ಹರಿಯಾಣ ರೈತರ ಮೇಲೆ ಲಾಠಿ ಚಾರ್ಜ್: 'ಮತ್ತೆ ರಕ್ತ ಹರಿದಿದೆ' ಎಂದ ರಾಹುಲ್ ಗಾಂಧಿ
ನವದೆಹಲಿ, ಆಗಸ್ಟ್ 28: ಹರಿಯಾಣದ ಕರ್ನಾಲ್ ಜಿಲ್ಲೆಯ ರೈತರ ವಿರುದ್ಧ "ಕ್ರೂರ" ಪೋಲೀಸ್ ಲಾಠಿ ಚಾರ್ಜ್ ಅನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶನಿವಾರ ತೀವ್ರವಾಗಿ ವಿರೋಧ ಮಾಡಿದ್ದಾರೆ. ಹಿಂದಿಯಲ್ಲಿ ಎರಡು ಸಾಲುಗಳ ಟ್ವೀಟ್ ಮಾಡಿದ ರಾಹುಲ್ ಗಾಂಧಿ "ಮತ್ತೆ ರಕ್ತ ಹರಿದಿದೆ" ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿಯವರು ಹಿಂಸಾತ್ಮಕ ಛಾಯಾಚಿತ್ರವನ್ನು ಟ್ವೀಟ್ ಮಾಡಿದ್ದು, ಆ ಚಿತ್ರದಲ್ಲಿ ಬಿಳಿ ಕುರ್ತಾ ಪೈಜಾಮಾ ರಕ್ತದಿಂದ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿದೆ. ಹಾಗೆಯೇ ರೈತರ ತಲೆಯ ಮೇಲೆ ಗಾಯವಾಗಿದ್ದು, ಬಟ್ಟೆಯು ರಕ್ತದಿಂದ ತೋಯ್ದು ಹೋಗಿದೆ. ಇನ್ನಿಬ್ಬರು ಆ ವ್ಯಕ್ತಿಯನ್ನು ಕರೆದುಕೊಂಡು ಹೋಗುತ್ತಿರುವುದು ಚಿತ್ರದಲ್ಲಿ ಕಂಡು ಬಂದಿದೆ. ಈ ಚಿತ್ರದೊಂದಿಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ಮತ್ತೊಮ್ಮೆ ರೈತರ ರಕ್ತ ಹರಿದಿದೆ ಮತ್ತು ಭಾರತ ನಾಚಿಕೆಯಿಂದ ತಲೆ ಬಾಗಿದೆ," ಎಂದು ಹೇಳಿದ್ದಾರೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದಲ್ಲಿ ನಡೆದ ಸಭೆಯ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ರೈತರು ರಾಜ್ಯ ಬಿಜೆಪಿ ಮುಖ್ಯಸ್ಥ ಒಪಿ ಧಂಕರ್ರನ್ನು ತಡೆಯಲು ಯತ್ನ ಮಾಡಿದ ಸಂದರ್ಭದಲ್ಲಿ ರೈತರ ಮೇಲೆ ಬಸ್ತಾರಾ ಟೋಲ್ ಪ್ಲಾಜಾದ ಬಳಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಲಾದ ಚಿತ್ರದಲ್ಲಿ ರೈತರು ರಕ್ತಸಿಕ್ತ ಬಟ್ಟೆಯಲ್ಲಿ ಇರುವುದು ಕಂಡು ಬಂದಿದೆ. ಒಂದು ವೀಡಿಯೋದಲ್ಲಿ ಇಬ್ಬರು ಪೋಲಿಸರು ರಕ್ತಸಿಕ್ತ ಬಟ್ಟೆಯಲ್ಲಿದ್ದ ರೈತನನ್ನು ಎಳೆದಾಡುತ್ತಿರುವುದು ತೋರಿಸಿದೆ. ಈ ಲಾಠಿ ಚಾರ್ಚ್ ಕಾರಣದಿಂದಾಗಿ ಆಕ್ರೋಶಕ್ಕೆ ಒಳಗಾಗಿರುವ ರೈತರು ರಾಜ್ಯಾದ್ಯಂತ ಪ್ರಮುಖ ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ತಡೆ ಮಾಡಿದ್ದಾರೆ. ಹಾಗೆಯೇ ರೈತರು ಬಂಧಿತರನ್ನು ಬಿಡುಗಡೆ ಮಾಡುವಂತೆ ಹಾಗೂ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸಲು ಒಟ್ಟಾಗಿರುವ ಅನೇಕ ರೈತರ ಗುಂಪು ಸಂಯುಕ್ತ ಕಿಸಾನ್ ಮೋರ್ಚಾ ಪೊಲೀಸರ ಈ "ಕ್ರೂರ" ಕ್ರಮಗಳಿಗಾಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ರೈತರು ಈ ಪೊಲೀಸರ ಲಾಠಿ ಚಾರ್ಚ್ ವಿರುದ್ದ ನಡೆಸಿದ ಪ್ರತಿಭಟನೆ ನಡೆಸಿದ್ದು ಇದರಿಂದಾಗಿ ದೆಹಲಿ-ಅಮೃತಸರ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಸಂಚಾರದ ಮೇಲೆ ಪರಿಣಾಮ ಬೀರಿದೆ. ಹಾಗೆಯೇ ಶಂಭು ಟೋಲ್ ಪ್ಲಾಜಾದಲ್ಲಿ ಸಂಚಾರದಟ್ಟನೆ ಉಂಟಾಗಿದೆ.
ಇನ್ನು ರಾಹುಲ್ ಗಾಂಧಿಯನ್ನು ಹೊರತುಪಡಿಸಿ, ಕಾಂಗ್ರೆಸ್ನ ಹರಿಯಾಣ ಮುಖ್ಯಸ್ಥರು ಕೂಡ ಈ ಕ್ರೂರ ಲಾಠಿಚಾರ್ಚ್ ಅನ್ನು ಖಂಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಹೇಳಿಕೆ ನೀಡಿರುವ ಕುಮಾರಿ ಸೆಲ್ಜಾ, "ಕರ್ನಾಲ್ನಲ್ಲಿ ನಮ್ಮ ರೈತರ ಮೇಲೆ ಲಾಠಿ ಚಾರ್ಚ್ ನಡೆದಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ. ಕಾಂಗ್ರೆಸ್ ಪಕ್ಷವು ಈ ದಾಳಿಯನ್ನು ಪ್ರಬಲವಾಗಿ ಖಂಡನೆ ಮಾಡುತ್ತದೆ. ಇದು ಬಿಜೆಪಿ ರೈತರ ಬಗ್ಗೆ ತೋರುವ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ," ಎಂದು ಆರೋಪ ಮಾಡಿದ್ದಾರೆ. ಹಾಗೆಯೇ ವೈರಲ್ ವಿಡಿಯೋವನ್ನು ಕೂಡಾ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಕರ್ನಾಲ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಯುಷ್ ಸಿನ್ಹಾ "ಅವರ (ರೈತರ) ತಲೆಯನ್ನು ಹೊಡೆಯಿರಿ" ಎಂದು ಪೊಲೀಸರಿಗೆ ಹೇಳುವುದು ಕಂಡು ಬಂದಿದೆ.
ಕಳೆದ ನವೆಂಬರ್ 26 ರಿಂದ ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ದ ರೈತರು ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆಗೆ ಕಾಂಗ್ರೆಸ್, ಸಿಪಿಐಎಂ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಬೆಂಬಲವನ್ನು ವ್ಯಕ್ತಪಡಿಸಿದೆ. ಹಾಗೆಯೇ ಇತ್ತೀಚೆಗೆ ನಡೆದ ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ರೈತರ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯ ಮಾಡಿದ್ದು ಈ ಸಂದರ್ಭ ನಡೆದ ಗದ್ದಲದಲ್ಲಿ ಪದೇ ಪದೇ ಅಧಿವೇಶನವು ಸ್ಥಗಿತವಾಗಿದೆ. ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ರಾಹುಲ್ ಗಾಂಧಿ ಸಂಸತ್ತಿಗೆ ಟ್ರಾಕ್ಟರ್ ಓಡಿಸಿಕೊಂಡು ಬಂದಿದ್ದರು. ಹಾಗೆಯೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ 14 ಇತರ ವಿರೋಧ ಪಕ್ಷದ ನಾಯಕರು ದೆಹಲಿಯ ಜಂತರ್ ಮಂತರ್ನಲ್ಲಿ ಜಂಟಿ ಪ್ರತಿಭಟನೆ ನಡೆಸಿದರು.
(ಒನ್ ಇಂಡಿಯಾ ಸುದ್ದಿ)
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications