ಅತ್ಯಾಚಾರ: ಪೊಲೀಸರಿಗೆ ಶರಣಾದ ಖ್ಯಾತ ಬಾಲಿವುಡ್ ನಿರ್ಮಾಪಕ
25ವರ್ಷದ ಯುವತಿ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಚಿತ್ರೋದ್ಯಮದ ಖ್ಯಾತ ನಿರ್ಮಾಪಕ ಕರೀಂ ಮೊರಾನಿ ಪೊಲೀಸರಿಗೆ ಶರಣಾಗಿದ್ದು, ಇವರನ್ನು ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹೈದರಾಬಾದ್, ಸೆ 24: ಯುವತಿ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಚಿತ್ರೋದ್ಯಮದ ಖ್ಯಾತ ನಿರ್ಮಾಪಕ ಕರೀಂ ಮೊರಾನಿ ಪೊಲೀಸರಿಗೆ ಶರಣಾಗಿದ್ದು, ಇವರನ್ನು ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸರ್ವೋಚ್ಚ ನ್ಯಾಯಾಲಯ ಬೇಲ್ ಅರ್ಜಿ ತಿರಸ್ಕರಿಸಿದ ನಂತರ ನಗರದ ಹಯಾತ್ ನಗರ ಪೊಲೀಸರ ಮುಂದೆ ಮೊರಾನಿ ಶರಣಾಗಿದ್ದಾರೆ. ದೆಹಲಿ ಮೂಲದ 25ವರ್ಷದ ನಟಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಮೊರಾನಿ ಎದುರಿಸುತ್ತಿದ್ದಾರೆ.

ಬಾಲಿವುಡ್ ಬಾದಶಾ ಶಾರೂಖ್ ಖಾನ್ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮೊರಾನಿ, 2G ಹಗರಣದಲ್ಲೂ ಆರೋಪಿಯಾಗಿದ್ದರು. ಸಿನಿಯುಗ್ ಎನ್ನುವ ಕಂಪೆನಿಯ ಮಾಲೀಕರಾರಿಗಿರುವ ಮೊರಾನಿ, ಸೂಪರ್ ಹಿಟ್ ಹಿಂದಿ ಚಿತ್ರ ಚೈನ್ನೈ ಎಕ್ಸ್ ಪ್ರೆಸ್ ಚಿತ್ರದ ನಿರ್ಮಾಪಕರೊಲ್ಲಬ್ಬರು.
ಹೈದರಾಬಾದಿನ ರಾಮೋಜಿ ಫಿಲಂ ಸಿಟಿಯಲ್ಲಿ ಹಲವು ಬಾರಿ ಮೊರಾನಿ ಅತ್ಯಾಚಾರ ಎಸಗಿದ್ದರು ಎಂದು ಯುವತಿ ದೂರಿದ್ದರು. ನನ್ನ ನಗ್ನ ಫೋಟೋಗಳನ್ನು ತೆಗೆದು ಅದನ್ನು ಸಾಮಾಜಿಕ ತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಯುವತಿ, ಮೊರಾನಿ ವಿರುದ್ದ ದೂರು ಸಲ್ಲಿಸಿದ್ದರು.
ಹೈದರಾಬಾದ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನಂತರ ಮೊರಾನಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅಲ್ಲೂ ಜಾಮೀನು ಸಿಗದ ಹಿನ್ನಲೆಯಲ್ಲಿ ಮೊರಾನಿ ಪೊಲೀಸರಿಗೆ ಶರಣಾಗಿದ್ದಾರೆ. ದಿಲ್ವಾಲೆ, ರಾ ಒನ್, ನ್ಯೂಇಯರ್ ಮುಂತಾದ ಚಿತ್ರಗಳನ್ನೂ ಕರೀಂ ಮೊರಾನಿ ನಿರ್ಮಿಸಿದ್ದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications