ಮೂರು ದಿನದಲ್ಲಿ 4.75 ಕೋಟಿ ಮತದಾರರನ್ನು ತಲುಪಲಿರುವ ಬಿಜೆಪಿ!
ನವದೆಹಲಿ, ನವೆಂಬರ್ 03: ರಾಜಸ್ಥಾನದ ವಿಧಾನಸಭೆ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಮೂರು ದಿನಗಳಲ್ಲಿ 4.75 ಕೋಟಿ ಮತದಾರರನ್ನು ತಲುಪಲು ಯೋಜನೆ ರೂಪಿಸಿಕೊಂಡಿರುವ ಬಿಜೆಪಿ, 'ಭೂತ್ ಮಹಾಸಂಪರ್ಕ ಅಭಿಯಾನ' ಹಮ್ಮಿಕೊಂಡಿದೆ.
ಪಕ್ಷದ ಹಿರಿಯ ನಾಯಕರು, ಪಕ್ಷದ ಉಸ್ತುವಾರ ಹೊತ್ತವರು ಸೇರಿದಂತೆ ಎಲ್ಲಾ ಘಟಾನುಘಟಿ ನಾಯಕರು ಈ ಅಭಿಯಾನದಲ್ಲಿ ಭಾಗವಹಿಸಿ, ಜನರಿಗೆ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ತಿಳಿಸಲಾಗುತ್ತಿದೆ. ಈಗಾಗಲೇ ಈ ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ವಸುಂಧರಾ ರಾಜೆ, ಗೃಹಮಂತ್ರಿ ಗುಲಾಬ್ ಚಂದ್ರ ಕಟಾರಿಯಾ ಸೇರಿದಂತೆ ಗಣ್ಯರು ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿದ್ದಾರೆ.

ಮೂರು ದಿನದಲ್ಲಿ ನಾಲ್ಕೂ ಮುಕ್ಕಾಲು ಕೋಟಿ ಮತದಾರರು
ಮೂರೇ ಮೂರು ದಿನಗಳಲ್ಲಿ 4.75 ಕೋಟಿ ಮತದಾರರನ್ನು ತಲುಪಲು ನಿರ್ಧರಿಸುವ ಬಿಜೆಪಿ, ತನ್ನ ಬೇರೆ ಬೇರೆ ನಾಯಕರನ್ನು ವಿವಿಧ ಕ್ಷೇತ್ರಗಳಿಗೆ ಕಳಿಸಿ, ಪಕ್ಷದ ಜನಪರ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರೂ ಈ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ.

ಅಭಿಯಾನಕ್ಕೆ ನಾಂದಿ ಹಾಡಿದ ರಾಜೆ
ಹಾಲಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಜಲ್ವಾಡ್ ದಿಂದ ಅಭಿಯಾನ ಆರಂಭಿಸಿದ್ದರೆ, ಗೃಹ ಮಂತ್ರಿ ಗುಲಾಬ್ ಚಂದ್ರ ಕಟಾರಿಯಾ ಉದಯಪುರದಿಂದ ಅಭಿಯಾನಕ್ಕೆ ನಾಂದಿ ಹಾಡಿದ್ದಾರೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಜೈಪುರದ ಗೋವಿಂದೇವ್ ದೇವಾಲಯದಿಂದ ಅಭಿಯಾನ ಆರಂಭಿಸಿದ್ದಾರೆ.

ಭಿತ್ತಿಪತ್ರ ಹಂಚುತ್ತಿರುವ ಬಿಜೆಪಿ
ರಾಜ್ಯದ 200 ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳಲ್ಲೂ ಮೂರು ದಿನಗಳಲ್ಲಿ ಅಭಿಯಾನ ಮುಗಿಸಲಿರುವ ಬಿಜೆಪಿ, 'ನಾನು ಬಿಜೆಪಿಯೊಂದಿಗಿದ್ದೇನೆ' ಎಂಬ ಸ್ಟಿಕ್ಕರ್ ಗಳನ್ನು ಸಹ ಜನರಿಗೆ ನೀಡುತ್ತಿದೆ. ಜೊತೆಗೆ ಸರ್ಕಾರದ ವಿವಿಧ ಕಾರ್ಯಕ್ರಮಗಳ ಬಗ್ಗೆ ಮತ್ತು ನಾಲ್ಕೂ ಮುಕ್ಕಾಲು ವರ್ಷಗಳ ಸಾಧನೆಯನ್ನು ವಿವರಿಸುವ ಭಿತ್ತಿಪತ್ರಗಳನ್ನು ಹಂಚುತ್ತಿದೆ. ಇವೆಲ್ಲ ಬಿಜೆಪಿಗೆ ಎಷ್ಟರಮಟ್ಟಿಗೆ ಸಹಾಯಕವಾಗಲಿವೆ ಎಂಬುದನ್ನು ಕಾದುನೋಡಬೇಕಿದೆ.

ರಾಜಸ್ಥಾನದಲ್ಲಿ ಚುನಾವಣೆ ಎಂದು?
ರಾಜಸ್ಥಾನದಲ್ಲಿ ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಹೊರಬೀಳಲಿದೆ. 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ಪಕ್ಷವೊಂದು ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 101.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications