ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಣಗಳು ತೇಲಿಬಂದ ಪ್ರದೇಶದಲ್ಲಿ ಕುಡಿಯುವ ನೀರು ಗುಣಮಟ್ಟ ಪರೀಕ್ಷೆಗೆ ಸೂಚನೆ

|
Google Oneindia Kannada News

ನವದೆಹಲಿ, ಮೇ 18: ಶವಗಳು ರಾಶಿ ರಾಶೀ ತೇಲಿಬಂದಿದ್ದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ಪರೀಕ್ಷಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಕುಡಿಯುವ ಉದ್ದೇಶಕ್ಕಾಗಿ ಗ್ರಾಮಗಳಿಗೆ ಪೂರೈಸುತ್ತಿರುವ ನೀರು ಗುಣಮಟ್ಟದದ್ಆಗಿದೆ ಎಂಬುದರ ಕುರಿತು ಖಾತರಿಗಾಗಿ ಗುಣಮಟ್ಟ ಪರೀಕ್ಷೆ ನಡೆಸುವಂತೆ ಹೇಳಿದೆ.

ನದಿಯಲ್ಲಿ ಹೆಣಗಳು ತೇಲುತ್ತಿರುವ ಪ್ರಕರಣಗಳು ವರದಿಯಾದ ಬಳಿಕ , ಇದರಿಂದಾಗಿ ನೀರು ಕಲುಷಿತಗೊಂಡು ಸೋಂಕು ಸಾಂಕ್ರಾಮಿಕವಾಗಿ ಹರಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದರು.

Ganga River

ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜಲಜೀವನ್ ಮಿಷನ್ ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.

ಗಂಗಾ ನದಿ ಬಳಿ ಶವಕ್ಕೆ ಪೆಟ್ರೋಲ್, ಟೈರ್ ಬಳಸಿ ಅಂತ್ಯಸಂಸ್ಕಾರ: 5 ಮಂದಿ ಪೊಲೀಸರ ಅಮಾನತುಗಂಗಾ ನದಿ ಬಳಿ ಶವಕ್ಕೆ ಪೆಟ್ರೋಲ್, ಟೈರ್ ಬಳಸಿ ಅಂತ್ಯಸಂಸ್ಕಾರ: 5 ಮಂದಿ ಪೊಲೀಸರ ಅಮಾನತು

ಹಲವು ನದಿಗಳಲ್ಲಿ ಮುಖ್ಯವಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಶವಗಳು ಹಾಗೂ ಭಾಗಶಃ ಸುಟ್ಟ ದೇಹಗಳು ತೇಲುತ್ತಿವೆ ಎಂಬ ಆಘಾತಕಾರಿ ಸುದ್ದಿ ಹಿನ್ನೆಲೆ ಕೇಂದ್ರ ಈ ಸೂಚನೆ ನೀಡಿದೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾರ್ವಜನಿಕ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಗುಣಮಟ್ಟದ ನೀರು ಪೂರೈಕೆಯ ಬಗ್ಗೆ ಗಮನಹರಿಸಬೇಕಿದೆ, ಸ್ಯಾನಿಟೈಸ್ ವ್ಯವಸ್ಥೆ ಉತ್ತಮಪಡಿಸುವುದು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅಗತ್ಯ ಎಂದು ಸಚಿವಾಲಯ ಹೇಳಿದೆ.

ದೇಶಾದ್ಯಂತ ಎಲ್ಲಾ ಗ್ರಾಮಗಳಲ್ಲಿ ನೀರಿನ ಪರೀಕ್ಷೆ ನಡೆಸಬೇಕು, ಸಾರ್ವಜನಿಕರು ಮತ್ತು ಸಾರ್ವಜನಿಕ ಸಂಸ್ಥೆಗಳಿಗೆ ಗುಣಮಟ್ಟದ ನೀರು ಪೂರೈಕೆಯಾಗುತ್ತಿದೆಯೇ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕಿದೆ.

English summary
With the second wave of the Covid-19 pandemic spreading across India, the Union Ministry of Jal Shakti has issued an advisory to states and union territories for monitoring and surveillance of water quality in villages to ensure potable drinking water.:
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X