Car Helicopter: ಕಾರನ್ನೇ ಹೆಲಿಕಾಪ್ಟರ್ ಮಾಡಿದ ಸಹೋದರರು: ವಾಹನ ವಶಪಡೆದ ಪೊಲೀಸರು
ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ಇಬ್ಬರು ಸಹೋದರರು ಮಾರುತಿ ಸುಜುಕಿ ವ್ಯಾಗನ್ ಆರ್ ಅನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದರು. ಆದರೆ ಅವರ ಕಾರ್ ಹೆಲಿಕಾಪ್ಟರ್ ಕನಸು ಪೂರ್ಣವಾಗುವ ಮುನ್ನವೇ ಪೊಲೀಸರು ಶಾಕ್ ನೀಡಿದ್ದಾರೆ.
ಕಾರನ್ನು ಹೆಲಿಕಾಪ್ಟರ್ ರೀತಿ ವಿನ್ಯಾಸ ಮಾಡಿದ್ದ ಸಹೋದರರು, ಬಣ್ಣ ಹೊಡೆದು ಕೆಲಸ ಪೂರ್ಣಗೊಳುಸವ ಯೋಜನೆಯಲ್ಲಿದ್ದರು. ಆದರೆ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರ ಕ್ರಮದ ಬಗ್ಗೆ ನೆಟಿಜನ್ಗಳಿಂದ ಸಾಕಷ್ಟು ಕಾಮೆಂಟ್ಗಳು ವ್ಯಕ್ತವಾಗಿವೆ.

ಪತ್ರಕರ್ತೆ ಪ್ರಿಯಾ ಸಿಂಗ್ ಎನ್ನುವವರು ಎಕ್ಸ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಹಿಂದಿಯನ್ನಿ ಅವರು ಪೋಸ್ಟ್ ಮಾಡಿದ್ದು, " ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ಇಬ್ಬರು ಸಹೋದರರು ಕಾರನ್ನು ಹೆಲಿಕಾಪ್ಟರ್ ಆಗಿ ಪರಿವರ್ತಿಸಿದರು. ಪೇಂಟಿಂಗ್ ಮಾಡುವುದು ಇನ್ನೂ ಬಾಕಿ ಇದ್ದಾಗಲೇ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.
यूपी के अंबेडकर नगर में दो भाईयों ने जुगाड़ से कार को हेलीकॉप्टर बना दिया. डेंट- पेंट कराने जा रहे थे तभी पुलिस ने पकड़ लिया. और गाड़ी(हेलीकॉप्टर) सीज कर दी. pic.twitter.com/wK9QLaFZ1k
— Priya singh (@priyarajputlive) March 17, 2024
ಪೊಲೀಸರ ಕ್ರಮಕ್ಕೆ ಅಸಮಾಧಾನ
ಹೆಲಿಕಾಪ್ಟರ್ನ ರೆಕ್ಕೆಗಳನ್ನು ಕಾರಿನ ಮೇಲ್ಛಾವಣಿಯ ಮೇಲೆ ಜೋಡಿಸಲಾಗಿದೆ ಹಾಕಲಾಗುತ್ತದೆ ಮತ್ತು ಟೈಲ್ ರೋಟರ್ ಅನ್ನು ಕಾರಿನ ಬೂಟ್ಗೆ ಜೋಡಿಸಲಾಗಿದೆ. ಅಂಬೇಡ್ಕರ್ ನಗರದಲ್ಲಿರುವ ಪೊಲೀಸ್ ಠಾಣೆಯ ಹೊರಗೆ ನಿಲ್ಲಿಸಿರುವ ವಾಹನದ ಸುತ್ತಲೂ ಜನರು ಮತ್ತು ಕೆಲವು ಪೊಲೀಸರು ನಿಂತಿರುವುದನ್ನು ಸಹ ನೋಡಬಹುದು.
ವರದಿಗಳ ಪ್ರಕಾರ, ವಾಹನವು ಹೊಸ ಕೋಟ್ ಪೇಂಟ್ಗಾಗಿ ಅಕ್ಬರ್ಪುರಕ್ಕೆ ತೆರಳುತ್ತಿದ್ದಾಗ ಅಕ್ಬರ್ಪುರ ಕೊಟ್ವಾಲಿ ಪ್ರದೇಶದಲ್ಲಿ ನಿಯಮಿತ ತಪಾಸಣೆ ಪೊಲೀಸರ ಗಮನ ಸೆಳೆಯಿತು. ಮಾರ್ಪಡಿಸಿದ ವಾಹನವನ್ನು ಪೊಲೀಸರು ಅಕ್ಬರ್ಪುರ ಬಸ್ ನಿಲ್ದಾಣದಿಂದ ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಕ್ರಮಕ್ಕೆ ಸಾಕಷ್ಟು ನೆಟ್ಟಿಗರು ವಿರೋಧ ವ್ಯಕ್ತಪಡಿಸಿದ್ದಾರೆ. " ನಾವು ಹೊಸತನವನ್ನು ಗೌರವಿಸಬೇಕು. ನಾವೀನ್ಯತೆಯು ಪ್ರಗತಿಯನ್ನು ಹೆಚ್ಚಿಸುತ್ತದೆ. ಬೆಳವಣಿಗೆಯನ್ನು ಉತ್ತೇಜಿಸಲು, ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪ್ರತಿಯೊಬ್ಬರ ಜೀವನದ ಗುಣಮಟ್ಟವನ್ನು ಸುಧಾರಿಸಲು ನಾವೀನ್ಯತೆಯನ್ನು ಗೌರವಿಸುವುದು ಮತ್ತು ಪ್ರೋತ್ಸಾಹಿಸುವುದು ಬಹಳ ಮುಖ್ಯ," ಎಂದು ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications