ಗಡಿ ಹಿಂಸಾಚಾರ: ಅಸ್ಸಾಂ ಸಿಎಂ, ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ ಮಿಜೋರಾಂ ಪೊಲೀಸರು
ಗುವಾಹಟಿ, ಜು.31: ಈಶಾನ್ಯ ರಾಜ್ಯವಾದ ಅಸ್ಸಾಂ ಮತ್ತು ಮಿಜೋರಾಂನ ಗಡಿಯಲ್ಲಿ ಎರಡೂ ರಾಜ್ಯಗಳ ಪೊಲೀಸರ ನಡುವೆ ರಕ್ತಸಿಕ್ತ ಘರ್ಷಣೆ ನಡೆದಿತ್ತು. ಈ ಉಭಯ ರಾಷ್ಟ್ರಗಳ ನಡುವಿನ ಗುಂಡಿನ ಚಕಮಕಿಯಲ್ಲಿ 6 ಅಸ್ಸಾಂ ಪೊಲೀಸರು ಸಾವನ್ನಪ್ಪಿದ್ದರು. ಈಗ ಈ ಪ್ರಕರಣಕ್ಕೆ ಸಂಬಂಧಿಸಿ ಮಿಜೋರಾಂ ಪ್ರಕರಣ ದಾಖಲು ಮಾಡಿದೆ. ಈ ಪ್ರಕರಣದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ನೆರೆಯ ರಾಜ್ಯದ ಇತರ ಉನ್ನತ ಅಧಿಕಾರಿಗಳನ್ನು ಹೆಸರಿಸಿದೆ ಎಂದು ವರದಿ ತಿಳಿಸಿದೆ.
ಅಸ್ಸಾಂನ ಕ್ಯಾಚಾರ್ ನ ಗಡಿಭಾಗದಲ್ಲಿರುವ ಮಿಜೋರಾಂನ ಕೊಲಾಸಿಬ್ ಜಿಲ್ಲೆಯ ವೈರೆಂಗ್ಟೆ ಪೊಲೀಸ್ ಠಾಣೆಯಲ್ಲಿ "ಕೊಲೆ ಯತ್ನ" ಸೇರಿದಂತೆ ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ಸಲ್ಲಿಸಲಾಗಿದೆ. ಅಸ್ಸಾಂ ಪೊಲೀಸ್ ಸಿಬ್ಬಂದಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದು, ಘಟನೆಯ ದಿನ ಮಿಜೋರಾಂ ಪೊಲೀಸರೊಂದಿಗೆ "ಸೌಹಾರ್ದಯುತ ಸಂವಾದ" ನಡೆಸಲು ನಿರಾಕರಿಸಿದರು ಎಂದು ವರದಿ ತಿಳಿಸಿದೆ.
"ಅಸ್ಸಾಂ ಪೊಲೀಸರು ಬಲವಂತವಾಗಿ ಎಸ್ಪಿ, ಕೋಲಾಸಿಬ್ಗೆ ಈ ಪ್ರದೇಶವು ಅಸ್ಸಾಂ ಪ್ರದೇಶದ ವ್ಯಾಪ್ತಿಗೆ ಬರುತ್ತದೆ ಮತ್ತು ಅಸ್ಸಾಂನ ಮುಖ್ಯಮಂತ್ರಿಯ ಸೂಚನೆಯಂತೆ ಶಿಬಿರವನ್ನು ನಿರ್ಮಿಸಲು ಉದ್ದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ," ಎಂದು ಎಫ್ಐಆರ್ ಹೇಳಿದೆ.

ಗುಡಾರಗಳು ಮತ್ತು ಇತರ ಸಾಮಗ್ರಿಗಳೊಂದಿಗೆ ಅಸ್ಸಾಂ ಪೊಲೀಸರು ಶಿಬಿರ ನಿರ್ಮಾಣಕ್ಕಾಗಿ ಸ್ಥಳಕ್ಕೆ ಬಂದಿದ್ದರು. ಇದು ಮಿಜೋರಾಂ ಬಿಒಪಿಯನ್ನು ಬಲವಂತವಾಗಿ ಆಕ್ರಮಿಸಿಕೊಳ್ಳುವ ಉದ್ದೇಶವನ್ನು ಸ್ಪಷ್ಟವಾಗಿ ತೋರಿಸಿದೆ. ಏಕೆಂದರೆ ಅಸ್ಸಾಂ ಪೊಲೀಸರೊಂದಿಗೆ ವಾಹನಗಳ ಬೆಂಗಾವಲು ಆಂಬುಲೆನ್ಸ್ ಮತ್ತು ಸುಮಾರು 20 ವಾಹನಗಳು ಇದ್ದವು," ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಎಫ್ಐಆರ್ನಲ್ಲಿ ಉಲ್ಲೇಖಿಸಿರುವ ಪೊಲೀಸರಲ್ಲಿ ಅಸ್ಸಾಂ ಇನ್ಸ್ಪೆಕ್ಟರ್ ಜನರಲ್, ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್, ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದ್ದಾರೆ. ಕ್ಯಾಚಾರ್ ಜಿಲ್ಲಾ ಉಪ ಆಯುಕ್ತರನ್ನು ಸಹ ಎಫ್ಐಆರ್ನಲ್ಲಿ ಸೇರಿಸಲಾಗಿದೆ. ಜೊತೆಗೆ 200 ಅನಾಮದೇಯ ಪೊಲೀಸ್ ಸಿಬ್ಬಂದಿಗಳನ್ನು ಸೇರಿಸಲಾಗಿದೆ. ಹಾಗೆಯೇ ಆಗಸ್ಟ್ 1 ರಂದು ವೈರೆಂಗ್ಟೆ ಪೊಲೀಸ್ ಠಾಣೆಯಲ್ಲಿ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಎರಡು ರಾಜ್ಯ ಪೊಲೀಸ್ ಪಡೆಗಳ ನಡುವಿನ ಸೋಮವಾರದ ಘರ್ಷಣೆಗೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ಮಿಜೋರಾಂ ಅಧಿಕಾರಿಗಳಿಗೆ ಮತ್ತು ಇನ್ನೊಬ್ಬರು ರಾಜ್ಯಸಭೆಯ ಮಿಜೋರಾಂನ ಕೆ ವನ್ಲಾಲ್ವೇನಾಗೆ ಸಮನ್ಸ್ ನೀಡಿದ ದಿನವೇ ಅಸ್ಸಾಂನ ಆರು ಹಿರಿಯ ಅಧಿಕಾರಿಗಳಿಗೆ ಹಾಜರಾಗುವಂತೆ ಮಿಜೋರಾಂ ಪೊಲೀಸರು ನೋಟಿಸ್ ನೀಡಿದರು.

ಎರಡು ರಾಜ್ಯಗಳು ದಶಕಗಳಿಂದ ಗಡಿ ವಿಚಾರದಲ್ಲಿ ಭಿನ್ನಾಭಿಪ್ರಾಯದಲ್ಲಿದ್ದವು. ಆದರೆ ಈ ವಾರ ವಿಷಯಗಳು ಭುಗಿಲೆದ್ದವು. ಸೋಮವಾರ, ಈ ಎರಡು ಜಿಲ್ಲೆಗಳ ನಡುವಿನ ಗಡಿ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಉಭಯ ರಾಷ್ಟ್ರಗಳೆರಡು ಹಿಂಸಾಚಾರಕ್ಕೆ ಕಾರಣ ಯಾರು ಎಂಬ ವಿಚಾರದಲ್ಲಿ ಪರಸ್ಪರ ಬೊಟ್ಟು ಮಾಡಿದ್ದಾರೆ.
ಗಡಿ ವಿವಾದ ಪ್ರಾರಂಭವಾದದ್ದು ಹೇಗೆ?
ಅಸ್ಸಾಂ ಮತ್ತು ಮಿಜೋರಾಂ ಗಡಿ ಸುಮಾರು 164 ಕಿ.ಮೀ. ವ್ಯಾಪ್ತಿಯಲ್ಲಿದೆ. ಈ ಗಡಿ ಐಜಾಲ್, ಕೋಲಾಸಿಬ್, ಮಿಜೋರಾಂನ ಮಾಮಿತ್ ಮತ್ತು ಅಸ್ಸಾಂನ ಕಚಾರ್, ಹೈಲೆ ಕಂಡಿ ಮತ್ತು ಕರಿಮ್ಗಂಜ್ ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ. ಈ ಗಡಿಯ ಸಮೀಪವಿರುವ ಗುಟ್ಗುಟಿ ಗ್ರಾಮದ ಬಳಿ ಮಿಜೋರಾಂ ಪೊಲೀಸರು ಕೆಲವು ತಾತ್ಕಾಲಿಕ ಶಿಬಿರಗಳನ್ನು ಸ್ಥಾಪಿಸಿದಾಗ ವಿವಾದ ಪ್ರಾರಂಭವಾಗಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದ ನಂತರ, ಈಗ ಈ ಪ್ರದೇಶದಲ್ಲಿ ವಾತಾವರಣ ಬಿಗುವಾಗಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ ಈ ಪ್ರದೇಶಗಳಲ್ಲಿ ತನ್ನ ಸಿಬ್ಬಂದಿಗಳ ನಿಯೋಜನೆಯನ್ನು ಹೆಚ್ಚಿಸಿದೆ. ಅಸ್ಸಾಂ ಮತ್ತು ಮಿಜೋರಾಂನ ಪೊಲೀಸ್ ಪಡೆಗಳ ನಡುವೆ ಐದು ಕಂಪನಿಗಳು (ಒಟ್ಟು 500 ಪಡೆಗಳು) ನಿಂತಿವೆ. ಇನ್ನೂ ಎರಡು ಕಂಪನಿಗಳು ಸನ್ನದ್ಧ ಸ್ಥಿತಿಯಲ್ಲಿವೆ. ಅಸ್ಸಾಂ ವಿಧಾನಸಭೆಯ ಸರ್ವಪಕ್ಷ ನಿಯೋಗವು ಗಡಿ ಪ್ರದೇಶಗಳಿಗೆ ಮತ್ತು ಸೋಮವಾರ ಹಿಂಸಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಲು ಸಿದ್ಧತೆ ನಡೆಸಿದೆ.
(ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications