ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿ: ಅಭಿಮಾನಿಗಳಿಗೆ ಅಕ್ಷಯ್ ಕುಮಾರ್ ಕರೆ
ನವದೆಹಲಿ, ಜನವರಿ 18: ಅಯೋಧ್ಯಾದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ದೇಣಿಗೆ ನೀಡುವಂತೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಸಿದ್ಧತೆಗಳು ನಡೆದಿವೆ. ಈಗಾಗಲೇ ಅನೇಕರು ದೇಣಿಗೆ ಸಂಗ್ರಹ ಅಭಿಯಾನ ಆರಂಭಿಸಿದ್ದು, ಅದಕ್ಕೆ ಅಕ್ಷಯ್ ಕುಮಾರ್ ಕೂಡ ಕೈಜೋಡಿಸಿದ್ದಾರೆ.
'ಅಯೋಧ್ಯಾದಲ್ಲಿ ನಮ್ಮ ಭವ್ಯ ಶ್ರೀರಾಮ ದೇವಾಲಯ ನಿರ್ಮಾಣ ಕಾರ್ಯ ಶುರುವಾಗಿರುವುದು ಸಂತಸದ ಸಂಗತಿ. ಈಗ ಅದಕ್ಕೆ ಕಾಣಿಕೆ ಸಲ್ಲಿಸುವುದು ನಮ್ಮ ಸರದಿ. ನಾನು ಆರಂಭಿಸಿದ್ದೇನೆ. ನೀವೂ ಕೈಜೋಡಿಸುತ್ತೀರಿ ಎಂದು ಭಾವಿಸಿದ್ದೇನೆ. ಜೈ ಶ್ರೀರಾಮ್' ಎಂದು ಅಕ್ಷಯ್ ಕುಮಾರ್ ವಿಡಿಯೋದೊಂದಿಗೆ ಟ್ವೀಟ್ ಮಾಡಿದ್ದಾರೆ.
ಅಯೋಧ್ಯಾದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಮೂರು ಗಿಡಗಳನ್ನು ನೆಡುವ ಹಾಗೂ ತ್ರಿವರ್ಣ ದ್ವಜ ಹಾರಿಸುವ ಮೂಲಕ ಮಸೀದಿ ನಿರ್ಮಾಣ ಕಾರ್ಯ ಕೂಡ ಆರಂಭವಾಗಲಿದೆ. ರಾಮಮಂದಿರ ನಿರ್ಮಾಣವಾಗುವ ಸ್ಥಳದಿಂದ 25 ಕಿಮೀ ದೂರದಲ್ಲಿನ ಐದು ಎಕರೆ ಪ್ರದೇಶದಲ್ಲಿ ಬೆಳಿಗ್ಗೆ 8.30ಕ್ಕೆ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ (ಐಐಸಿಎಫ್) ಮಸೀದಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದೆ.

ಈ ನಡುವೆ ಅಯೋಧ್ಯಾ ರಾಮಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಣಾ ಜಾಥಾದ ವೇಳೆ ಎರಡು ಸಮುದಾಯಗಳ ಗುಂಪಿನ ನಡುವೆ ಹಿಂಸಾಚಾರ ಸಂಭವಿಸಿದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಗಾಂಧಿಧಾಮ ಎಂಬಲ್ಲಿ ಭಾನುವಾರ ನಡೆದಿದೆ.
ಮೊದಲ ಸಂಘರ್ಷ ಸದಾವು ಎಂಬ ಗ್ರಾಮದಲ್ಲಿ ನಡೆದಿತ್ತು. ಬಳಿಕ ಕಿಡಾನಾ ಗ್ರಾಮದಲ್ಲಿ ಕೂಡ ಇದೇ ಸ್ಥಿತಿ ಉಂಟಾಯಿತು. ಸಮೀಪದ ಗಾಂಧಿಧಾಮದಲ್ಲಿ ಜಾಥಾ ತೆರಳುವಾಗ ಪರಿಸ್ಥಿತಿ ಉದ್ವಿಗ್ನವಾಯಿತು. ವಿಎಚ್ಪಿ ಆಯೋಜಿಸಿದ್ದ ಜಾಥಾದಲ್ಲಿ ಉಂಟಾದ ಜಗಳ ಮಾರಾಮಾರಿಗೆ ಕಾರಣವಾಗಿದೆ. ಪೊಲೀಸರ ಮೇಲೆ ಕಲ್ಲುತೂರಾಟ ನಡೆದಿದೆ. ಈ ಗ್ರಾಮಗಳಲ್ಲಿ ಪೊಲೀಸ್ ಪಡೆ ನೆಲೆಯೂರಿದ್ದು, ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications