Akasa Air: ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ!
ಬುಧವಾರ ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಕಾಸ ಏರ್ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶ ಸಂಚಲವನ್ನೇ ಸೃಷ್ಟಿ ಮಾಡಿದೆ. ದೆಹಲಿಯಿಂದ ಹೊರಟ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ಬಂದಿದ್ದರಿಂದ ವಿಮಾನವನ್ನು ದೆಹಲಿಗೆ ವಾಪಸ್ ಕಳುಹಿಸಲಾಗಿದೆ. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ತಪಾಸಣೆ ನಡೆಸಲಾಗುತ್ತಿದೆ.
ಇಂಡಿಗೋ ಮತ್ತು ಏರ್ ಇಂಡಿಯಾದ ನಂತರ ಎರಡು ದಿನಗಳಲ್ಲಿ ಆಕಾಸ ಏರ್ ವಿಮಾನಕ್ಕೂ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಕಾಸ ಏರ್ ವಿಮಾನದಲ್ಲಿ ಒಟ್ಟು 184 ಮಂದಿ ಪ್ರಯಾಣಿಕರು ಇದ್ದರು. ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಮಧ್ಯಾಹ್ನ 1.15ಕ್ಕೆ ಮಾಹಿತಿ ಲಭಿಸಿದೆ. ವಿಮಾನ ಟೇಕ್ಆಫ್ ಆಗುತ್ತಿದ್ದಂತೆ ಈ ಸಂದೇಶ ಬಂದಿದ್ದು, ವಿಮಾನವನ್ನು ತಕ್ಷಣವೇ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಲಾಗಿದೆ. ವಿಮಾನವನ್ನು ಪ್ರತ್ಯೇಕವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನ ಸುರಕ್ಷತವಾಗಿ ಲ್ಯಾಂಡ್ ಆಗಿದ್ದು ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ.

ಐಜಿಐ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್
ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಕಾಸ ಏರ್ ವಿಮಾನದಲ್ಲಿ ಬಾಂಬ್ ಬೆದರಿಕೆ ಇರುವ ಬಗ್ಗೆ ಮಾಹಿತ ಬಂದ ಬಳಿಕ ದೆಹಲಿ ಪೊಲೀಸರು ವಿಮಾನ ನಿಲ್ದಾಣ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಟ್ಯಾಂಡರ್ಡ್ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸಿ, ವಿಮಾನವನ್ನು ತಕ್ಷಣವೇ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಲಾಗಿದೆ. ಅಲ್ಲಿ ಅದನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ವಿಮಾನವನ್ನು ಪ್ರತ್ಯೇಕವಾಗಿ ಲ್ಯಾಂಡ್ ಮಾಡಲಾಗಿದ್ದು ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆವಾಗಿದ್ದಾರೆ. ಜೊತೆಗೆ ಅವರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಲಾಗುತ್ತಿದೆ.
ಆಕಾಸ ಏರ್ ಹೇಳಿಕೆ
ಘಟನೆಯ ಬಗ್ಗೆ ಮಾಹಿತಿ ನೀಡಿದ ಆಕಾಸ ಏರ್ನ ವಕ್ತಾರರು, 'ಅಕಾಸ ಏರ್ ಫ್ಲೈಟ್ ಕ್ಯೂಪಿ 1335, ಅಕ್ಟೋಬರ್ 16, 2024 ರಂದು ದೆಹಲಿಯಿಂದ ಬೆಂಗಳೂರಿಗೆ ಹಾರುತ್ತಿತ್ತು. ಅದರಲ್ಲಿ 174 ಪ್ರಯಾಣಿಕರು, 3 ಶಿಶುಗಳು ಮತ್ತು 7 ಸಿಬ್ಬಂದಿಗಳು ಇದ್ದರು. ಈ ವೇಳೆ ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಲಾಗಿದೆ. ಆಕಾಶ ಏರ್ ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪೈಲಟ್ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ದೆಹಲಿಯಲ್ಲಿ ಸುರಕ್ಷಿತ ಲ್ಯಾಂಡಿಂಗ್ಗೆ ಅಗತ್ಯವಿರುವ ಎಲ್ಲಾ ತುರ್ತು ಕಾರ್ಯವಿಧಾನಗಳನ್ನು ಕ್ಯಾಪ್ಟನ್ ಅನುಸರಿಸಿದ್ದಾರೆ. ಜೊತೆಗೆ ವಿಮಾನದಲ್ಲಿ ತಪಾಸಣೆಯನ್ನು ನಡೆಸಲಾಗುತ್ತಿದೆ. ವಿಮಾನದಲ್ಲಿನ ಪ್ರಯಾಣಿಕ ತಪಾಸಣೆಯನ್ನೂ ಮಾಡಲಾಗುತ್ತಿದೆ' ಎಂದಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications