Breaking: ಜಮ್ಮು ಕಾಶ್ಮೀರದ ಕಾರಾಗೃಹ ಡಿಜಿಪಿ ಹತ್ಯೆ: ಮನೆಗೆಲಸದ ಆರೋಪಿ ಬಂಧನ
ಶ್ರೀನಗರ ಅಕ್ಟೋಬರ್ 4: ರಾತ್ರಿಯಿಡೀ ನಡೆದ ಕಾರ್ಯಚರಣೆಯ ಬಳಿಕ ಜಮ್ಮು ಮತ್ತು ಕಾಶ್ಮೀರ ಮಹಾನಿರ್ದೇಶಕ (ಡಿಜಿ ಕಾರಾಗೃಹ) ಹೇಮಂತ್ ಕುಮಾರ್ ಲೋಹಿಯಾ ಹತ್ಯೆಯ ನಡೆದ ಕೆಲವೇ ಗಂಟೆಗಳಲ್ಲಿ ಅವರ ಶಂಕಿತ ಹಂತಕನನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಲೋಹಿಯಾ ಅವರ ನಿವಾಸದಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಮನೆಕೆಲಸಗಾರ ಯಾಸಿರ್ ಅಹ್ಮದ್ ಎಂಬಾತನನ್ನು ಬಂಧಿಸಲಾಗಿದೆ. ಸದ್ಯ ಆತನನ್ನು ಉನ್ನತ ಪೊಲೀಸ್ ಅಧಿಕಾರಿಯ ಕೊಲೆ ಆರೋಪದ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಮುಖೇಶ್ ಸಿಂಗ್ ಹೇಳಿದ್ದಾರೆ.
ಈ ಮಧ್ಯೆ, ಜಮ್ಮು ಮತ್ತು ಕಾಶ್ಮೀರ ಡಿಜಿಪಿ (ಡಿಜಿ ಕಾರಾಗೃಹ) ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನ ಅವರ ನಿವಾಸದಲ್ಲಿ ಹತ್ಯೆಗೀಡಾದ ಪ್ರಕರಣವು ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಯನ್ನು ಎತ್ತುವಂತೆ ಮಾಡಿದೆ. ಶಾ ಜಿಲ್ಲೆಗೆ ಭೇಟಿ ನೀಡಿದ ಗಂಟೆಗಳ ಹಿಂದೆ ಈ ಘಟನೆ ನಡೆದಿದೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಅಂಗಸಂಸ್ಥೆ ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್ಎಫ್) ಹತ್ಯೆಯ ಹಿಂದಿರುವ ಶಂಕೆ ಇದೆ.

ಜಮ್ಮು ಮತ್ತು ಕಾಶ್ಮೀರ ಕಾರಾಗೃಹ ಇಲಾಖೆ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರು ಸೋಮವಾರ ಅಕ್ಟೋಬರ್ 03 ರಂದು ಜಮ್ಮುವಿನ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖಾ ವರದಿ ಪ್ರಕಾರ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ದೇಹದ ಮೇಲೆ ಹಲವಾರು ಗಾಯದ ಗುರುತುಗಳೂ ಕಂಡುಬಂದಿವೆ. ಹತ್ಯೆಯ ನಂತರ ಕಾರಾಗೃಹ ಇಲಾಖೆಯ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರನ್ನು ಸುಟ್ಟು ಹಾಕಿರುವ ಪುರಾವೆಗಳೂ ಸಿಕ್ಕಿವೆ.
ಹೇಮಂತ್ ಕುಮಾರ್ ಲೋಹಿಯಾ ಅವರ ಮೆನಯ ಸೇವಕನೇ ಅವರನ್ನು ಕೊಂದಿದ್ದಾನೆ ಎಂದು ಪ್ರಾಥಮಿಕವಾಗಿ ಪೊಲೀಸರು ಶಂಕಿಸಿದ್ದಾರೆ. ಸೇವಕ ಜಮ್ಮು ಮತ್ತು ಕಾಶ್ಮೀರದ ರಾಂಬನ್ ನಿವಾಸಿಯಾಗಿದ್ದು, ಈತ ಘಟನೆ ಬಳಿಕ ತಲೆಮರೆಸಿಕೊಂಡಿದ್ದ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿ ಆತನ ಪತ್ತೆಯಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ಸೇರಿದಂತೆ ಎಲ್ಲಾ ಕೋನಗಳಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications