ಅರುಣ್ ಜೇಟ್ಲಿ ವಿರುದ್ಧ ತಿರುಗಿಬಿದ್ದ ಕಾಂಗ್ರೆಸ್ಸಿಗರು
ನವದೆಹಲಿ, ಅ.22: ವಿದೇಶದಲ್ಲಿರುವ ಬ್ಯಾಂಕುಗಳಲ್ಲಿ ಅಕ್ರಮವಾಗಿ ಹಣ ಇಟ್ಟಿರುವವರ ಹೆಸರು ಬಹಿರಂಗವಾದರೆ ಕಾಂಗ್ರೆಸ್ ಮುಜುಗರಪಟ್ಟುಕೊಳ್ಳುತ್ತದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ತಿರುಗಿಬಿದ್ದಿದ್ದು, ವಾಕ್ ಪ್ರಹಾರ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡ ಅಜಯ್ ಮಾಕೆನ್, ದಿಗ್ವಿಜಯ್ ಸಿಂಗ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಜೀವ್ ಸೇರಿದಂತೆ ಅನೇಕ ನಾಯಕರು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಬಳಸಿಕೊಂಡು ಅರುಣ್ ಜೇಟ್ಲಿ ಹಾಗೂ ಮೋದಿ ಸರ್ಕಾರದ ವಿರುದ್ಧ ಚುಚ್ಚು ನುಡಿಗಳನ್ನಾಡಿದ್ದಾರೆ. ನಿಮಗೆ ತಾಕತ್ತಿದ್ದರೆ ಕಪ್ಪು ಹಣ ಹೊಂದಿರುವ ಖಾತೆದಾರರ ಪೂರ್ಣ ವಿವರ ಬಹಿರಂಗಗೊಳಿಸಿ, ಈ ದೇಶದಲ್ಲಿ ಸರ್ಕಾರ ಇದೆ ಎಂದು ತೋರಿಸಲಿ.
ಕೇವಲ 136 ಜನರ ಹೆಸರನ್ನ ಮಾತ್ರ ಬಹಿರಂಗಪಡಿಸುವುದಕ್ಕೆ ಸೀಮಿತವಾಗುವುದು ಬೇಡ. ಅರ್ಧಸತ್ಯ ಎಂದಿಗೂ ಸತ್ಯವಾಗದು ಎಂಬುದು ಪ್ರಧಾನಿಗೆ ಗೊತ್ತಿರಲಿ, ಮೋದಿ ಅವರೇ ಕಪ್ಪು ಹಣ ಆದಷ್ಟು ಬೇಗ ಭಾರತಕ್ಕೆ ತಂದು ತಲಾ 15 ಲಕ್ಷ ರು ಯಾವಾಗ ಹಂಚುತ್ತೀರಾ? ಎಂದು ಮಾಜಿ ಕೇಂದ್ರ ಸಚಿವ ಅಜಯ್ ಮಾಕೆನ್ ಪ್ರಶ್ನಿಸಿದ್ದಾರೆ.

ಹೇಳಿದ ಮಾತಿಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಭ್ರಷ್ಟಾಚಾರ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ಸಿಗೆ ಯಾವುದೇ ಪಕ್ಷಭೇದ ಇಲ್ಲ. ಸರ್ಕಾರಕ್ಕೆ ಧಮ್ಮಿದ್ದರೆ ಕಪ್ಪು ಹಣ ಹೊಂದಿದ ಎಲ್ಲರ ಹೆಸರುಗಳನ್ನೂ ಬಹಿರಂಗಪಡಿಸಲಿ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.
Why only 136 names out of 800? Why the half truth? We want the complete truth: Ajay Maken on Black money issue pic.twitter.com/g4KVqdCKr2
— ANI (@ANI_news) October 22, 2014 ಕಾಂಗ್ರೆಸ್ ಪಕ್ಷದ ಮೇಲೆ ಯಾವ ಬೆದರಿಕೆಯೂ ಕೆಲಸ ಮಾಡದು. ಕಾಂಗ್ರೆಸ್ ಪಕ್ಷ ವ್ಯಕ್ತಿಗಿಂತ ದೊಡ್ಡದು. ಕಪ್ಪು ಹಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಜಯ್ ಹೇಳಿದ್ದಾರೆ.
"ಮೋಸಗಾರ ಮೋಸಗಾರನೇ, ಅವನು ಕಾಂಗ್ರೆಸ್ಸಿಗನೂ ಅಲ್ಲ ಬಿಜೆಪಿ ಯವನೂ ಅಲ್ಲ. ಈ ಮೋಸಗಾರರ ಹೆಸರನ್ನು ಬಹಿರಂಗಪಡಿಸಲು ಜೇಟ್ಲಿಯವರಿಗೆ ತಡೆಯುತ್ತಿರುವುದೇನು? ಎಂದು ಪ್ರಶ್ನಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ರಾಜೀವ್ ಸತವ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
Modi Ji entire nation is waiting for you to fulfill your promise of bringing back black money and give 15 lakh to all: Ajay Maken, Cong
— ANI (@ANI_news) October 22, 2014 ಎಐಸಿಸಿ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ತಮ್ಮ ಟ್ವೀಟ್ ನಲ್ಲಿ "ಜನ ಧನ ಯೋಜನೆಯಡಿ ಇದು ದೀಪಾವಳಿಯ ಕೊಡುಗೆಯೂ ಅಥವಾ 2019ರವರೆಗೆ ಇನ್ನೂ ಕಾಯಬೇಕೋ! ಇದು ಅದ್ಭುತ ಫೇಕುಯಿಸಮ್(FEKUISM)" ಎಂದು ಕುಹಕವಾಡಿದ್ದಾರೆ. ಹಣಕಾಸು ಮಂತ್ರಿ ಜನರಗೆ ಸುಳ್ಳು ಹೇಳುವುದನ್ನ ನಿಲ್ಲಿಸಿ, ಮೋದಿ ತಮ್ಮ ಪ್ರಚಾರ ಸಭೆಗಳಲ್ಲಿ ವಚನ ಕೊಟ್ಟಂತೆ ಎಲ್ಲ ನಾಗರಿಕರ ಅಕೌಂಟ್ ನಲ್ಲಿ 3 ಲಕ್ಷ ಯಾವಾಗ ಜಮಾಯಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ. (ಪಿಟಿಐ)
FM instead of bluffing people should tell us when he is depositing 3 L in a/c of every citizen as promised by Modi in his campaign speeches.
— digvijaya singh (@digvijaya_28) October 22, 2014 -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications