ಮುಂಬೈ ಟ್ರಾಫಿಕ್ ಪೊಲೀಸರಿಗೆ ಬಾಂಬ್ ಬೆದರಿಕೆ ಸಂದೇಶ: ಎಲ್ಲೆಡೆ ಅಲರ್ಟ್!
ಮುಂಬೈ ಫೆಬ್ರವರಿ 2: ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಸಂದೇಶವೊಂದು ಬಂದಿದೆ. ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಸಂದೇಶದಲ್ಲಿ ಹೇಳಲಾಗಿದೆ. ಸಂದೇಶದ ನಂತರ ಮುಂಬೈ ಪೊಲೀಸರು ಮತ್ತು ಇತರ ಏಜೆನ್ಸಿಗಳು ಅಲರ್ಟ್ ಆಗಿವೆ. ಸಂದೇಶ ಕಳುಹಿಸಿದವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಮುಂಬೈ ಸಂಚಾರ ನಿಯಂತ್ರಣ ಕೊಠಡಿಗೆ ಬಾಂಬ್ ಬೆದರಿಕೆ ಬಂದಿದೆ. ಕಂಟ್ರೋಲ್ ರೂಮ್ಗೆ ಅಪರಿಚಿತ ವ್ಯಕ್ತಿಯಿಂದ "ಮುಂಬೈನ ಆರು ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ" ಎಂದು ಹೇಳುವ ಸಂದೇಶವನ್ನು ಸ್ವೀಕರಿಸಲಾಗಿದೆ.

ಮುಂಬೈ ಪೊಲೀಸರು ಸಂದೇಶ ಕಳುಹಿಸಿದವರ ಪತ್ತೆಗೆ ತನಿಖೆ ಆರಂಭಿಸಿದ್ದು, ಭದ್ರತಾ ಏಜೆನ್ಸಿಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶಗಳು ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಇಂಥಹ ಹಲವಾರು ಬೆದರಿಕೆ ಸಂದೇಶಗಳು ಬಂದಿವೆ. ಆದರೆ ಅವುಗಳನ್ನು ನೆಗ್ಲೆಟ್ ಮಾಡುವಂತಿಲ್ಲ.
Mumbai Traffic Police Control Room receives a threat message from an unknown person. The message states that bombs have been placed at six locations across Mumbai. Mumbai police and other agencies are alert after the message. Efforts are underway to trace the message sender:…
— ANI (@ANI) February 2, 2024
ಈ ಹಿಂದೆ ವಿವಿಧ ಬ್ಯಾಂಕ್ಗಳ ಕೇಂದ್ರ ಕಚೇರಿಗಳಿಗೆ ಹುಸಿ ಬಾಂಬ್ ಬೆದರಿಕೆ ನಗರದ ಆರ್ಬಿಐ ಕೇಂದ್ರ ಕಚೇರಿ ಸೇರಿದಂತೆ ಹನ್ನೊಂದು ಕಡೆಗಳಲ್ಲಿ ಮಧ್ಯಾಹ್ನ 1.30 ಗಂಟೆಗೆ ಬಾಂಬ್ ಸ್ಪೋಟವಾಗುತ್ತದೆ ಎಂಬ ಸಂದೇಶ ಬಂದಿತ್ತು. ಎಲ್ಲೆಡೆ ಶಕ್ತಿಶಾಲಿ ಬಾಂಬ್ಗಳನ್ನು ಅಳವಡಿಸಲಾಗಿದೆ ಎಂಬ ಬೆದರಿಕೆ ಸಂದೇಶದ ಇ-ಮೇಲ್ ಮಂಗಳವಾರ ಪೊಲೀಸರನ್ನು ತಲ್ಲಣಗೊಳಿಸಿತ್ತು. ತಕ್ಷಣವೇ ಅಲರ್ಟ್ ಆದ ಪೊಲೀಸರು ಎಲ್ಲೆಡೆ ಪರಿಶೀಲನೆ ನಡೆಸಿದರು. ಇವರೊಂದಿಗೆ ಬಾಂಭ್ ನಿಷ್ಕ್ರೀಯದಳದ ಅಧಿಕಾರಿಗಳೂ ಕೂಡ ಭಾಗಿಯಾಗಿದ್ದರು. ಆದರೆ ಪರಿಶೀಲನೆ ಬಳಿಕ ಇದೊಂದು ಹುಸಿ ಬೆದರಿಕೆ ಸಂದೇಶ ಎಂದು ತಿಳಿದು ಬಂದಿದೆ.
ಬಾಂಬ್ ಬೆದರಿಕೆ ಜತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ರಾಜೀನಾಮೆ ನೀಡಬೇಕು ಎಂದು ಇ-ಮೇಲ್ನಲ್ಲಿ ಒತ್ತಾಯಿಸಲಾಗಿತ್ತು. ಅಲ್ಲದೆ ಬ್ಯಾಂಕಿಂಗ್ ಹಗರಣವನ್ನು ಬಹಿರಂಗಪಡಿಸುವ ಬಗ್ಗೆ ಸಂಪೂರ್ಣ ಹೇಳಿಕೆಯನ್ನು ಬಿಡುಗಡೆ ಮಾಡಬೇಕು ಎಂದು ಇ - ಮೇಲ್ನಲ್ಲಿ ಒತ್ತಾಯಿಸಲಾಗಿತ್ತು.
ಬೆದರಿಕೆ ಸಂದೇಶದವನ್ನು ಕಳುಹಿಸಿದ ಇ-ಮೇಲ್ನಲ್ಲಿ 'ಕಿಲಾಫತ್ ಇಂಡಿಯಾ' ಎಂಬ ಯೂಸರ್ನೇಮ್ ಇತ್ತು. ಈ ಸಂಬಂಧ ಮುಂಬಯಿನ ಎಂಆರ್ಎ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ನಡೆಯುತ್ತಿದೆ. ಆರ್ಬಿಐ ಅಲ್ಲದೆ, ಚರ್ಚ್ಗೇಟ್ನಲ್ಲಿರುವ ಎಚ್ಡಿಎಫ್ಸಿ ಹೌಸ್, ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ ಐಸಿಐಸಿಐ ಬ್ಯಾಂಕ್ ಕಚೇರಿ, ಬಾಂಬ್ ಸ್ಫೋಟಿಸಲಾಗುತ್ತದೆ ಎಂದು ಬೆದರಿಕೆಯೊಡ್ಡಲಾಗಿತ್ತು.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications