ಸ್ತನ್ಯಪಾನ ನನ್ನ ಧರ್ಮಕ್ಕೆ ವಿರುದ್ಧ ಅಂದ ಕೇರಳಿಗ
ಕನಿಷ್ಠ ಐದು ಬಾರಿ ಪ್ರಾರ್ಥನೆ ಪೂರ್ಣ ಆಗುವವರೆಗೆ ಆ ಮಗುವಿಗೆ ಮೊಲೆಯೂಡಿಸಬಾರದು ಎಂದು ಆತನಿಗೆ ಧರ್ಮಗುರುಗಳೊಬ್ಬರು ಹೇಳಿದ್ದರಂತೆ
ಕೋಳಿಕ್ಕೋಡ್, ನವೆಂಬರ್ 4: ಧಾರ್ಮಿಕ ಕಾರಣಗಳನ್ನು ಮುಂದು ಮಾಡಿ, ವ್ಯಕ್ತಿಯೊಬ್ಬ ತನ್ನ ಹೆಂಡತಿ ಮಗುವಿಗೆ ಹಾಲು ಕುಡಿಸುವುದನ್ನು ತಡೆದ ಘಟನೆ ಕೇರಳದ ಕೋಳಿಕ್ಕೋಡ್ ನಲ್ಲಿ ನಡೆದಿದೆ. ಇದು ನಂಬುವುದಕ್ಕೆ ಕಷ್ಟವಾದ ಸಂಗತಿಯಾದರೂ ನಿಜ. ಆತನಿಗೆ ಇದು ಮೊದಲನೇ ಮಗು. ಆಸ್ಪತ್ರೆಯ ವೈದ್ಯರೂ ಎಷ್ಟೇ ಹೇಳಿದರೂ ಕೇಳದ ಆತ, ಏನೂ ಆಗುವುದಿಲ್ಲ ಎಂದು ವಾದ ಮಾಡಿದ್ದಾನೆ.
ಆ ವ್ಯಕ್ತಿಯ ಹೆಸರು ಅಬೂಬಕರ್. ಆತನಿಗೆ ಧರ್ಮಗುರುಗಳೊಬ್ಬರು ಹೇಳಿದ್ದರಂತೆ, ಮೆಕ್ಕಾದ ನೀರು ಹಾಗೂ ಜೇನುತುಪ್ಪವನ್ನೇ ಮಗುವಿಗೆ ಕೊಡಬೇಕು ಅಂತ. ಇದು ಹಾಗಲ್ಲಪ್ಪ ಎಂದು ಆಸ್ಪತ್ರೆಯವರು ಆತನನ್ನು ಓಲೈಸುವುದಕ್ಕೆ ಯತ್ನಿಸಿದ್ದಾರೆ, ತಿಳಿ ಹೇಳಿದ್ದಾರೆ, ಕೊನೆಗೆ ಹೆದರಿಸಿಯೂ ನೋಡಿದ್ದಾರೆ. ಆದರೆ ಅದ್ಯಾವುದಕ್ಕೂ ಮಣಿಯದ ಅಬೂಬಕರ್, ಬಲವಂತವಾಗಿ ಆಸ್ಪತ್ರೆಯಿಂದ ಹೆಂಡತಿಯನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಹೋಗಿದ್ದಾನೆ.[ಎದೆಹಾಲು ಕುಡಿಸುತ್ತಿದ್ದ ಅಮ್ಮನ ಸ್ಲಟ್ ಎಂದ ದಂಪತಿ]

ಅದಕ್ಕೂ ಮುನ್ನ, ಹೊಕ್ಕುಳ ಬಳ್ಳಿ ನಾಳದ ಮೂಲಕ ಮಗುವಿಗೆ ಅಗತ್ಯ ಪೋಷಕಾಂಶ ದೊರೆಯುತ್ತದೆ ಎಂದು ಅಬೂಬಕರ್ ವೈದ್ಯರ ಜೊತೆಗೆ ವಾದ ಕೂಡ ಮಾಡಿದ್ದಾನೆ. ಆತನ ವಾದದಿಂದ ಆಸ್ಪತ್ರೆ ಅಧಿಕಾರಿಗಳು ಅಸಮಾಧಾನಗೊಂಡು, ಕೋಳಿಕೋಡ್ ನ ಕೋ ಆಪರೇಟಿವ್ ಆಸ್ಪತ್ರೆಯ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ.[ಎದೆಹಾಲು ಮಗುವಿಗೆ ಮಾತ್ರವಲ್ಲ ಅಥ್ಲೀಟ್ ಗಳಿಗೂ ಲಭ್ಯ!]
ಅತ ಆ ಮಗವಿನ ಹಕ್ಕನ್ನು ಕಸಿದುಕೊಂಡಿದ್ದಾನೆ. ಆ ತಾಯಿಯು ಮಗುವಿಗೆ ಹಾಲು ಕುಡಿಸುವುದಕ್ಕೆ ಅವಕಾಶ ಮಾಡಿಕೊಡುವಂತೆ ಅತನನ್ನು ಪದೇಪದೇ ಕೇಳಿಕೊಂಡೆವು. ಆದರೂ ಒಪ್ಪಲಿಲ್ಲ. ಆತನ ಮನವೊಲಿಸುವ ನಮ್ಮ ಯಾವ ಪ್ರಯತ್ನವೂ ಫಲಿಸಲಿಲ್ಲ ಎಂದು ಅಸ್ಪತ್ರೆಯ ನರ್ಸ್ ವೊಬ್ಬರು ಹೇಳಿದ್ದಾರೆ. ಕನಿಷ್ಠ ಐದು ಬಾರಿ ಪ್ರಾರ್ಥನೆ ಪೂರ್ಣ ಆಗುವವರೆಗೆ ಆ ಮಗುವಿಗೆ ಮೊಲೆಯೂಡಿಸಬಾರದು ಎಂದು ಆತನಿಗೆ ಧರ್ಮಗುರುಗಳೊಬ್ಬರು ಹೇಳಿದ್ದರಂತೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications