BMC Election 2026: ಮುಂಬೈ ಸೇರಿ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳಲ್ಲಿ ಯಾರಿಗೆ ಎಷ್ಟು ಸ್ಥಾನ? ಇಲ್ಲಿದೆ ಎಕ್ಸಿಟ್ ಪೋಲ್ ವಿವರ
ನವದೆಹಲಿ: ಮಹಾರಾಷ್ಟ್ರದ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿ ಒಟ್ಟು 28 ಪಾಲಿಕೆಗಳಿಗೆ ಗುರುವಾರ (ಜ. 15) ಚುನಾವಣೆ ನಡೆಯಿತು. ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಆಕ್ಸಿಸ್ ಮೈ ಇಂಡಿಯಾದ ನಿರ್ಗಮನ ಸಮೀಕ್ಷೆ (BMC Axis My India Exit Poll 2026) ಪ್ರಕಟಿಸಿತು. ಅದರ ಪ್ರಕಾರ, ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಸಾಧಿಸಲಿದೆ. ಉದ್ಧವ್ ಠಾಕ್ರೆ ಸಹೋದರರಿಗೆ ಹಿನ್ನಡೆ ಉಂಟಾಗಲಿದೆ ಎಂದು ಭವಿಷ್ಯ ಹೊರ ಬಿದ್ದಿದೆ.
ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಒಳಗೊಂಡ ಬಿಜೆಪಿ ಮೈತ್ರಿಕೂಟವು ಒಟ್ಟು 227 ಸ್ಥಾನಗಳಲ್ಲಿ 131 ರಿಂದ 151 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಮುಂಬೈ, ಪುಣೆ ಹಾಗೂ ನಾಗಪುರ ವ್ಯಾಪ್ತಿಯ ಸ್ಥಳೀಯ ಪಾಲಿಕೆಯಲ್ಲಿ ಮತ್ತೆ ಕೇಸರಿ ಪಡೆಯ ಅಧಿಕೃತ ವಿಜೃಂಭಿಸಲಿದೆ.

ಭಾರತದ ಇತರ ರಾಜ್ಯಗಳಿಗಿಂತ ಮಹಾರಾಷ್ಟ್ರದ ಮುಂಬೈನ ನಾಗರಿಕ ಸಂಸ್ಥೆಯ ಬಜೆಟ್ ಗಾತ್ರ ದೊಡ್ಡದು ಎನ್ನಲಾಗಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಎಂಎನ್ಎಸ್ ಮತ್ತು ಎನ್ಸಿಪಿ (ಎಸ್ಪಿ) ಗಳನ್ನು ಒಳಗೊಂಡಿರುವ ಯುಬಿಟಿ+ ಬ್ಲಾಕ್ 58-68 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಉಳಿದಂತೆ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವು ಕೇವಲ 12-16 ಸೀಟುಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ. ಇತರರು ಪಕ್ಷಗಳಿಗೆ ಆರರಿಂದ 12 ಸ್ಥಾನಗಳ ಲಭಿಸಬಹುದೆಂದು ಈ ಎಕ್ಸಿಟ್ ಪೋಲ್ ಸಮೀಕ್ಷೆಗಳು ತಿಳಿಸಿವೆ.
ಕೇವಲ ಶೇ. 46-50 ರಷ್ಟು ಮತದಾನ
ಇಂದು ನಡೆದ ಮುಂಬೈ ಮಹಾರಾಷ್ಟ್ರ ಸೇರಿದಂತೆ 28 ನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಒಟ್ಟು ಕೇವಲ ಶೇ. 46-50 ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು 2017 ರ ಇದೇ ಪಾಲಿಕೆ ಚುನಾವಣೆಯಲ್ಲಿ ಮುಂಬೈನಲ್ಲಿ ದಾಖಲಾದ ಶೇ. 55.53 ಕ್ಕಿಂತ ಕಡಿಮೆ ಆಗಿದೆ. ಬೆಳಗ್ಗೆ 7.30ಕ್ಕೆ ಮತದಾನ ಆರಂಭವಾಯಿತು. ಸೂಕ್ತ ಪೊಲೀಸ್ ಬಿಗಿ ಭದ್ರತೆ ನಡುವೆ ಸುಸೂತ್ರವಾಗಿ ಮತದಾನ ನಡೆಯಿತು. ಸಂಜೆ 5.30 ಗಂಟೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿತು. ಚುನಾವಣೆ ಸಂಬಂಧ 25,000 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು.
ತೀವ್ರ ಪೈಪೋಟಿಗೆ ಸಾಕ್ಷಿಯಾದ ಚುನಾವಣೆ
ಮಹಾರಾಷ್ಟ್ರಗೆ ಸಂಬಂಧಿಸಿದಂತೆ ಕೋರ್ಟ್ ಸಾಂಕ್ರಾಮಿಕ ರೋಗ, ಒಬಿಸಿ ಮೀಸಲಾತಿ ಮತ್ತು ವಾರ್ಡ್ ಪುನರ್ವಿಂಗಡಣೆ ಕುರಿತು ನೀಡಿದ ತೀರ್ಪುಗಳಿಂದ ಉಂಟಾದ ವಿಳಂಬದ ಬಳಿಕ ಒಂಬತ್ತು ವರ್ಷಗಳ ಅಂತರದ ನಂತರ ಈ ಬಿಎಂಸಿ ಚುನಾವಣೆ ನಡೆದಿದೆ. ಆಡಳಿತಾರೂಢ ಮಹಾಯುತಿ ಹಾಗೂ ಮತ್ತೆ ಒಂದಾಗಿರುವ ಉದ್ಧವ್ ಠಾಕ್ರೆ ಸೋದರರ ಮಧ್ಯ ತೀವ್ರ ಪೈಪೋಟಿ ನಡೆಯಿತು. ಈ ಚುನಾವಣೆಯು ಮತ್ತೊಂದು ಹಂತದ ಸ್ಪರ್ಧೆಗೆ ಸಾಕ್ಷಿ ಆಯಿತು. ಈ ಬಾರಿ ಮುಂಬೈನಲ್ಲಿ 1,700 ಕ್ಕೂ ಅಧಿಕ ಅಭ್ಯರ್ಥಿಗಳು ಸ್ಪರ್ಧಿಸಿದ್ದು ವಿಶೇಷವಾಗಿತ್ತು.
ಇನ್ನೂ ಈ ಚುನಾವಣೆಯಲ್ಲಿ ಮತದಾರರ ಬೆರಳಿಗೆ ಹಾಕಿ ಶಾಹಿ ಅಳಿಸುತ್ತದೆ. ಸುಲಭವಾಗಿ ಅದನ್ನು ತೆಗೆಯಬಹುದಾಗಿದೆ ಎಂಬ ಹೇಳಿಕೆಗಳು ಈ ಚುನಾವಣೆಯಲ್ಲಿ ಭಾರೀ ಸದ್ದು ಮಾಡಿದವು. ರಾಜ್ಯ ಚುನಾವಣಾ ಆಯೋಗ ಈ ಆರೋಪ ತಿರಸ್ಕೃರಿಸಿತು. ವಿರೋಧ ಪಕ್ಷದ ನಾಯಕರಾದ ಉದ್ಧವ್ ಮತ್ತು ರಾಜ್ ಠಾಕ್ರೆ ಚುನಾವಣಾ ಅಕ್ರಮಗಳ ಕುರಿತು ಆಯೋಗದ ಮೇಲೆ ಗಂಭೀರ ಆರೋಪ ಮಾಡಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications