ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಇಂದು ಬೆಳಿಗ್ಗೆ 10 ಗಂಟೆಗೆ ಮತ ಎಣಿಕೆ
ಮುಂಬೈ: ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (Brihanmumbai Municipal Corporation) ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಜನವರಿ 16ರ ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ಪಾಲಿಕೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯು ಈ ಬಾರಿ ಹಲವು ಕಾರಣಗಳಿಗೆ ಕುತೂಹಲ ಮೂಡಿಸಿದೆ. ದೇಶದ ಅತ್ಯಂತ ಶ್ರೀಮಂತ ಪಾಲಿಕೆ ಎನ್ನುವ ಖ್ಯಾತಿಯನ್ನು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಗಳಿಸಿದೆ. ಪಾಲಿಕೆಯ 227 ಸ್ಥಾನಗಳಿಗೆ ಒಟ್ಟು 1,700 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಇನ್ನು ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆಯು ಬ್ಯಾಚ್ಗಳಲ್ಲಿ ನಡೆಯಲಿದೆ. ಏಕಕಾಲದಲ್ಲಿ ಎರಡು ಕ್ಷೇತ್ರಗಳನ್ನು ಎಣಿಕೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಮುಂಬೈ ಸ್ಥಳೀಯ ಪಾಲಿಕೆಯಲ್ಲಿ ಈ ಬಾರಿ ಶೇ50 ಮತದಾನ ದಾಖಲಾಗಿದೆ. ಆದಾಗ್ಯೂ, ಅಂತಿಮ ಮತದಾನದ ಅಂಕಿಅಂಶಗಳನ್ನು ನಂತರ ಘೋಷಿಸಲಾಗುತ್ತದೆ. 2017ರಲ್ಲಿ ಮುಂಬೈ ನಗರದಲ್ಲಿ ನಡೆದ ಸ್ಥಳೀಯ ಚುನಾವಣೆಗಳಲ್ಲಿ ಶೇ55.53 ರಷ್ಟು ಮತದಾನವನ್ನು ದಾಖಲಾಗಿತ್ತು.

ಮಹತ್ವದ ಚುನಾವಣೆ: ಇನ್ನು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯು ಪ್ರತಿಷ್ಠೆಗೆ ಕಾರಣವಾಗಿದೆ. ಇದು ದೇಶದಲ್ಲಿ ಮಾತ್ರವಲ್ಲ ಇಡೀ ಏಷ್ಯಾದಲ್ಲೇ ಶ್ರೀಮಂತ ನಗರ ಪಾಲಿಕೆ ಎನ್ನುವ ಹೆಗ್ಗಳಿಕೆಯನ್ನು ಗಳಿಸಿದೆ. ಈ ಬಾರಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಒಂದಾಗಿದ್ದರೆ ಮತ್ತೊಂದು ಕಡೆ ಇಲ್ಲಿನ ಸ್ಥಳೀಯ ಪಕ್ಷಗಳು ವೈಮನಸ್ಸು ಮರೆತು ಒಂದಾಗಿವೆ. ಈ ಕಾರಣಗಳಿಗೆ ಈ ಬಾರಿಯ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯು ಮಹತ್ವ ಪಡೆದುಕೊಂಡಿದೆ.
ಚುನಾವಣೋತ್ತರ ಸಮೀಕ್ಷೆಗಳು
ಆಕ್ಸಿಸ್ಮೈಇಂಡಿಯಾ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಮೈತ್ರಿಕೂಟದ ಪಾಲುದಾರ ಶಿವಸೇನೆ ಪಕ್ಷವು 131 ರಿಂದ 151 ಸ್ಥಾನಗಳಲ್ಲಿ ಗೆಲುವು ದಾಖಲಿಸಲಿದೆ. ಶಿವಸೇನೆ (ಯುಬಿಟಿ) ಮತ್ತು ಎಂಎನ್ಎಸ್ 58 ರಿಂದ 68 ಸ್ಥಾನಗಳನ್ನು ಮತ್ತು ಇತರರು 6 ರಿಂದ 12 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.
ಇನ್ನು ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಜೆವಿಸಿ ನಿರ್ಗಮನ ಸಮೀಕ್ಷೆಗಳು ಬಿಜೆಪಿ/ಶಿವಸೇನೆ 138, ಶಿವಸೇನೆ (ಯುಬಿಟಿ)/ಎಂಎನ್ಎಸ್/ಎನ್ಸಿಪಿ (ಎಸ್ಪಿ) 59. ಕಾಂಗ್ರೆಸ್/ವಿಬಿಎ 23 ಮತ್ತು ಪಕ್ಷೇತರರು ಏಳು ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ.
ಏಷ್ಯಾದ ದೊಡ್ಡ ಪಾಲಿಕೆ
ಬೃಹನ್ ಮುಂಬೈ ಮಹಾನಗರ ಪಾಲಿಕೆಯು ಒಂದು ರಾಜ್ಯವೊಂದರ ಚುನಾವಣೆಯಷ್ಟೇ ಮಹತ್ವವನ್ನು ಪಡೆದುಕೊಂಡಿತ್ತು. ಇಲ್ಲಿನ 227 ವಾರ್ಡ್ಗಳಲ್ಲಿ ನಡೆದ ಚುನಾವಣೆಗೆ ಘಟಾನುಘಟಿ ನಾಯಕರೇ ಬಂದು ಪ್ರಚಾರ ಮಾಡಿದ್ದರು. ಅಲ್ಲದೇ ಬಿಜೆಪಿ ಈ ಬಾರಿ ಭಾರೀ ಪೈಪೋಟಿಯನ್ನು ನೀಡಿತ್ತು. ಇನ್ನು ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಬಹುಮತಕ್ಕೆ 114 ಆಗಿದೆ. ಬಿಜೆಪಿ ಪ್ರಾರಂಭದ ಹಂತದಲ್ಲೇ ಮುನ್ನಡೆ ಸಾಧಿಸಿಕೊಂಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications