ಬೋಫೋರ್ಸ್ ಪ್ರಕರಣ ಮರು ತನಿಖೆಗೆ ಮುಂದಾದ ಸಿಬಿಐ
ಬೋಫೋರ್ಸ್ ಪ್ರಕರಣದ ಮರು ತನಿಖೆ. ಕೇಂದ್ರೀಯ ತನಿಖಾ ಸಂಸ್ಥೆಯಿಂದ ಘೋಷಣೆ.
ನವದೆಹಲಿ, ಆಗಸ್ಟ್ 11: ದಶಕಗಳ ಹಿಂದೆ ಭಾರತದ ರಾಜಕೀಯ ವಲಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದ್ದ ಬೋಫೋರ್ಸ್ ಫಿರಂಗಿ ಹಗರಣವನ್ನು ಮತ್ತೆ ತನಿಖೆಗೊಳಪಡಿಸುವುದಾಗಿ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ), ಈ ಕುರಿತಂತೆ ತನಗೆ ಸೂಚನೆ ನೀಡಿದ್ದ ಸಂಸದೀಯ ಸಮಿತಿಗೆ ತಿಳಿಸಿದೆ.
ಕಳೆದ ಜುಲೈನಲ್ಲಿ ಕೆಲವು ಸಂಸದರನ್ನೊಳಗೊಂಡ ಸಾರ್ವಜನಿಕ ಲೆಕ್ಕಪತ್ರ ಸಮಿತಿ (public accounts committee), ಬೋಫೋರ್ಸ್ ಹಗರಣವನ್ನು ಪುನಃ ನಡೆಸುವಂತೆ ಸಿಬಿಐಗೆ ತಾಕೀತು ಮಾಡಿತ್ತು.
ವರ್ಷಗಳ ಹಿಂದೆ, ಬೋಫೋರ್ಸ್ ಹಗರಣದಲ್ಲಿ ಯಾವುದೇ ತನಿಖೆ ನಡೆಸದಂತೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವಂತೆಯೂ ಸಮಿತಿ ಸೂಚಿಸಿತ್ತು. ಆ ಸೂಚನೆಯೀಗ ಕಾರ್ಯಗತಕ್ಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ, ತಾನು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಸಿಬಿಐ ತಿಳಿಸಿದೆ.

ರಾಜೀವ್ ಗಾಂಧಿ ಮೇಲೂ ಆರೋಪ
1986ರ ಮಾರ್ಚ್ 24ರಂದು ಭಾರತಕ್ಕೆ ಸ್ವೀಡನ್ ನಿಂದ ಬೋಫೋರ್ಸ್ ಫಿರಂಗಿಗಳು ಭಾರತೀಯ ಸೇನೆಗೆ ಕಾಲಿಟ್ಟಿದ್ದವು. ಇವುಗಳ ತಯಾರಿಕೆಗೆ ಸಂಬಂಧಿಸಿದಂತೆ ಭಾರತ ಸರ್ಕಾರ, ಸ್ವೀಡನ್ ಜತೆಗೆ ಒಪ್ಪಂದ ಮಾಡಿಕೊಂಡಿತ್ತು. ಈ ವ್ಯಾಪಾರದಲ್ಲಿ ಭಾರೀ ಪ್ರಮಾಣದ ಲಂಚ ಹಂಚಿಕೆಯಾಗಿದೆ ಎಂಬ ಆರೋಪಗಳು ಎದ್ದಿದ್ದವು. ಇದರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿಯವರ ಮೇಲೂ ಆರೋಪಗಳು ಕೇಳಿಬಂದಿದ್ದವು.

ಬೋಫೋರ್ಸ್ ಕಂಪನಿ ವಿರುದ್ಧ ಪ್ರಕರಣ
1990ರ ಜನವರಿ 22ರಂದು, ಕೇಂದ್ರೀಯ ತನಿಖಾ ಸಂಸ್ಥೆಯು ಈ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಬೋಫೋರ್ಸ್ ಫಿರಂಗಿಗಳನ್ನು ತಯಾರಿಸಿದ್ದ ಎ.ಬಿ. ಬೋಫೋರ್ಸ್ ಸಂಸ್ಥೆ ವಿರುದ್ಧವೂ ಕೇಸುಗಳು ದಾಖಲಾಗಿದ್ದವು. ಆ ಕಂಪನಿಯ ಅಂದಿನ ಅಧ್ಯಕ್ಷ ಮಾರ್ಟಿನ್ ಅರ್ಭೋ ಅವರ ವಿರುದ್ಧ ಕೇಸು ದಾಖಲಾಗಿತ್ತು.

ದೆಹಲಿ ಹೈಕೋರ್ಟ್ ತೀರ್ಪು
ಈ ಖರೀದಿಯಲ್ಲಿಆಗಿನ ಕಾಲದಲ್ಲೇ ಒಟ್ಟು 64 ಕೋಟಿ ರು. ಯಷ್ಟು ಲಂಚ ಹರಿದಾಡಿದೆ ಎಂಬ ಆರೋಪಗಳಿವೆ. ಇದರ ತನಿಖೆ ನಡೆಸಿದ್ದ 1999ರ ಅಕ್ಟೋಬರ್ 22ರಂದು ಸಿಬಿಐ, ತನ್ನ ಮೊದಲ ಆರೋಪ ಪಟ್ಟಿ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐ ಕೋರ್ಟ್, 2011ರಲ್ಲಿ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ (ಆತ ದಲ್ಲಾಳಿ) ಕ್ವಟ್ರೋಖಿಯ ಹೆಸರನ್ನು ಪ್ರಕರಣದಿಂದ ಕೈಬಿಟ್ಟಿತ್ತು.

ಈಗ ಈ ಪ್ರಕರಣಕ್ಕೆ ಮರುಜೀವ ತರುವ ಪ್ರಯತ್ನವೇಕೆ?
2019ರ ಮಹಾ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಈಗ ಕಾಂಗ್ರೆಸ್ ಗೆ ಕಂಟಕಪ್ರಾಯವಾಗಬಹುದಾದ ಬೋಫೋರ್ಸ್ ಹಗರಣವನ್ನು ಮತ್ತೆ ಕೆದಕಿರುವುದು ಎಲ್ಲರ ಕುತೂಹಲ ಕೆರಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications