ಸಂಚು?
ಹತ್ಯೆಗೆ ರಾಜಕೀಯ ಅಥವಾ ವೈಯಕ್ತಿಕ ದ್ವೇಷ ಕಾರಣವೆ ಎಂಬ ಕುರಿತು ಸ್ಪಷ್ಟ ಮಾಹಿತಿ ಲಭ್ಯವಿಲ್ಲ. ಆರೋಪಿಗಳ ಕುರಿತೂ ಯಾವುದೇ ಸುಳಿವು ಪತ್ತೆಯಾಗಿಲ್ಲ.
ಕಮಲಾಕರ್ ಪವನ್ಕರ್ ಆತನ ಪತ್ನಿ, ತಾಯಿ ಮತ್ತು ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Comments
English summary
BJP worker Kamlakar Pawankar and four other members of his family murdered in Nagpur's Aradhana Nagar in Maharashtra
Story first published: Monday, June 11, 2018, 10:44 [IST]