ಬ್ರಿಟಿಷ್ ಪೌರತ್ವ : ರಾಹುಲ್ ಗಾಂಧಿಗೆ ಅಡ್ವಾಣಿ ಸಮಿತಿಯಿಂದ ನೋಟಿಸ್
ನವದೆಹಲಿ, ಮಾರ್ಚ್ 14: ಭಾರತೀಯ ಜನತಾ ಪಕ್ಷದ ನಾಯಕ ಹಿರಿಯ ಲಾಲ್ ಕೃಷ್ಣ ಅಡ್ವಾಣಿ ನೇತೃತ್ವದ ನೀತಿ ಸಮಿತಿಯಿಂದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆವರಿಗೆ ಸೋಮವಾರ ಶೋಕಾಸ್ ನೋಟೀಸ್ ಜಾರಿಗೊಂಡಿದೆ.
ಇಂಗ್ಲೆಂಡ್ನಲ್ಲಿ ಕಂಪೆನಿಯೊಂದನ್ನು ಆರಂಭಿಸುವ ಸಲುವಾಗಿ ತಾನು ಬ್ರಿಟಿಷ್ ಪ್ರಜೆ ಎಂಬುದಾಗಿ ಘೋಷಿಸಿಕೊಂಡಿದ್ದಾರೆ ಎಂಬ ಮಾಹಿತಿಯ ಸತ್ಯಾಸತ್ಯತೆ ಬಗ್ಗೆ ಪ್ರಶ್ನೆ ಮಾಡಿ ನೋಟಿಸ್ ಜಾರಿಗೊಳಿಸಲಾಗಿದ್ದು, ಈ ಬಗ್ಗೆ ಉತ್ತರಿಸುವಂತೆ ಕೋರಲಾಗಿದೆ. ಇದಕ್ಕೆ ತಕ್ಷಣದ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ಇದನ್ನು ಬಗೆಹರಿಸಲಾಗುವುದು ಎಂದಿದ್ದಾರೆ.

ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ ನೇತೃತ್ವದ ನೀತಿ ಸಮಿತಿಯ ಸದಸ್ಯ ಅರ್ಜುನ್ ರಾಮ್ ಮೇಘ್ವಲ್ ಅವರು ಎಎನ್ ಐ ಜೊತೆ ಮಾತನಾಡಿ, 'ಲಂಡನ್ನ ಕಂಪೆನಿಯೊಂದರ ನಿರ್ದೇಶಕರಾಗುವ ಹಂತದಲ್ಲಿದ್ದಾಗ ಬ್ರಿಟಿಷ್ ಪೌರತ್ವವನ್ನು ತೋರಿಸಿದ್ದು ಹೇಗೆ ಎಂಬುದಾಗಿ ಪ್ರಶ್ನಿಸಲಾಗಿದೆ. ಇದು ಗಂಭೀರ ವಿಷಯವಾಗಿದ್ದು, ಯುಕೆ ಕಂಪನಿಯ ಆರಂಭಿಸುವ ಸಲುವಾಗಿ ತಾನು ಬ್ರಿಟಿಷ್ ಪ್ರಜೆ ಎಂಬುದಾಗಿ ರಾಹುಲ್ ಗಾಂಧಿ ಘೋಷಿಸಿಕೊಂಡಿದ್ದೇಕೆ? ಎಂಬುದಕ್ಕೆ ಉತ್ತರ ನಿರೀಕ್ಷಿಸಲಾಗಿದೆ ಎಂದಿದ್ದಾರೆ.
ಪೌರತ್ವದ ಪ್ರಶ್ನೆ ಎತ್ತಿದ ಸ್ವಾಮಿ: ಇಂಗ್ಲೆಂಡ್ನಲ್ಲಿ ಕಂಪೆನಿಯೊಂದನ್ನು ಆರಂಭಿಸುವ ಸಲುವಾಗಿ ತಾನು ಬ್ರಿಟಿಷ್ ಪ್ರಜೆ ಎಂಬುದಾಗಿ ಘೋಷಿಸಿಕೊಳ್ಳುವ ಮೂಲಕ ರಾಹುಲ್ ಗಾಂಧಿ ತಮ್ಮನ್ನು ತಾವೇ ವಂಚಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕು. ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವ ಮತ್ತು ಸಂಸತ್ ಸದಸ್ಯತ್ವವನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಬ್ರಮಣಿಯನ್ ಸ್ವಾಮಿ ಪತ್ರ ಬರೆದಿದ್ದರು.
We'll deal with that: Rahul Gandhi on showcause notice by Parliament's Ethics Committee pic.twitter.com/EaORho42ZP
— ANI (@ANI_news) March 14, 2016
ರಾಹುಲ್ ಗಾಂಧಿ ಅವರು 2003ರಲ್ಲಿ ಇಂಗ್ಲೆಂಡ್ನಲ್ಲಿ ಬ್ಯಾಕೋಪ್ಸ್ ಲಿಮಿಟೆಡ್ ಎಂಬ ಕಂಪೆನಿಯನ್ನು ಹುಟ್ಟು ಹಾಕಿದ್ದು, ಅದಕ್ಕೆ ಸಂಬಂಧಿಸಿದ ದಾಖಲಾತಿಗಳಲ್ಲಿ ಇಂಗ್ಲೆಂಡ್ ವಿಳಾಸ ನೀಡಿ ತಾನು ಬ್ರಿಟಿಷ್ ಪ್ರಜೆ ಎಂಬುದಾಗಿ ಘೋಷಿಸಿಕೊಂಡಿದ್ದಾರೆ. ಆ ಸಂಸ್ಥೆಯ ಒಟ್ಟು ಷೇರುಗಳಲ್ಲಿ ಶೇಕಡಾ 65ನ್ನು ರಾಹುಲ್ ಗಾಂಧಿ ಹೊಂದಿದ್ದಾರೆ ಎಂದು ಸ್ವಾಮಿ ಆರೋಪಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications