ಗೂಗಲ್ ಕಚೇರಿಗೆ ಬಾಂಬ್ ಬೆದರಿಕೆ: ಆರೋಪಿ ಬಂಧನ
ಗೂಗಲ್ ಆವರಣದಲ್ಲಿ ಬಾಂಬ್ ಹಾಕಿರುವುದಾಗಿ ವ್ಯಕ್ತಿ ಕರೆ ಮಾಡಿದ್ದನು. ಬಳಿಕ ಕಚೇರಿಯಲ್ಲಿ ಉದ್ವೀಘ್ನ ವಾತಾವರಣ ಸೃಷ್ಟಿಯಾಗಿ ಸ್ವಲ್ಪ ಸಮಯದವರೆಗೆ ಅಲರ್ಟ್ ಮಾಡಲಾಗಿತ್ತು
ನವದೆಹಲಿ, ಫೆಬ್ರವರಿ 13: ಮದ್ಯದ ಅಮಲಿನಲ್ಲಿ ಮಹಾರಾಷ್ಟ್ರದ ಪುಣೆ ನಗರದಲ್ಲಿನ ಗೂಗಲ್ ಕಂಪನಿಯ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ ವ್ಯಕ್ತಿಯೊಬ್ಬನನ್ನು ಹೈದರಾಬಾದ್ನಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆ ವ್ಯಕ್ತಿ ಆವರಣದಲ್ಲಿ ಬಾಂಬ್ ಹಾಕಿರುವುದಾಗಿ ಕರೆ ಮಾಡಿದ್ದನು. ಬಳಿಕ ಕಚೇರಿಯಲ್ಲಿ ಉದ್ವೀಘ್ನ ವಾತಾವರಣ ಸೃಷ್ಟಿಯಾಗಿ ಸ್ವಲ್ಪ ಸಮಯದವರೆಗೆ ಅಲರ್ಟ್ ಮಾಡಲಾಗಿತ್ತು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಗೂಗಲ್ ಕಚೇರಿಗೆ ಭಾನುವಾರ ಸಂಜೆ 7.54ಕ್ಕೆ ಈ ವ್ಯಕ್ತಿ ಕರೆ ಮಾಡಿದ್ದನು. ಮುಂಬೈನ ಮುಂಡ್ವಾ ಪ್ರದೇಶದ ಬಹುಮಹಡಿ ವಾಣಿಜ್ಯ ಕಟ್ಟಡದ 11ನೇ ಮಹಡಿಯಲ್ಲಿರುವ ಕಂಪನಿಯ ಪುಣೆ ಕಚೇರಿಯಲ್ಲಿ ಬಾಂಬ್ ಇರಿಸಲಾಗಿದೆ ಎಂದು ಆತ ದೂರವಾಣಿ ಕರೆ ಮಾಡಿದ್ದನು.

ಬಳಿಕ ಕಂಪನಿಯ ಅಧಿಕಾರಿಗಳು ಸ್ಥಳಿಯ ಪೊಲೀಸರಿಗೆ ದೂರು ನೀಡಿದ್ದು, ಅವರು ಆ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಿದರು. ಭಾರತೀಯ ದಂಡ ಸಂಹಿತೆ ಸೆಕ್ಷನ್ 505(1)(B) (ಇದು ಸಾರ್ವಜನಿಕರಿಗೆ ಭಯ ಉಂಟುಮಾಡುವ ಉದ್ದೇಶ) ಮತ್ತು 506 (ಕ್ರಿಮಿನಲ್ ಬೆದರಿಕೆ) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.
ಕರೆ ನಂತರ ಮುಂಬೈ ಪೊಲೀಸರು ತರುವಾಯ ತಮ್ಮ ಪುಣೆಯ ಪೊಲೀಸರಿಗೆ ಮಾಹಿತಿಯನ್ನು ಹಂಚಿಕೊಂಡು ಎಚ್ಚರಿಕೆ ನೀಡಿದರು. ಬಳಿಕ ಪುಣೆ ಪೊಲೀಸರು ಮತ್ತು ಬಾಂಬ್ ಪತ್ತೆ ಮತ್ತು ವಿಲೇವಾರಿ ದಳವು ಸ್ಥಳಕ್ಕೆ ಧಾವಿಸಿ ವ್ಯಾಪಕ ಶೋಧ ನಡೆಸಿತು ಎಂದು ಪುಣೆ ಉಪ ಪೊಲೀಸ್ ಆಯುಕ್ತ (5ನೇ ವಲಯ) ವಿಕ್ರಾಂತ್ ದೇಶಮುಖ್ ತಿಳಿಸಿದರು.
ಆದರೆ ಈ ಕರೆ ಸುಳ್ಳು ಎಂದು ತಿಳಿದುಬಂದಿತು. ನಂತರ ಕರೆ ಮಾಡಿದವರನ್ನು ಹೈದರಾಬಾದ್ನಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಆತ ಮದ್ಯದ ಅಮಲಿನಲ್ಲಿ ಕರೆ ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications