ರೇಷ್ಮೆ ಸೀರೆ ಹಸಿರು ಕುಪ್ಪುಸದಲ್ಲಿ ಕಂಗೊಳಿಸಿದ ತೆರೇಸಾ
ಬೆಂಗಳೂರು, ನವೆಂಬರ್, 8: ಬ್ರಿಟನ್ ಪ್ರಧಾನ ಮಂತ್ರಿ ತೆರೇಸಾ ಮೇ ಅವರು ಚಿನ್ನದ ಬಣ್ಣದ ರೇಷ್ಮೆ ಸೀರೆಗೆ ಹಸಿರು ಬಣ್ಣದ ಕುಪ್ಪಸ ತೊಟ್ಟು ಸೋಮೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದರು.
ಅಪ್ಪಟ ಭಾರತೀಯ ನಾರಿಯಂತೆ ಚಿನ್ನದ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದ ಬ್ರಿಟನ್ ಪ್ರಧಾನಿಯವರು ಇಂದು ಮಧ್ಯಾಹ್ನ ಹಲಸೂರಿನಲ್ಲಿರುವ ಐತಿಹಾಸಿಕ ಸೋಮೇಶ್ವರ ದೇವಸ್ಥಾನಕ್ಕೆ ಆಗಮಿಸಿದಾಗ, ದೇವಸ್ಥಾನ ದ್ವಾರದಲ್ಲಿ ಮಲ್ಲಿಗೆ ಹಾರಹಾಕಿ, ನಾದಸ್ವರ ನುಡಿಸಿ ಅವರಿಗ ಸ್ವಾಗತ ಕೋರಲಾಯಿತು.

ಒಂದು ದಿನದ ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ಅವರಿಗೆ ನಗರದ ಪುರಾತನ ದೇವಸ್ಥಾನಗಳಲ್ಲಿ ಒಂದಾದ ಈ ದೇವಸ್ಥಾನವನ್ನು ತೋರಿಸಲು ಅನುವು ಮಾಡಿಕೊಡಲಾಗಿತ್ತು.
ದೇವಸ್ಥಾನ ಪ್ರವೇಶಿಸುತ್ತಿದ್ದಂತೆ ದೇವಸ್ಥಾನದ ಇಬ್ಬರು ಪ್ರಧಾನ ಅರ್ಚಕರೊಂದಿಗೆ ದೇವಸ್ಥಾನವನ್ನು ಪ್ರದಕ್ಷಿಣೆ ಮಾಡುತ್ತಾ ಅವರಿಂದಲೇ ಈ ದೇವಸ್ಥಾನದ ಇತಿಹಾಸದ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ಪ್ರದಕ್ಷಿಣೆ ಮುಗಿದ ಕೂಡಲೇ ಗರ್ಭಗುಡಿಯಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ನಂತರ ಉಯ್ಯಾಲೆ ಮಂಟಪದಲ್ಲಿರುವ ಸೋಮೇಶ್ವರನಿಗೆ ಪೂಜೆ ಸಲ್ಲಿಸಿ, ದೇವರಿಗೆ ಕೈಮುಗಿದು ನಮಸ್ಕಾರ ಮಾಡಿದ ನಂತರ ಮಂಗಳಾರತಿಯನ್ನು ಸ್ವೀಕರಿಸಿ ದೇವರ ದರ್ಶನ ಪಡೆದರು.
ಸೋಮೇಶ್ವರನ ದರ್ಶನ ಮುಗಿಸಿ ತೆರಳುವ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಮುಜರಾಯಿ ಇಲಾಖೆಯ ಆಯುಕ್ತರಾದ ಎಸ್. ಪಿ. ಷಡಕ್ಷರಿಸ್ವಾಮಿ ಮತ್ತು ನಗರ ಜಿಲ್ಲಾಧಿಕಾರಿ ವಿ. ಶಂಕರ್ ಅವರು ತೆರೇಸಾ ಮೇ ಅವರಿಗೆ ಶಾಲು ಹೊದಿಸಿ ನಟರಾಜನ ಗಂಧದ ಪ್ರತಿಮೆಯನ್ನು ನೀಡಿ ಗೌರವ ಸಲ್ಲಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications