ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್
ನವದೆಹಲಿ, ಮಾರ್ಚ್ 22: ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಬರುವ ಏಪ್ರಿಲ್ 26ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಜಾನ್ಸನ್ ಬೆಂಗಳೂರು, ಪುಣೆ, ಮುಂಬೈ ಹಾಗೂ ಚೆನ್ನೈಗೆ ಭೇಟಿ ನೀಡಲಿದ್ದಾರೆ, ಈ ಮೊದಲು ಗಣರಾಜ್ಯೋತ್ಸವ ಪರೇಡ್ಗೆ ಬೋರಿಸ್ ಜಾನ್ಸನ್ ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೊರೊನಾದಿಂದಾಗಿ ಭಾರತ ಭೇಟಿಯನ್ನು ಮುಂದೂಡಲಾಗಿತ್ತು.
ಮುಂಬರುವ ವರ್ಷಗಳಲ್ಲಿ ಬ್ರಿಟನ್ ಸರಕಾರದ ನೀತಿಯ ಸಮಗ್ರ ವಿಮರ್ಶೆಯ ಭಾಗವಾಗಿ ಇಂಡೋ-ಪೆಸಿಫಿಕ್ ಪ್ರದೇಶದತ್ತ ತನ್ನ ಗಮನವನ್ನು ಹರಿಸಲಿದೆ.
ಈ ಪ್ರದೇಶವು ವಿಶ್ವದ ಭೌಗೋಳಿಕ ರಾಜಕೀಯ ಕೇಂದ್ರವನ್ನು ಹೆಚ್ಚು ಪ್ರತಿನಿಧಿಸುತ್ತಿರುವ ಹಿನ್ನೆಲೆ, ಇಂಡೋ-ಪೆಸಿಫಿಕ್ ಪ್ರದೇಶದತ್ತ ಹೆಚ್ಚಿನ ಗಮನ ಹರಿಸಲಿದೆ ಎಂದು ಅಲ್ಲಿನ ಸರಕಾರ ಹೇಳಿದೆ.
ಕೊರೊನಾ ಲಸಿಕೆ ಹಾಕಿಸಿಕೊಂಡ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್
ಹೀಗಾಗಿ ಮೋದಿ ಹಾಗೂ ಜಾನ್ಸನ್ ಮಙಾತುಕತೆಯಲ್ಲಿ ಇಂಡೋ-ಪೆಸಿಫಿಕ್ ಪ್ರದೇಶದ ಬಗ್ಗೆ ಜಾಸ್ತಿ ಮಾತುಕತೆ ನಡೆಯಲಿದೆ ಎಂದು ತಿಳಿದುಬಂದಿದೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಬಲ ಪ್ರದರ್ಶನಕ್ಕೂ ಒತ್ತು ನೀಡುವ ಬಗ್ಗೆ ಚರ್ಚೆ ಸಾಧ್ಯತೆ ಇದೆ.
ಕೊರೊನಾ ಹೊಸ ರೂಪಾಂತರ ಎಫೆಕ್ಟ್:ಭಾರತದ ಭೇಟಿಯನ್ನು ರದ್ದುಗೊಳಿಸಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್
ಉಭಯ ದೇಶಗಳ ಮಧ್ಯೆ ದ್ವಿಪಕ್ಷೀಯ ಬಾಂಧವ್ಯ, ಸಹಕಾರ ವರ್ಧನೆಗೆ, ಅವಕಾಶಗಳ ವೃದ್ಧಿಗೆ ಇಂಗ್ಲೆಂಡ್ ಪ್ರಧಾನಿಯ ಈ ಭೇಟಿ ಸಹಾಯವಾಗಲಿದೆ ಎಂದು ಅವರ ಕಚೇರಿ ತಿಳಿಸಿದೆ.
Recommended Video
ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಮಾತುಕತೆಯನ್ನು ಚುರುಕುಗೊಳಿಸುವ ಪ್ರಯತ್ನಗಳ ಭಾಗವಾಗಿ ಜಾನ್ಸನ್ ಜನವರಿಯಲ್ಲಿ ಭಾರತೀಯ ಪ್ರವಾಸವನ್ನು ಯೋಜಿಸಿದ್ದರು.