ಗುಜರಾತ್, ಹಿ. ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೇ ಬುಕ್ಕಿಗಳ ಗೆಲ್ಲುವ ಫೇವರಿಟ್
ಅಹಮದಾಬಾದ್, ನವೆಂಬರ್ 6: ಹಿಮಾಚಲ ಪ್ರದೇಶ ಮತ್ತು ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತೆ ಎಂದು ಮಾಧ್ಯಮ ಸಮೀಕ್ಷೆಗಳು ಮಾತ್ರ ಹೇಳುತ್ತಿಲ್ಲ. ಈ ಮಾತನ್ನು ಬುಕ್ಕಿಗಳೂ ಹೇಳುತ್ತಿದ್ದಾರೆ.
ಗುಜರಾತ್ ನಲ್ಲಿ 2012ರಲ್ಲಿ ಬಿಜೆಪಿ ಗೆದ್ದಿದ್ದಕ್ಕಿಂತೆ ಕಡಿಮೆ ಸ್ಥಾನಗಳನ್ನು ಗೆಲ್ಲಲಿದೆ ಎಂದು ಬುಕ್ಕಿಗಳ ವಲಯದಲ್ಲಿ ಮಾತುಗಳು ಓಡಾಡುತ್ತಿವೆ. ಆದರೆ ಸರಳ ಬಹುಮತಕ್ಕೆ ಬೇಕಾದಷ್ಟು ಸ್ಥಾನಗಳನ್ನು ಬಿಜೆಪಿ ಸುಲಭವಾಗಿ ಗೆಲ್ಲಲಿದೆ ಎಂದು ಬುಕ್ಕಿಗಳು ನಂಬಿದ್ದಾರೆ.

182 ಸದಸ್ಯಬಲದ ಗುಜರಾತ್ ನಲ್ಲಿ 90ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ಸರಕಾರ ರಚಿಸಲಿದೆ ಎಂದು ಬೆಟ್ ಕಟ್ಟುವವರಿಗೆ ಬುಕ್ಕಿಗಳು ಒಂದು ರೂಪಾಯಿಗೆ 0.32 ಪೈಸೆ ಬೆಲೆ ನಿಗದಿ ಪಡಿಸಿದ್ದಾರೆ. ಅಂದರೆ ಒಂದೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ರೂಪಾಯಿಗೆ ಪ್ರತಿಯಾಗಿ ಒಂದು ರೂಪಾಯಿ 32 ಪೈಸೆ ಬೆಟ್ ಕಟ್ಟಿದವರ ಜೇಬಿಗೆ ಸೇರಲಿದೆ.
ಆದರೆ ಬಿಜೆಪಿ 120 ಸೀಟುಗಳನ್ನು ಗೆಲ್ಲಲಿದೆ ಎಂದು ಬೆಟ್ ಕಟ್ಟುವವರಿಗೆ 1:2.15 ಬೆಲೆ ನಿಗದಿ ಪಡಿಸಲಾಗಿದೆ.
ಇನ್ನು ಕಾಂಗ್ರೆಸ್ 80 ಸೀಟು ಗೆಲ್ಲಲಿದೆ ಎನ್ನುವವರಿಗೂ ಇಷ್ಟೇ ಬೆಲೆ ನಿಗದಿಪಡಿಸಲಾಗಿದೆ. ಅಂದರೆ ರೂಪಾಯಿಗೆ 2.15 ರೂಪಾಯಿ ಸಿಗಲಿದೆ.
ಮುಂಬೈನ 'ಸತ್ತಾ ಬಜಾರಿ' ಟ್ರೆಂಡ್ ನ್ನೇ ದೇಶದಾದ್ಯಂತ ಬೆಂಬಲಿಸಲಾಗುತ್ತಿದ್ದು ಚುನಾವಣಾ ವಿಚಾರಕ್ಕೆ ಬಂದಾಗ ಇಲ್ಲಿನ ಬುಕ್ಕಿಗಳ ಭವಿಷ್ಯ ಹೆಚ್ಚಿನ ಪಾಲು ಸತ್ಯವಾಗಿದೆ. ಹೀಗಾಗಿ ಎರಡೂ ರಾಜ್ಯಗಳಲ್ಲಿ ಬಿಜೆಪಿ ಬರಬಹುದು ಎಂಬ ನಂಬಿಕೆ ಮತ್ತಷ್ಟು ಪ್ರಬಲವಾಗಿದೆ.
ಒಟ್ಟಾರೆ ಗುಜರಾತ್ ಚುನಾವಣೆಯ ಸುತ್ತ 25,000 ಕೋಟಿ ರೂಪಾಯಿ ಬೆಟ್ಟಿಂಗ್ ನಡೆಯಹುದು ಎಂದು ಅಂದಾಜಿಸಲಾಗಿದೆ.
ಹಿಮಾಚಲ ಪ್ರದೇಶದಲ್ಲೂ ಬಿಜೆಪಿ
ಇನ್ನು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ನಂಬಿಕೆಯನ್ನು ಬುಕ್ಕಿಗಳು ಇಟ್ಟುಕೊಂಡಿದ್ದಾರೆ.
68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 35ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬೆಟ್ ಕಟ್ಟಿದವರಿಗೆ 0.22 ಪೈಸೆ ಬೆಲೆ ನಿಗದಿ ಮಾಡಲಾಗಿದೆ. ಕಾಂಗ್ರೆಸ್ 30 ಸ್ಥಾನಗಳನ್ನು ಗೆಲ್ಲಲಿದೆ ಎನ್ನುವವರರಿಗೆ 1:2.75 ಬೆಲೆ ನಿಗದಿ ಮಾಡಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications