ಬ್ರಾಹ್ಮಣರ ವಿರುದ್ದ ಹೇಳಿಕೆ: ಛತ್ತೀಸ್ಗಢ ಸಿಎಂ ತಂದೆ ಜೈಲು ಪಾಲು
ರಾಯ್ಪುರ, ಸೆಪ್ಟೆಂಬರ್ 07: ಬ್ರಾಹ್ಮಣ ಸಮುದಾಯದ ವಿರುದ್ದ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತಂದೆ ನಂದ ಕುಮಾರ್ ಬಘೇಲ್ರನ್ನು ಬಂಧನ ಮಾಡಲಾಗಿದ್ದು, ರಾಯ್ಪುರದ ಕೋರ್ಟ್ 15 ದಿನಗಳ ಕಸ್ಟಡಿ ವಿಧಿಸಿದೆ.
ತನ್ನ ತಂದೆಯನ್ನು ಪೊಲೀಸರು ಬಂಧನ ಮಾಡಿದ್ದ ಬೆನ್ನಲ್ಲೇ ಈ ಬಗ್ಗೆ ಹೇಳಿಕೆ ನೀಡಿದ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, "ಕಾನೂನಿನ ಎದುರು ಎಲ್ಲರೂ ಸಮಾನರೇ, ನನ್ನ ಸರ್ಕಾರದಲ್ಲಿ ಯಾರೂ ಮೇಲಿಲ್ಲ," ಎಂದು ಹೇಳಿದ್ದಾರೆ.
"ನನ್ನ ಸರ್ಕಾರದಲ್ಲಿ ಎಲ್ಲರೂ ಕಾನೂನಿನ ಎದುರು ಸಮಾನರು. ಅದು ಮುಖ್ಯಮಂತ್ರಿಯ 86 ವರ್ಷದ ತಂದೆಯಾದರೂ ಕೂಡಾ ಕಾನೂನಿಗೆ ಸಮಾನರು. ಮುಖ್ಯಮಂತ್ರಿಯಾಗಿರುವ ನಾನು ಎಲ್ಲಾ ಸಮುದಾಯದ ನಡುವೆ ಏಕತೆ, ಸೌಹಾರ್ಧತೆಯನ್ನು ಕಾಪಾಡಿಕೊಳ್ಳುವಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ನನ್ನ ತಂದೆ ಯಾವುದೇ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದರೆ, ನಾನು ಕ್ಷಮೆ ಕೇಳುತ್ತೇನೆ. ಹಾಗೆಯೇ ಕಾನೂನು ಕ್ರಮವನ್ನು ಕೂಡಾ ಕೈಗೊಳ್ಳಲಾಗುವುದು," ಎಂದು ತಿಳಿಸಿದ್ದಾರೆ.

"ನನ್ನ ತಂದೆಗೂ ಹಾಗೂ ನನಗೂ ಇರುವ ಸಿದ್ದಾಂತದ ವ್ಯತ್ಯಾಸಗಳು ಎಲ್ಲರಿಗೂ ತಿಳಿದಿದೆ. ನಮ್ಮ ರಾಜಕೀಯ ಸಿದ್ದಾಂತಗಳು ಹಾಗೂ ನಂಬಿಕೆಗಳು ಬೇರೆ ಬೇರೆಯಾಗಿದೆ. ನಾನು ಆತನ ಮಗನಾಗಿ ನನ್ನ ತಂದೆಯನ್ನು ಗೌರವಿಸುತ್ತೇನೆ. ಆದರೆ ಮುಖ್ಯಮಂತ್ರಿಯಾಗಿ ನಾನು ನನ್ನ ತಂದೆಯನ್ನು ಈ ರೀತಿ ಸಮಾಜದ ಶಾಂತಿ ಕದಡುವ ಹೇಳಿಕೆ ನೀಡಿದರೂ ಕ್ಷಮಿಸಲು ಸಾಧ್ಯವಿಲ್ಲ," ಎಂದಿದ್ದಾರೆ.
ಹಾಗೆಯೇ "ಛತ್ತೀಸ್ಗಢ ಸರ್ಕಾರ ಎಲ್ಲ ಧರ್ಮ, ಜಾತಿ, ಸಮುದಾಯವನ್ನು ಗೌರವಿಸುತ್ತದೆ. ಎಲ್ಲರಿಗೂ ಸಮಾನವಾದ ಆದ್ಯತೆಯನ್ನು ನೀಡಲಾಗುವುದು," ಎಂದು ಈ ಸಂದರ್ಭದಲ್ಲೇ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, "ಮಗನಾಗಿ ನಾನು ತಂದೆಯನ್ನು ಕ್ಷಮಿಸಬಲ್ಲೆ, ಆದರೆ ಮುಖ್ಯಮಂತ್ರಿಯಾಗಿ ಇಂತಹ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಹೇಳಿಕೆ ನೀಡಿರುವುದನ್ನು ಕ್ಷಮಿಸಲು ಸಾಧ್ಯವಿಲ್ಲ," ಎಂದಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ "ಬ್ರಾಹ್ಮಣರು ವಿದೇಶಿಯರು. ಅವರನ್ನು ನಾವು ಬಹಿಷ್ಕರಿಸಬೇಕು. ಬ್ರಾಹ್ಮಣರನ್ನು ನಾವು ಗ್ರಾಮಗಳಿಗೆ ಬಿಟ್ಟುಕೊಳ್ಳಬಾರದು. ಅವರನ್ನು ದೇಶದಿಂದಲೇ ಹೊರ ಹಾಕಬೇಕು," ಎಂದು ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತಂದೆ ನಂದ ಕುಮಾರ್ ಬಘೇಲ್ ಹೇಳಿದ್ದರು.
ಈ ಹಿನ್ನೆಲೆ ಭಾನುವಾರ ಸರ್ವ ಬ್ರಾಹ್ಮಣ ಸಮಾಜ ನಂದ ಕುಮಾರ್ ಅವರ ವಿರುದ್ಧ ರಾಯ್ಪುರ ನಗರ ಠಾಣೆಗೆ ದೂರು ನೀಡಿದೆ. ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 153-A ( ಧರ್ಮ, ಜಾತಿ, ಭಾಷೆ ವಿಚಾರದಲ್ಲಿ ಎರಡು ಕೋಮುಗಳ ನಡುವೆ ದ್ವೇಷ ಸೃಷ್ಠಿಸುವುದು), 505(1)(b) (ಜನರಲ್ಲಿ ಭಯ ಮೂಡಿಸಿ ಅವರು ಅಪರಾಧ ಮಾಡುವಂತೆ ಮಾಡುವುದು) ರ ಅಡಿಯಲ್ಲಿ ದೂರು ದಾಖಲು ಮಾಡಿದ್ದಾರೆ. ಬ್ರಾಹ್ಮಣ ಸಮಾಜ ನೀಡಿದ ದೂರಿನನ್ವಯ ನಂದ ಕುಮಾರ್ ಬಘೇಲ್ ವಿರುದ್ಧ ದೀನ್ ದಯಾಳ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ಈಗ ಮುಖ್ಯಮಂತ್ರಿಯ ತಂದೆಯನ್ನೇ ಬಂಧನ ಮಾಡಲಾಗಿದೆ. ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
(ಒನ್ ಇಂಡಿಯಾ ಸುದ್ದಿ)
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications