Get Updates
Get notified of breaking news, exclusive insights, and must-see stories!

ತೆಲಂಗಾಣ ಶಾಸಕರ ಖರೀದಿ ಪ್ರಕರಣದಲ್ಲಿ ಬಿಎಲ್‌ ಸಂತೋಷ್‌ ವಿಚಾರಣೆ ಇಲ್ಲ

ಹೈದರಾಬಾದ್‌, ನವೆಂಬರ್‌ 25: ತೆಲಂಗಾಣದ ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ ಅವರನ್ನು ಸದ್ಯಕ್ಕೆ ಪ್ರಶ್ನಿಸಲಾಗುವುದಿಲ್ಲ ಎಂದು ತೆಲಂಗಾಣ ಹೈಕೋರ್ಟ್ ತಿಳಿಸಿದೆ.

ಬಿಎಲ್‌ ಸಂತೋಷ್‌ ಅವರಿಗೆ ನೀಡಲಾದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ಗೆ ಡಿಸೆಂಬರ್ 5 ರವರೆಗೆ ತಡೆಯಾಜ್ಞೆ ನೀಡಿದೆ. ತೆಲಂಗಾಣ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್‌ಗೆ ನವೆಂಬರ್ 26 ಅಥವಾ ನವೆಂಬರ್ 28 ರಂದು ಹಾಜರಾಗುವಂತೆ ಎಸ್‌ಐಟಿ ಎರಡನೇ ನೋಟಿಸ್ ನೀಡಿದ ನಂತರ ಬಿಎಲ್ ಸಂತೋಷ್ ಅವರು ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಅವರು ಇನ್ನಷ್ಟೆ ತನಿಖಾ ತಂಡದ ಮುಂದೆ ಹಾಜರಾಗಬೇಕಿದೆ.

ಸಂತೋಷ್ ಅವರು ಗುಜರಾತ್‌ ಚುನಾವಣಾ ಸಂಬಂಧಿತ ಕೆಲಸದಲ್ಲಿ ನಿರತರಾಗಿದ್ದರು. ದೆಹಲಿ ಪೊಲೀಸರ ಮೂಲಕ ಅವರಿಗೆ ನೋಟಿಸ್‌ ಜಾರಿ ಮಾಡಬೇಕಿತ್ತು. ಸಂತೋಷ್‌ ಅವರು ನವೆಂಬರ್ 16 ರಂದು ಮೊದಲ ನೋಟಿಸ್ ಸ್ವೀಕರಿಸಲಿಲ್ಲ. ನಂತರ ನ್ಯಾಯಾಲಯವು ಅವರಿಗೆ ಇ-ಮೇಲ್ ಮತ್ತು ವಾಟ್ಸಪ್ ಮೂಲಕ ಕಳುಹಿಸಬಹುದು ಎಂದು ಹೇಳಿತು. ಆಗ ನವೆಂಬರ್ 26 ಅಥವಾ ನವೆಂಬರ್ 28 ರಂದು ವಿಚಾರಣೆಗಾಗಿ ಎಸ್‌ಐಟಿ ಮುಂದೆ ಹಾಜರಾಗುವಂತೆ ತಿಳಿಸಲಾಯಿತು.

ಬಿಜೆಪಿ ವಕೀಲ ಕರುಣಾ ಸಾಗರ್, ಸೆಕ್ಷನ್ 41ರ ಅಡಿಯಲ್ಲಿ ನೋಟಿಸ್ ನೀಡಲು ನ್ಯಾಯಾಲಯವು ಸಾಕಷ್ಟು ಆಧಾರವನ್ನು ಒದಗಿಸಿಲ್ಲ ಎಂದು ಹೇಳಿದರು. ಎಸ್‌ಐಟಿ ಗುರುವಾರ ಹೈದರಾಬಾದ್‌ನ ವಿಶೇಷ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿದ್ದು, ಸಂತೋಷ್ ಮತ್ತು ಕೇರಳದ ಇಬ್ಬರು ವ್ಯಕ್ತಿಗಳಾದ ಜಗ್ಗು ಸ್ವಾಮಿ, ತುಷಾರ್ ವೆಲ್ಲಪಲ್ಲಿ ಹಾಗೂ ಬಿ ಶ್ರೀನಿವಾಸ್ ಅವರ ಹೆಸರನ್ನು ಆರೋಪಿಗಳಾಗಿ ಸೇರಿಸಿದೆ. ಪ್ರಕರಣ ಮೂರು ಜನರು ಎಸ್‌ಐಟಿಯಿಂದ ತಪ್ಪಿಸಿಕೊಳ್ಳುತ್ತಿದ್ದರು ಮತ್ತು ವಿಚಾರಣೆಗೆ ಹಾಜರಾಗುತ್ತಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ನಂದ ಕುಮಾರ್ ಮತ್ತು ಸಿಂಹಯಾಜಿ ಸ್ವಾಮಿ ಎಂಬ ಮೂವರನ್ನು ಈಗಾಗಲೇ ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿದ್ದು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಶಾಸಕರಿಗೆ ತಲಾ 100 ಕೋಟಿ ಆಫರ್ ನೀಡಿದ ಆರೋಪದಲ್ಲಿ ಕಳೆದ ತಿಂಗಳು ತೋಟದ ಮನೆಯಲ್ಲಿ ಬಂಧಿಸಲಾಗಿತ್ತು. ಟಿಆರ್‌ಎಸ್ ಶಾಸಕ ಪೈಲಟ್ ರೋಹಿತ್ ರೆಡ್ಡಿ ಅಕ್ಟೋಬರ್ 26 ರಂದು ದೂರು ದಾಖಲಿಸಿದ್ದರು.

ಟಿಆರ್‌ಎಸ್ ತೊರೆಯುವಂತೆ ಆಫರ್‌

ಟಿಆರ್‌ಎಸ್ ತೊರೆಯುವಂತೆ ಆಫರ್‌

ಆರೋಪಿಗಳು ತನಗೆ ತಲಾ 100 ಕೋಟಿ ನೀಡುವುದಾಗಿ ಆರೋಪಿಸಿದ್ದು, ಇದಕ್ಕೆ ಪ್ರತಿಯಾಗಿ ಶಾಸಕರು ಟಿಆರ್‌ಎಸ್ ತೊರೆದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂದು ರೋಹಿತ್ ರೆಡ್ಡಿ ಆರೋಪಿಸಿದ್ದಾರೆ. ಸೈಬರಾಬಾದ್ ಪೊಲೀಸರು ಮೊದಲು ಸೋರಿಕೆಯಾದ ಆಡಿಯೊ ಟೇಪ್‌ಗಳನ್ನು ಆಧರಿಸಿ ಪ್ರಕರಣ ದಾಖಲಿಸಿದ್ದಾರೆ. ನಂತರ ಮುಖ್ಯಮಂತ್ರಿ ಚಂದ್ರಶೇಖರ್‌ ರಾವ್ ಹಂಚಿಕೊಂಡ ವಿಡಿಯೋ ತುಣುಕುಗಳನ್ನು ಸಹ ದಾಖಲಿಸಿದ್ದಾರೆ.

ನ್ಯಾಯಾಧೀಶರಿಂದ ಮೇಲ್ವಿಚಾರಣೆ ಮಾಡಲ್ಲ

ನ್ಯಾಯಾಧೀಶರಿಂದ ಮೇಲ್ವಿಚಾರಣೆ ಮಾಡಲ್ಲ

ತೆಲಂಗಾಣ ಸರ್ಕಾರ ನವೆಂಬರ್ 9ರಂದು ಶಾಸಕರ ಬೇಟೆಯ ಆರೋಪದ ಬಗ್ಗೆ ತನಿಖೆ ನಡೆಸಲು ಏಳು ಸದಸ್ಯರ ಎಸ್‌ಐಟಿ ತಂಡವನ್ನು ರಚಿಸಲು ಆದೇಶಿಸಿದೆ. ಪ್ರಕರಣದ ಕುರಿತು ಸಿಬಿಐ ತನಿಖೆಗೆ ಬಿಜೆಪಿ ಆಗ್ರಹಿಸಿತ್ತು. ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ನೇತೃತ್ವದ ಎಸ್‌ಐಟಿ ತನಿಖೆಯನ್ನು ಮುಂದುವರಿಸಬಹುದು ಮತ್ತು ಅದನ್ನು ನ್ಯಾಯಾಧೀಶರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಹೈಕೋರ್ಟ್ ಹೇಳಿತ್ತು. ನವೆಂಬರ್ 21ರಂದು ಸುಪ್ರೀಂ ತನ್ನ ಆದೇಶದಲ್ಲಿ ಹೈಕೋರ್ಟ್ ನ್ಯಾಯಾಧೀಶರಿಂದ ಮೇಲ್ವಿಚಾರಣೆ ಮಾಡಲಾಗುವುದಿಲ್ಲ ಎಂದು ಹೇಳಿತು. ಸಿಬಿಐ ತನಿಖೆಗೆ ಕೇಳುವ ಮನವಿಯನ್ನು ಸ್ವತಂತ್ರವಾಗಿ ಪರಿಶೀಲಿಸುವಂತೆ ಹೈಕೋರ್ಟ್‌ಗೆ ಕೇಳಿಕೊಂಡಿದೆ.

ರಾಜಕೀಯ ಪೈಪೋಟಿ ಆರಂಭ

ರಾಜಕೀಯ ಪೈಪೋಟಿ ಆರಂಭ

2024 ರಲ್ಲಿ ಪಿಎಂ ಮೋದಿ ಮತ್ತು ಬಿಜೆಪಿ ವಿರುದ್ಧ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಲು ಮುಖ್ಯಮಂತ್ರಿ ರಾವ್ ಇತ್ತೀಚೆಗೆ ಟಿಆರ್‌ಎಸ್ ಅನ್ನು ಭಾರತ್ ರಾಷ್ಟ್ರ ಸಮಿತಿ ಎಂದು ಮರುನಾಮಕರಣ ಮಾಡಿದ್ದರಿಂದ ರಾಜಕೀಯ ಪೈಪೋಟಿ ಶುರುವಾಗಿ ಶಾಸಕರ ಖರೀದಿ ಆರೋಪಗಳು ಕೇಳಿಬಂದಿವೆ. ಕಳೆದ ವಾರ, ಗಣಿಗಾರಿಕೆ ವ್ಯವಹಾರದಲ್ಲಿ ತೊಡಗಿದ್ದ ತೆಲಂಗಾಣ ಸಚಿವ ಗಂಗುಲಾ ಕಮಲಾಕರ್ ಅವರ ಮೇಲೆ ಇಡಿ ತಂಡಗಳು ಕರೀಂನಗರದಲ್ಲಿ ಅವರ ಮನೆ ಮೇಲೆ ದಾಳಿ ನಡೆಸಿದ್ದವು. ತೆಲಂಗಾಣದ ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಕಮಲಾಕರ್ ಅವರ ಕುಟುಂಬವು ಹಲವಾರು ಕಾಲೇಜುಗಳನ್ನು ನಡೆಸುತ್ತಿದೆ.

ಮಲ್ಲಾ ರೆಡ್ಡಿ ಮಗ ಮಹೇಂದರ್ ರೆಡ್ಡಿ ಆಸ್ಪತ್ರೆಗೆ ದಾಖಲು

ಮಲ್ಲಾ ರೆಡ್ಡಿ ಮಗ ಮಹೇಂದರ್ ರೆಡ್ಡಿ ಆಸ್ಪತ್ರೆಗೆ ದಾಖಲು

ಐಟಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಮಲ್ಲಾ ರೆಡ್ಡಿ ನಿನ್ನೆ ಪೊಲೀಸ್ ದೂರು ದಾಖಲಿಸಿದ್ದರು. ಇದರಿಂದ ಹಿರಿಯ ಮಗ ಮಹೇಂದರ್ ರೆಡ್ಡಿ ಆಸ್ಪತ್ರೆಗೆ ದಾಖಲಾಗಬೇಕಾಯಿತು. ಮಲ್ಲಾ ರೆಡ್ಡಿ ಅವರ ಎರಡನೇ ಪುತ್ರ ಭದ್ರ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಪ್ರಕರಣದ ಮುಂದಿನ ವಿಚಾರಣೆಗೆ ನಾಲ್ಕು ವಾರಗಳ ತಡೆ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+