Bomb Threat to Ram Mandir: ಉದ್ಘಾಟನೆಗೂ ಮುನ್ನ ರಾಮಮಂದಿರಕ್ಕೆ ಬಾಂಬ್ ಬೆದರಿಕೆ: ಯೋಗಿ ಆದಿತ್ಯನಾಥ್ಗೂ ಪ್ರಾಣಕಂಠಕ!
ನವದೆಹಲಿ ಜನವರಿ 1: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಶುಭ ಗಳಿಗೆಯಲ್ಲಿ ದೇಶಾದ್ಯಂತದ ಸಂತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ ಈ ನಡುವೆಯೇ ದೇವಸ್ಥಾನಕ್ಕೆ ಬಾಂಬ್ ಹಾಕುವುದಾಗಿ ಇಮೇಲ್ ಮೂಲಕ ಬೆದರಿಕೆಯ ಸಂದೇಶವೊಂದು ಬಂದಿದೆ.
ಈ ಸಂದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್ಟಿಎಫ್ ಎಡಿಜಿ ಅಮಿತಾಬ್ ಯಶ್ಗೂ ಬೆದರಿಕೆಯನ್ನು ಹಾಕಲಾಗಿದೆ. ಬೆದರಿಕೆ ಸಂದೇಶ ಕಳುಹಿಸಿದವರು ಐಎಸ್ಐ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಇದರಿಂದಾಗಿ ಪೊಲೀಸರು ಕೂಡಲೇ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆದರಿಕೆ ಇಮೇಲ್ ಭದ್ರತೆ ಹೆಚ್ಚಳ
ಭಾರತೀಯ ಕಿಸಾನ್ ಮಂಚ್ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಇಮೇಲ್ ಕಳುಹಿಸಲಾಗಿದೆ. ಅದರಲ್ಲಿ ಆಕ್ಷೇಪಾರ್ಹ ಭಾಷೆಯನ್ನು ಬಳಸಲಾಗಿದೆ ಎಂದೂ ಹೇಳಲಾಗುತ್ತಿದೆ. ಕಳುಹಿಸುವವರು ಜುಬೇರ್ ಹುಸೇನ್ ಖಾನ್ ಎಂದು ಬರೆದಿದ್ದಾರೆ. ಈ ಅಪರಿಚಿತ ಸಂದೇಶದಾರ ದೇವಸ್ಥಾನಕ್ಕೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, STF ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಸ್ವತಃ ದೇವೇಂದ್ರ ತಿವಾರಿಗೂ ಬೆದರಿಕೆ ಹಾಕಿದ್ದಾನೆ.
ತಿವಾರಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತನಗೆ ಇಂತಹ ಬೆದರಿಕೆಗಳು ಬರುತ್ತಿರುವುದು ಇದೇ ಮೊದಲಲ್ಲ. ಹಿಂದಿನ ಸಂದರ್ಭದಲ್ಲಿ ಎಫ್ಐಆರ್ ದಾಖಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರು ಖಚಿತವಾದ ಕ್ರಮಗಳನ್ನು ತೆಗೆದುಕೊಳ್ಳದೆ ಭರವಸೆಯನ್ನು ಮಾತ್ರ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ 27ರ ಸಂಜೆ ದೇವೇಂದ್ರ ತಿವಾರಿ ಅವರಿಗೆ ಈ ಬೆದರಿಕೆ ಇಮೇಲ್ ಕಳುಹಿಸಲಾಗಿದೆ.
ರಾಮಮಂದಿರ ಶಂಕುಸ್ಥಾಪನೆ ಸಂದರ್ಭದಲ್ಲಿ ಏಕತೆಗಾಗಿ ಮನವಿ
ಆರ್ಎಸ್ಎಸ್-ಸಂಯೋಜಿತ ಮುಸ್ಲಿಂ ರಾಷ್ಟ್ರೀಯ ಮಂಚ್ನ ಮುಖ್ಯ ಪೋಷಕರಾದ ಇಂದ್ರೇಶ್ ಕುಮಾರ್, ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಮುಸ್ಲಿಮರು ಮತ್ತು ವಿವಿಧ ಧರ್ಮಗಳ ಜನರು ಶಾಂತಿಯುತವಾಗಿರಲು ಒತ್ತಾಯಿಸಿದರು.
ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯುವ ಪ್ರಯುಕ್ತ 'ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್' ಎಂಬ ಮಂತ್ರ ಪಠಿಸುಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಸ್ಲಿಂ ರಾಷ್ಟ್ರೀಯ ಮಂಚ್ ಮುಖ್ಯ ಪೋಷಕ ಮತ್ತು ಆರ್ಎಸ್ಎಸ್ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಅವರು ಮುಸ್ಲಿಮರು ಮತ್ತು ಇತರರಿಗೆ ಕರೆ ನೀಡಿದ್ದಾರೆ.
ದರ್ಗಾಗಳು, ಮಕ್ತಬ್ಗಳು, ಮದರಸಾಗಳು ಮತ್ತು ಮಸೀದಿಗಳಲ್ಲಿ 'ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್' ಪಠಣ ಮಾಡಬೇಕು ಎಂಬುದಾಗಿ ಎಂಆರ್ಎಂ ಮನವಿ ಮಾಡಿದೆ. ಅದನ್ನೇ ಪುನರುಚ್ಚರಿಸುತ್ತೇನೆ ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ದೇಶದ ವೈವಿಧ್ಯಮಯ ಧಾರ್ಮಿಕ ಸಮುದಾಯಗಳ ಪರಂಪರೆ ಮತ್ತು ವಂಶಾವಳಿಯನ್ನು ಪ್ರಸ್ತಾಪಿಸಿದ ಅವರು, ಸುಮಾರು ಶೇ 99 ರಷ್ಟು ಮುಸ್ಲಿಮರು ಮತ್ತು ಇತರ ಹಿಂದೂಯೇತರರು ಭಾರತದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ.
"ರಾಮ ಮಂದಿರ್, ರಾಷ್ಟ್ರ ಮಂದಿರ್ - ಎ ಕಾಮನ್ ಹೆರಿಟೇಜ್" ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಕುಮಾರ್, ಮನೆತನ, ಧಾರ್ಮಿಕ ನಂಬಿಕೆ ಇತ್ಯಾದಿ ವ್ಯತ್ಯಾಸಗಳ ಹೊರತಾಗಿಯೂ ದೇಶದ ಮುಸ್ಲಿಮರು ಹಾಗೂ ಇತರ ಹಿಂದೂಯೇತರರು ಭಾರತದ ಅವಿಭಾಜ್ಯ ಅಂಗವೇ ಆಗಿದ್ದಾರೆ ಎಂದಿದ್ದಾರೆ. ಜತೆಗೆ, ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ಸಾಮೂಹಿಕ ಅಭಿವ್ಯಕ್ತಿಗೆ ಕರೆ ನೀಡಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications