ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನ
ಮುಂಬೈ, ಏಪ್ರಿಲ್ 30: ಬಾಲಿವುಡ್ನ ಹಿರಿಯ ನಟ ರಿಷಿ ಕಪೂರ್ ಇಂದು ನಿಧನರಾಗಿದ್ದಾರೆ. 2018ರಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿರುವ ರಿಷಿ ಕಪೂರ್ ಅನಾರೋಗ್ಯದ ಕಾರಣ ಏಪ್ರಿಲ್ 2ರಿಂದ ಏನನ್ನೂ ಪೋಸ್ಟ್ ಮಾಡಿಲ್ಲ. ಇತ್ತೀಚೆಗಷ್ಟೇ ತಮ್ಮ ಮುಂದಿನ ಪ್ರಾಜೆಕ್ಟ್ ಬಗ್ಗೆಯೂ ತಿಳಿಸಿದ್ದರು ರಿಷಿ ಕಪೂರ್.ದೀಪಿಕಾ ಪಡುಕೋಣೆ ಜೊತೆಗೆ ಹಾಲಿವುದ್ ಸಿನಿಮಾ 'ದಿ ಇಂಟರ್ನ್' ನಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದರು.
ಕುಟುಂಬದ ಕಾರ್ಯಕ್ರಮ ನಿಮಿತ್ತ ದಿಲ್ಲಿಗೆ ಹೋದಾಗ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆಗ ತಮಗೆ ಇನ್ಫೆಕ್ಷನ್ ಆಗಿತ್ತು ಎಂದು ತಿಳಿಸಿದ್ದರು. ಮುಂಬೈಗೆ ಮರಳಿದ ಬಳಿಕ ವೈರಲ್ ಜ್ವರದ ಕಾರಣ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿ ಬಹಳ ಬೇಗ ಬಿಡುಗಡೆಯಾಗಿದ್ದರು.
ಸುಮಾರು ಒಂದು ವರ್ಷದ ಹಿಂದೆ ಯುಎಸ್ನಲ್ಲಿ ಕ್ಯಾನ್ಸರ್ಗೆ ಚಿಕಿತ್ಸೆ ಪಡೆದಿದ್ದ ಅವರು ಬಳಿಕ ಸ್ವದೇಶಕ್ಕೆ ಆಗಮಿಸಿದ್ದರು. ಫೆಬ್ರವರಿಯಲ್ಲಿ ಎರಡು ಸಲ ಆಸ್ಪತ್ರೆಗೆ ದಾಖಲಾಗಿದ್ದರು.
ರಿಷಿ ಕಪೂರ್ ಸಾವಿಗೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಿಷಿ ಕಪೂರ್ ಆಪ್ತ ಅಮಿತಾಭ್ ಬಚ್ಚನ್ ತೀವ್ರ ಬೇಸರಗೊಂಡಿರುವುದಾಗಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
67 ವರ್ಷದ ರಿಷಿ ಕಪೂರ್ಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಬುಧವಾರ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಿಷಿ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.
ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ರಣಭೀರ್ ಕಪೂರ್ ತಿಳಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಖ್ಯಾತ ನಟ ಇರ್ಫಾನ್ ಖಾನ್ ಸಾವಿನ ದುಃಖ ಮಾಸುವ ಮುನ್ನವೇ ಭಾರತೀಯ ಸಿನಿಮಾ ಲೋಕಕ್ಕೆ ಮತ್ತೊಂದು ಆಘಾತವನ್ನುಂಟು ಮಾಡಿದೆ.
-
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications