Bomb Threat: ಪಾಟ್ನಾ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ, ಆವರಣದಲ್ಲಿ ಶೋಧ ಕಾರ್ಯ
ಪಾಟ್ನಾ ಏಪ್ರಿಲ್ 12: ಬಿಹಾರ್ ರಾಜಧಾನಿ ಪಾಟ್ನಾದ ಜಯಪ್ರಕಾಶ್ ನಾರಾಯಣ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಕರೆಯೊಂದನ್ನು ಸ್ವೀಕರಿಸಲಾಗಿದೆ.
ಬುಧವಾರ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿರುವುದಾಗಿ ಹೇಳಿದ್ದಾನೆ. ಕರೆಯ ಸ್ವೀಕರಿಸಿದ ನಂತರ ಬಾಂಬ್ ನಿಷ್ಕ್ರಿಯ ದಳ ವಿಮಾನ ನಿಲ್ದಾಣದ ಆವರಣವನ್ನು ಸ್ಕ್ಯಾನ್ ಮಾಡುತ್ತಿದೆ. ಬೆಳಿಗ್ಗೆ 10:47 ರ ಸುಮಾರಿಗೆ ಕರೆ ಸ್ವೀಕರಿಸಲಾಗಿದೆ.

ಪಾಟ್ನಾದಲ್ಲಿರುವ ವರದಿಗಾರ ಪ್ರಕಾರ, ಬಾಂಬ್ ನಿಷ್ಕ್ರಿಯ ದಳವು ತನ್ನ ಶೋಧವನ್ನು ನಡೆಸುತ್ತಿರುವುದರಿಂದ ಯಾವುದೇ ಅಡೆತಡೆಗಳಿಲ್ಲದೆ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.
#WATCH | Search operation underway by bomb squad team at Bihar's Patna airport after a bomb threat call was received here. pic.twitter.com/HajtWw96L5
— ANI (@ANI) April 12, 2023
ನಂತರ ದರ್ಭಾಂಗ ಮತ್ತು ಪಾಟ್ನಾ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಸುಧಾಂಶು ಶೇಖರ್ ಅಲಿಯಾಸ್ ಮುಕುಂದ್ನನ್ನು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಂಜಾಬಿ ಕಾಲೋನಿಯಿಂದ ಬಂಧಿಸಲಾಗಿದೆ ಎಂದು ಸಮಸ್ತಿಪುರದ ಎಸ್ಪಿ ವಿನಯ್ ತಿವಾರಿ ತಿಳಿಸಿದ್ದಾರೆ. ಆರೋಪಿಯ ಮೊಬೈಲ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಕುಡಿತದ ಚಟ ಹೊಂದಿದ್ದನಂತೆ. ಬಂಧಿಸಿದ ನಂತರವೂ ಆತ ಕುಡಿದಿದ್ದ ಎನ್ನಲಾಗಿದೆ.
ವ್ಯಕ್ತಿ ಮದ್ಯದ ಅಮಲಿನಲ್ಲಿದ್ದು, ಆ ಸಮಯದಲ್ಲಿ ಆತ ಕರೆ ಮಾಡಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ನಶೆ ಉಳಿದ ಬಳಿಕ ವಿವರವಾದ ವಿಚಾರಣೆ ನಡೆಸಲಾಗುತ್ತಿದೆ. ಕರೆ ಮಾಡಿದ ಫೋನ್ ಅನ್ನು ಮರುಪಡೆಯಲಾಗಿದೆ. ಮೇಲ್ನೋಟಕ್ಕೆ ಇದು ಹುಸಿ ಕರೆ ಎಂದು ನಂಬಲಾಗಿದೆ.
ದೆಹಲಿಯಲ್ಲಿ ಶಾಲೆಗೆ ಬೆದರಿಕೆ
ಇಂದು ಮುಂಜಾನೆ 10.50 ಗಂಟೆಗೆ ದೆಹಲಿಯ ಇಂಡಿಯನ್ ಸ್ಕೂಲ್ಗೆ ಇ-ಮೇಲ್ ಬಂದಿತ್ತು. ಅದರಲ್ಲಿ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ತಕ್ಷಣ ಶಾಲೆಯಲ್ಲಿರುವ ಮಕ್ಕಳನ್ನು ಸ್ಥಳಾಂತರಿಸಿದ ನಂತರ, SWAT ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳ ಇಡೀ ಕ್ಯಾಂಪಸ್ನಲ್ಲಿ ತನಿಖೆ ನಡೆಸಿತು. ಇದರಲ್ಲಿ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ.
ಕಳೆದ ವರ್ಷ ಜುಲೈನಲ್ಲಿ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕರೊಬ್ಬರು ಹೇಳಿಕೊಂಡಿದ್ದರು. ಬಳಿಕ ವಿಮಾನ ಹಾರಾಟ ನಡೆಸದಂತೆ ತೀವ್ರ ಶೋಧ ನಡೆಸಲಾಗಿದ್ದು, ಅದರಲ್ಲಿ ಯಾವುದೇ ಅನುಮಾನಾಸ್ಪದ ಅಂಶಗಳು ಪತ್ತೆಯಾಗಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications