ನಟಿ ಶ್ರೀದೇವಿಯದು ಸಹಜ ಸಾವಲ್ಲ, ಕೊಲೆ: ಡಿಜಿಪಿ ಹೇಳಿಕೆ
ನವದೆಹಲಿ, ಜುಲೈ 12: ನಟಿ ಶ್ರೀದೇವಿ ದುಬೈನಲ್ಲಿ ಬಾತ್ಟಬ್ನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದು ಒಂದೂವರೆ ವರ್ಷವೇ ಕಳೆದಿದೆ. ಅವರು 2018ರ ಫೆಬ್ರವರಿ 24ರಂದು ಮೃತಪಟ್ಟಿದ್ದರು. ಅವರ ಸಾವು ಆಕಸ್ಮಿಕ ಎಂದೇ ಹೇಳಲಾಗಿತ್ತು.
ಅವರ ಸಾವಿನ ಬಗ್ಗೆ ಅನುಮಾನಗಳು ಉಂಟಾಗಿದ್ದರಿಂದ ತನಿಖೆ ನಡೆಸಲಾಗಿತ್ತು. ಆದರೆ ಯುಎಇ ಅಧಿಕಾರಿಗಳು ಇದು ಆಕಸ್ಮಿಕ ಸಾವು ಎಂದೇ ಹೇಳಿದ್ದರು. ಅವರ ಸಾವಿನ ಘಟನೆ ಬಹುತೇಕ ಮರೆತು ಹೋಗುತ್ತಿರುವ ಸಂದರ್ಭದಲ್ಲಿ ಮತ್ತೆ ಅದು ಚರ್ಚೆಗೆ ಬಂದಿದೆ. ಅದಕ್ಕೆ ಕಾರಣ ಕೇರಳದ ಮಾಜಿ ಡಿಜಿಪಿ ರಿಷಿರಾಜ್ ಸಿಂಗ್.
ಕೇರಳದ ಸ್ಥಳೀಯ ಪತ್ರಿಕೆಯೊಂದರಲ್ಲಿ ಬರೆದಿರುವ ಅಂಕಣದಲ್ಲಿ ರಿಷಿರಾಜ್ ಸಿಂಗ್ ಅವರು ಶ್ರೀದೇವಿ ಅವರ ಸಾವಿನಲ್ಲಿ ಬೇರೆ ಯಾವುದೋ ಅನುಮಾನಾಸ್ಪದ ಕೈವಾಡ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಅವರ ಸಾವು ಆಕಸ್ಮಿಕವಾಗಿ ಮುಳುಗಿ ಸಂಭವಿಸಿರಲು ಸಾಧ್ಯವಿಲ್ಲ ಎಂದಿದ್ದಾರೆ.

ತಮ್ಮ ಸ್ನೇಹಿತರಾಗಿದ್ದ ವಿಧಿ ವಿಜ್ಞಾನ ತಜ್ಞ ಡಾ. ಉಮಾದಾಥನ್ ಅವರೊಂದಿಗೆ ಈ ಹಿಂದೆ ನಡೆಸಿದ್ದ ಸಂಭಾಷಣೆಯ ಸಂದರ್ಭದಲ್ಲಿ ಅವರು ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು ಎಂದು ಸಿಂಗ್ ತಿಳಿಸಿದ್ದಾರೆ. ಇದನ್ನು ಖಚಿತಪಡಿಸಲು ಉಮಾದಾಥನ್ ಅವರು ಈಗ ಬದುಕಿಲ್ಲ.
'ವಿಧಿವಿಜ್ಞಾನ ತಜ್ಞನಾಗಿದ್ದ ನನ್ನ ಸ್ನೇಹಿತ ದಿ. ಉಮಾದಾಥನ್, ಶ್ರೀದೇವಿ ಅವರ ಸಾವು ಕೊಲೆಯಾಗಿರಬಹುದು ಮತ್ತು ಅದು ಆಕಸ್ಮಿಕ ಸಾವಲ್ಲ ಎಂದು ಬಹಳ ಹಿಂದೆಯೇ ನನಗೆ ಹೇಳಿದ್ದ. ಕುತೂಹಲ ತಡೆಯಲಾಗದೆ ಆತನ ಬಳಿ ಕೇಳಿದ್ದರಿಂದ ಆತ ಹೀಗೆ ಹೇಳಿದ್ದ' ಎಂದು ಸಿಂಗ್ ತಿಳಿಸಿದ್ದಾರೆ.
ತನ್ನ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಕೆಲವು ಸಂಗತಿಗಳನ್ನು ಪ್ರಸ್ತಾಪಿಸಿದ್ದ. ಒಂದು ಅಡಿ ಆಳದ ನೀರಿನೊಳಗೆ ಎಷ್ಟೇ ನೀರು ಕುಡಿದರೂ ವ್ಯಕ್ತಿ ಮುಳುಗಲು ಸಾಧ್ಯವೇ ಇಲ್ಲ. ಯಾರಾದರೂ ಬಲವಂತವಾಗಿ ಆತನ ಎರಡೂ ಕಾಲುಗಳನ್ನು ಒತ್ತಿಹಿಡಿದು ತಲೆಯನ್ನು ನೀರಿನೊಳಗೆ ಮುಳುಗಿಸದ ಹೊರತು ಸಾಯಲು ಸಾಧ್ಯವಿಲ್ಲ ಎಂದು ಬರೆದಿದ್ದಾರೆ.
-
Aditya Dhar: ರಣವೀರ್ ಸಿಂಗ್ ಹಿಂದಿಕ್ಕಿ IMDb ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ 'ಧುರಂಧರ್ 2' ನಿರ್ದೇಶಕ ಆದಿತ್ಯ ಧರ್ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications