ಎಸ್‌ಯುವಿಯಲ್ಲಿ ಸುಟ್ಟು ಕರಕಲಾದ ಮುಸ್ಲಿಂ ಪುರುಷರ ಶವ ಪತ್ತೆ ಪ್ರಕರಣ: ಹರ್ಯಾಣ ಟ್ಯಾಕ್ಸಿ ಚಾಲಕ ಬಂಧನ!

ಎಸ್‌ಯುವಿಯಲ್ಲಿ ಸುಟ್ಟು ಕರಕಲಾದ ಮುಸ್ಲಿಂ ಪುರುಷರ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಟ್ಯಾಕ್ಸಿ ಚಾಲಕನನ್ನು ಬಂಧಿಸಲಾಗಿದೆ.

ಜೈಪುರ ಫೆಬ್ರವರಿ 18: ಹರಿಯಾಣದಲ್ಲಿ ಮಹೀಂದ್ರ ಬೊಲೇರೋ ಎಸ್‌ಯುವಿ ವಾಹನದಲ್ಲಿ ಸುಟ್ಟು ಕರಕಲಾದ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯಾಕ್ಸಿ ಚಾಲಕನನ್ನು ಬಂಧಿಸಲಾಗಿದೆ. ಗೋರಕ್ಷಣೆಯ ಹೆಸರಿನಲ್ಲಿ ನಡೆದ ಕ್ರೌರ್ಯದಲ್ಲಿ ಈ ಇಬ್ಬರು ಬಲಿಯಾಗಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ರಾಜಸ್ಥಾನದ ಇಬ್ಬರು ಮುಸ್ಲಿಂ ಪುರುಷರನ್ನು ಗೋರಕ್ಷಕರು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಐವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣದ ನುಹ್ ಜಿಲ್ಲೆಯ ಫಿರೋಜ್‌ಪುರ ಜಿರ್ಕಾ ನಿವಾಸಿ ರಿಂಕು ಸೈನಿ (32) ಅವರನ್ನು ವಿಚಾರಣೆ ಮತ್ತು ಇತರ ಸಾಕ್ಷ್ಯಗಳ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ರಾಜಸ್ಥಾನ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಟ್ಯಾಕ್ಸಿ ಡೈವರ್ ಆಗಿದ್ದ ಸೈನಿ ಗೋರಕ್ಷಕರ ಗುಂಪಿನೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರ ಕುಟುಂಬಗಳು ಪೊಲೀಸರಿಗೆ ನೀಡಿದ ದೂರಿನಲ್ಲಿ ಸೈನಿ ಮತ್ತು ಇತರ ನಾಲ್ವರನ್ನು ಬಜರಂಗದಳದ ಸದಸ್ಯರು ಎಂದು ಹೆಸರಿಸಲಾಗಿದೆ.

ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಘಾಟ್‌ಮೀಕಾ ಗ್ರಾಮದ ನಿವಾಸಿಗಳಾದ ನಾಸಿರ್ (25) ಮತ್ತು ಜುನೈದ್ ಅಲಿಯಾಸ್ ಜುನಾ (35) ಅವರನ್ನು ಬುಧವಾರ ಅಪಹರಿಸಲಾಗಿದ್ದು, ಗುರುವಾರ ಬೆಳಗ್ಗೆ ಹರಿಯಾಣದ ಭಿವಾನಿಯ ಲೋಹರು ಎಂಬಲ್ಲಿ ಅವರಿಬ್ಬರ ದೇಹ ಸುಟ್ಟ ಬೊಲೆರೊ ಎಸ್‌ಯುವಿಯಲ್ಲಿ ಪತ್ತೆಯಾಗಿತ್ತು.

Body of Muslim men burnt in SUV found: Haryana taxi driver arrested!

ಆರೋಪಿಗಳನ್ನು ಅನಿಲ್, ಶ್ರೀಕಾಂತ್, ರಿಂಕು ಸೈನಿ, ಲೋಕೇಶ್ ಸಿಂಘ್ಲಾ ಮತ್ತು ಮೋಹಿತ್ ಯಾದವ್ ಅಲಿಯಾಸ್ ಮೋನು ಮಾನೇಸರ್ ಎಂದು ಗುರುತಿಸಲಾಗಿದ್ದು, ಐದು ಜನರ ವಿರುದ್ಧ ಗೋಪಾಲ್‌ಗಢ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ ಅಥವಾ ಎಫ್‌ಐಆರ್ ದಾಖಲಿಸಲಾಗಿದೆ ಎಂದು ರಾಜಸ್ಥಾನದ ಹಿರಿಯ ಪೊಲೀಸ್ ಅಧಿಕಾರಿ ಶ್ಯಾಮ್ ಸಿಂಗ್ ಹೇಳಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹತ್ಯೆಯನ್ನು ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಒಬ್ಬ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

"ರಾಜಕೀಯ ಪಕ್ಷಪಾತ"ದಿಂದಾಗಿ ಅದರ ಯುವ ಘಟಕ ಬಜರಂಗದಳದ ಹೆಸರನ್ನು ಪ್ರಕರಣಕ್ಕೆ ಎಳೆಯಲಾಗುತ್ತಿದೆ ಎಂದು ಆರೋಪಿಸಿರುವ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದೆ.

"ಪ್ರಾಥಮಿಕ ತನಿಖೆಯಿಲ್ಲದೆ, ಕಳ್ಳಸಾಗಾಣಿಕೆದಾರನ ಸಹೋದರ ತೆಗೆದುಕೊಂಡ ಹೆಸರುಗಳು ಘಟನೆಗೆ ಕಾರಣವೆಂದು ರಾಜಸ್ಥಾನ ಪೊಲೀಸರು ಭಾವಿಸಿದ್ದಾರೆಂದು ತೋರುತ್ತದೆ" ಎಂದು ಗುರುಗ್ರಾಮ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಎಚ್‌ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+