ಉತ್ತರಪ್ರದೇಶ ಚುನಾವಣೆಗೆ ಹೋಲಿಸಿದರೆ ಗುಜರಾತಿನ ಮಾರ್ಕೆಟ್ ಡೌನ್!
ಅಹಮದಾಬಾದ್, ನವೆಂಬರ್ 30: ಗುಜರಾತಿನಲ್ಲಿ ಮತ್ತೊಮ್ಮೆ ಕೇಸರಿ ಬಾವುಟ ಹಾರಲಿದೆ ಎಂದು ಬುಕ್ಕಿಗಳು ಸಾವಿರಾರು ಕೋಟಿ ರು ಬೆಟ್ಟಿಂಗ್ ಕಟ್ಟಿರುವ ಸುದ್ದಿ ಓದಿರಬಹುದು.
ಆದರೆ, ಈ ಬೆಟ್ಟಿಂಗ್ ಗೆ ಆಧಾರವಾಗಿದ್ದ ಸಮೀಕ್ಷಾ ವರದಿಗಳ ಅಂಕಿ ಅಂಶಗಳ ತಪ್ಪು ಗ್ರಹಿಕೆಯಿಂದ ನಷ್ಟ ಅನುಭವಿಸುವ ಮುನ್ಸೂಚನೆ ಸಿಕ್ಕಿದ್ದು, ಈ ಬಾರಿ ನಿರೀಕ್ಷೆಗಿಂತ ಭಾರಿ ಕಡಿಮೆ ಮೊತ್ತದ ಬಿಡ್ಡಿಂಗ್ ನಡೆದಿದೆ.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಕಾಣಲು ಯತ್ನಿಸುತ್ತಿರುವ ಬಿಜೆಪಿ ಪರ ಬುಕ್ಕಿಗಳು ಕೂಡಾ ನಿಂತಿದ್ದಾರೆ.
ಉತ್ತರಪ್ರದೇಶಕ್ಕೆ ಹೋಲಿಸಿದರೆ ಗುಜರಾತಿನಲ್ಲಿ ನಾಲ್ಕು ಪಟ್ಟು ಕಡಿಮೆ ಮೊತ್ತದಲ್ಲಿ ಬೆಟ್ಟಿಂಗ್ ನಡೆದಿದೆ. ಉತ್ತರಪ್ರದೇಶದಲ್ಲಿ ಸುಮಾರು 4,000 ಕೋಟಿ ರು ಮೌಲ್ಯದ ವ್ಯವಹಾರ ನಡೆಸಿದ್ದ ಬುಕ್ಕಿಗಳು ಗುಜರಾತಿನಲ್ಲಿ 1,000 ಕೋಟಿ ರು ಮಾತ್ರ ಬೆಟ್ಟಿಂಗ್ ನಲ್ಲಿ ತೊಡಗಿಸಲಾಗಿದೆ.

ಬೆಟ್ಟಿಂಗ್ ರೇಟ್ ನಲ್ಲಿ ಬದಲಾವಣೆ ಇಲ್ಲ
ಬೆಟ್ಟಿಂಗ್ ಅಕ್ರಮವಾಗಿದ್ದರೂ ಬಿಜೆಪಿ ಪರ ಬುಕ್ಕಿಗಳು ಬೆಟ್ಟಿಂಗ್ ನಡೆಸುತ್ತಿದ್ದಾರೆ. ಸದ್ಯದ ರೇಟಿಂಗ್ ಪಟ್ಟಿಯಂತೆ ಬಿಜೆಪಿ ಗೆಲುವಿಗೆ 1 ರು ಗೆ 1.25ರಂತೆ ಟ್ರೆಂಡ್ ನಡೆಯುತ್ತಿದೆ.
ಇದೇ ರೀತಿ ಕಾಂಗ್ರೆಸ್ ಗೆದ್ದರೆ 1 ರುಗೆ 2 ರು ನಂತೆ ಬೆಟ್ಟಿಂಗ್ ರೇಟ್ ಇದೆ. ನವೆಂಬರ್ ತಿಂಗಳ ಆರಂಭದಲ್ಲಿ ಕಾಂಗ್ರೆಸ್ ಮೇಲೆ 1 ರು ಗೆ 7ರು ನಂತೆ ಇತ್ತು.
ಈಗ ಕಾಂಗ್ರೆಸ್ಸಿನ ಪ್ರಚಾರದ ಭರಾಟೆ ನೋಡಿದ ಮೇಲೆ ಕಾಂಗ್ರೆಸ್ ಬೆಲೆ ಹೆಚ್ಚಳವಾಗಿದೆ. ಆದರೆ, ಪ್ರಧಾನಿ ಮೋದಿ ಅವರು ಕೊನೆ ಕ್ಷಣದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದು ಮತ್ತೊಮ್ಮೆ ಮೋದಿ ಮಾತಿಗೆ ಜನತೆ ತಲೆದೂಗುತ್ತಿದ್ದು, ಬಿಜೆಪಿ ಪರ ಅಲೆ ಎದ್ದಿದೆ.

ಸೀಟು ಗಳಿಕೆ
ಬುಕ್ಕಿಗಳ ಪ್ರಕಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲುವು ತಪ್ಪಿಸಲು ಸಾಧ್ಯವಿಲ್ಲ. ವಿಜಯ್ ರೂಪಾನಿ ನೇತೃತ್ವದ ಬಿಜೆಪಿ ಈ ಬಾರಿ 118 ಸ್ಥಾನಗಳನ್ನು ಗೆಲ್ಲಲ್ಲಿದೆ (2012ರಲ್ಲಿ 119). ಮತ್ತೊಂದು ಬುಕ್ಕಿಗಳ ತಂಡದ ಪ್ರಕಾರ ಬಿಜೆಪಿಗೆ 100 ಸ್ಥಾನ ಲಭಿಸಬಹುದು. ಕಾಂಗ್ರೆಸ್ಸಿಗೆ 80 ಸೀಟು ಸಿಗುವ ಸಾಧ್ಯತೆಯಿದೆ.
ಈಗ ಬಂದಿರುವ ಮಾಹಿತಿ ಪ್ರಕಾರ ಬಿಜೆಪಿ 100-107 ಸೀಟು ಮಾತ್ರ ಗಳಿಸುವ ಸಾಧ್ಯತೆಯಿದೆ. ಹೀಗಾಗಿ ಮತ್ತೊಮ್ಮೆ ಬೆಟ್ಟಿಂಗ್ ಮೊತ್ತ ಇಳಿಕೆ ನಿರೀಕ್ಷಿಸಬಹುದು.

ಗ್ರಾಮೀಣ ಭಾಗದಲ್ಲಿ ಬಿಜೆಪಿ ಗೆಲುವು
ಪಾಟೀದಾರ್ ಗಳನ್ನು ಸಂಭಾಳಿಸುವಲ್ಲಿ ಕಾಂಗ್ರೆಸ್ ಸೋತಿರುವುದು ಆ ಪಕ್ಷಕ್ಕೆ ಮುಳುವಾಗಲಿದೆ. ನಗರ ಪ್ರದೇಶಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಕೋರ್ ಮಾಡಬಹುದು ಆದರೆ, ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಬಿಜೆಪಿ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದ್ದು, ಹೆಚ್ಚಿನ ಅಂತರದ ಗೆಲುವು ಸಾಧಿಸಲಿದೆ. ಜಿಎಸ್ ಟಿ ವಿರುದ್ಧ ಕಾಂಗ್ರೆಸ್ ಹೋರಾಟ ವ್ಯರ್ಥವಾಗಲಿದೆ ಎಂದು ಬುಕ್ಕಿ ಒನ್ ಇಂಡಿಯಾಕ್ಕೆ ಹೇಳಿದರು.

ಮೀಸಲಾತಿ ಯುದ್ಧ
ಹಾರ್ದಿಕ್ ಪಟೇಲ್, ಜಿಗ್ನೇಶ್ ಮೇವಾನಿ, ಅಲ್ಪೇಶ್ ಠಾಕೂರ್ ಅವರು ಕಾಂಗ್ರೆಸ್ ಪರ ನಿಂತಿರುವುದು ತುಂಬಾ ತಡವಾಗಿದ್ದರಿಂದ ಹೆಚ್ಚಿನ ಲಾಭ ಸಿಗುತ್ತಿಲ್ಲ. ಇನ್ನೂ ಈ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲವಿದೆ. ಮೀಸಲಾತಿಯೊಂದೇ ಈ ಬಾರಿಯ ಸಮಸ್ಯೆಯಲ್ಲ, ಇದು ಬಿಜೆಪಿಗೆ ಪ್ರತಿಷ್ಠೆಯ ಯುದ್ಧವಾಗಿದೆ ಎಂದು ಬುಕ್ಕಿ ಮಾಹಿತಿ ನೀಡಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications