ಶಾಸಕಿ ಭಂಡಾರು ಶ್ರಾವಣಿ ಶ್ರೀ ಸಾಮಾಜಿಕ ಕಳಕಳಿಗೆ ನೆಟ್ಟಿಗರ ಸಲಾಂ
ಅಮರಾವತಿ, ಜೂನ್ 20: ಆಂಧ್ರ ಪ್ರದೇಶದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ರಾಜ್ಯದ ಶಾಸಕಿಯೊಬ್ಬರು ತಮ್ಮ ನಿವಾಸದ ಮುಂದೆ ಹಾಕಿರುವ ಬ್ಯಾನರ್ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
2024ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಿಂಗನಮಲ ಕ್ಷೇತ್ರದಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ) ಅಭ್ಯರ್ಥಿಯಾಗಿದ್ದ ಭಂಡಾರು ಶ್ರಾವಣಿ ಶ್ರೀ ಗೆಲುವು ಸಾಧಿಸಿದ್ದಾರೆ. ಅವರನ್ನು ಭೇಟಿಯಾಗಲು ಅಭಿಮಾನಿಗಳು, ಕಾರ್ಯಕರ್ತರು ಆಗಮಿಸುತ್ತಿದ್ದಾರೆ.

ಭಂಡಾರು ಶ್ರಾವಣಿ ಶ್ರೀ ತಮ್ಮನ್ನು ಭೇಟಿ ಮಾಡಲು ಬರುವವರಿಗೆ ಪ್ರಮುಖ ಸೂಚನೆಯೊಂದನ್ನು ನೀಡಿದ್ದಾರೆ. ಅಭಿನಂದನೆ ಸಲ್ಲಿಸಲು ಬರುವವರು ಹೂವಿನ ಹಾರ, ಬೊಕ್ಕೆ, ಶಾಲು ಇತ್ಯಾದಿಗಳನ್ನು ತರಬೇಡಿ ಎಂದು ಹೇಳಿದ್ದಾರೆ. ಈ ಕುರಿತು ಮನೆಯ ಮುಂದೆ ಬ್ಯಾನರ್ ಸಹ ಮಾಡಿಸಿ ಹಾಕಿದ್ದಾರೆ. ಇದರ ಫೋಟೋ ಈಗ ವೈರಲ್ ಆಗಿದೆ.
ಬ್ಯಾನರ್ನಲ್ಲಿ ಇರುವುದೇನು?: ಟಿಡಿಪಿ ಶಾಸಕಿ ಭಂಡಾರು ಶ್ರಾವಣಿ ಶ್ರೀ ತಮ್ಮ ನಿವಾಸಕ್ಕೆ ಆಗಮಿಸುವವರು ಹೂವಿನ ಹಾರ, ಬೊಕ್ಕೆ, ಶಾಲುಗಳನ್ನು ತರಬೇಡಿ. ಇದರ ಬದಲಾಗಿ ಪೆನ್ನು, ನೋಟ್ ಬುಕ್ಗಳನ್ನು ತನ್ನಿ. ಅವುಗಳನ್ನು ಸಂಗ್ರಹ ಮಾಡಿ ಅಗತ್ಯ ಇರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲು ಅನುಕೂಲವಾಗುತ್ತದೆ ಎಂದು ಬ್ಯಾನರ್ನಲ್ಲಿ ಹೇಳಿದ್ದಾರೆ.
ಶಾಸಕಿ ಭಂಡಾರು ಶ್ರಾವಣಿ ಶ್ರೀ ಈ ಸಾಮಾಜಿಕ ಕಳಕಳಿಗೆ ಅಪಾರವಾದ ಪ್ರಶಂಸೆ ವ್ಯಕ್ತವಾಗುತ್ತಿದೆ. ಹಲವಾರು ಜನರು ತಮ್ಮ ಟ್ವೀಟ್ ಖಾತೆಯಲ್ಲಿ ಶಾಸಕಿ ಮನೆ ಮುಂದಿನ ಬ್ಯಾನರ್ ಫೋಟೋ ಹಂಚಿಕೊಂಡಿದ್ದು, ಶಾಸಕಿಯ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಹೂವಿನ ಬೊಕ್ಕೆ, ಶಾಲುಗಳಿಂದ ಯಾವುದೇ ಉಪಯೋಗವಿಲ್ಲ. ಹೀಗೆ ನೋಟ್ ಬುಕ್, ಪೆನ್ ನೀಡಿದರೆ ಅದು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶಾಸಕಿಯ ನಡೆ ಇತರರಿಗೆ ಮಾದರಿ ಎಂದು ಪೋಸ್ಟ್ಗಳನ್ನು ಹಾಕುತ್ತಿದ್ದಾರೆ.
ಸಿಂಗನಮಲ ಕ್ಷೇತ್ರದಲ್ಲಿ ತೆಲುಗು ದೇಶಂ ಪಕ್ಷದ ಅಭ್ಯರ್ಥಿಯಾಗಿದ್ದ ಭಂಡಾರು ಶ್ರಾವಣಿ ಶ್ರೀ 102957 ಮತಗಳನ್ನು ಪಡೆದು ಎದುರಾಳಿಯಾಗಿದ್ದ ವೈಎಸ್ಆರ್ಸಿಪಿಯ ಎಂ. ವೀರಾಂಜನೇಯಲು ಅವರನ್ನು ಸೋಲಿಸಿದ್ದಾರೆ. ಬಿಎಸ್ಪಿ ಮತ್ತು ಕಾಂಗ್ರೆಸ್ನ ಅಭ್ಯರ್ಥಿಗಳು ಸಹ ಚುನಾವಣೆಯಲ್ಲಿ ಶ್ರಾವಣಿ ಶ್ರೀ ಅವರಿಗೆ ಎದುರಾಳಿಯಾಗಿದ್ದರು.
ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯೂ ನಡೆದಿತ್ತು. ಚುನಾವಣೆಯಲ್ಲಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅಧಿಕಾರ ಕಳೆದುಕೊಂಡಿದ್ದರು. ಟಿಡಿಪಿ 135, ಜನಸೇನಾ ಪಕ್ಷ 21, ವೈಎಸ್ಆರ್ಸಿಪಿ 11, ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಗಳಿಸಿವೆ.
ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದವು. ಈಗ ಆಂಧ್ರ ಪ್ರದೇಶದಲ್ಲಿ ಎಂ. ಚಂದ್ರಬಾಬು ನಾಯ್ಡು 4ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಜನಸೇನಾ ಪಕ್ಷದ ಮೂವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.
ಚುನಾವಣೆಯಲ್ಲಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಪಿಠಾಪುರಂ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 1,34,394 ಮತಗಳನ್ನು ಪಡೆದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಕೂಟ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ, ನಾಲ್ಕು ಖಾತೆಗಳ ಹೊಣೆಯನ್ನು ಅವರಿಗೆ ನೀಡಲಾಗಿದೆ.
ಆಂಧ್ರ ಪ್ರದೇಶದ ಲೋಕಸಭೆ ಚುನಾವಣೆಯಲ್ಲಿ ಟಿಡಿಪಿ ಪಕ್ಷ 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಕೇಂದ್ರದಲ್ಲಿ ಎನ್ಡಿಎ ಮೈತ್ರಿಕೂಟದ ಸರ್ಕಾರ ರಚನೆಯಲ್ಲಿ ಇದು ಪ್ರಮುಖ ಪಕ್ಷವಾಗಿದೆ. ಎನ್ಡಿಎ ಮೈತ್ರಿಕೂಟದ ಜೊತೆ ಸೇರಿದ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications