ಮಣಿಪುರದಲ್ಲಿ ಬಿಜೆಪಿ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ
ನವದೆಹಲಿ, ಜನವರಿ 24: ಮಾಜಿ ಸೈನಿಕರ ಕೋಶದ ರಾಜ್ಯ ಸಂಚಾಲಕ ಹಾಗೂ ಬಿಜೆಪಿ ಕಾರ್ಯಕರ್ತ ಎನ್ನಲಾದ ಎಲ್.ರಾಮೇಶ್ವರ್ ಸಿಂಗ್ ಅವರನ್ನು ಮಂಗಳವಾರ ತೌಬಲ್ ಕ್ಷೇತ್ರ ಲೈಕೈಯಲ್ಲಿರುವ ಅವರ ನಿವಾಸದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಮಾಜಿ ಸೈನಿಕರ ಪ್ರಕೋಷ್ಠದ ರಾಜ್ಯ ಸಂಚಾಲಕ ಎಲ್.ರಾಮೇಶ್ವರ್ ಸಿಂಗ್ ಅವರ ಹತ್ಯೆಯ ಬಗ್ಗೆ ತಿಳಿದು ದುಃಖವಾಯಿತು. ಈ ಅಮಾನವೀಯ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಘೋರ ಅಪರಾಧ ಎಸಗಿದ ಆರೋಪಿಗಳನ್ನು ನ್ಯಾಯಾಂಗದ ಮುಂದೆ ತಂದು ತಕ್ಕ ಶಿಕ್ಷೆ ನೀಡಬೇಕು. ನಾವು ಸಮರ್ಪಿತ ಕಾರ್ಯಕರ್ತರನ್ನು ಕಳೆದುಕೊಂಡಿದ್ದೇವೆ ಎಂದು ಬಿಜೆಪಿ ಮಣಿಪುರ ಟ್ವೀಟ್ ಮಾಡಿದೆ.
ಎದೆಗೆ ಗುಂಡು ತಗುಲಿದ 50 ವರ್ಷದ ಸಿಂಗ್ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೃತರಾದರು ಎಂದು ತಿಳಿದು ಬಂದಿದೆ. ಈ ಬಗ್ಗೆ ನಾವು ಈ ಕ್ಷಣದಲ್ಲಿ ಇದರ ಹಿಂದೆ ಯಾರಿದ್ದಾರೆ ಎಂದು ಹೇಳುವ ಸ್ಥಿತಿಯಲ್ಲಿ ನಾವು ಇಲ್ಲ ಎಂದು ಮಣಿಪುರದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಾವುದೇ ನೋಂದಣಿ ಸಂಖ್ಯೆ ಇಲ್ಲದ ಎಸ್ಯುವಿ ಕಾರಿನಲ್ಲಿ ಬಂದ ಮೂವರು ಬಂದೂಕುಧಾರಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಆದರೆ ಪೊಲೀಸರ ಪ್ರಕಾರ ಇಬ್ಬರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಬಿಜೆಪಿ ನಾಯಕನ ನಿವಾಸದ ಬಳಿ ಎರಡು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದರು. ರಾಮೇಶ್ವರ್ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರೋಪಿಗಳನ್ನು ಹಿಡಿಯಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ತೌಬಲ್ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications