ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಆರ್ಎಸ್ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧೆ, ಯಾವುದೇ ಮೈತ್ರಿಯಿಲ್ಲ: ಕೆಆರ್ಎಸ್
ಮುಂಬೈ, ಜೂನ್. 16: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಗುರುವಾರ ತಮ್ಮ ಭಾರತ್ ರಾಷ್ಟ್ರ ಸಮಿತಿಯು ಮಹಾರಾಷ್ಟ್ರದಲ್ಲಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ನಾಗರಿಕ, ವಿಧಾನಸಭೆ ಮತ್ತು ಸಾರ್ವತ್ರಿಕ ಚುನಾವಣೆಗಳಲ್ಲಿ ತಮ್ಮ ಪಕ್ಷವು ರಾಜ್ಯದ ಪ್ರತಿಯೊಂದು ಸ್ಥಾನದಲ್ಲೂ ಕಣಕ್ಕೆ ಇಳಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ತಮ್ಮ ಪಕ್ಷದ ಮೊದಲ ಕಚೇರಿಯನ್ನು ತೆರೆದ ನಂತರ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಚಂದ್ರಶೇಖರ್ ರಾವ್, ನಂತರದ ಮುನ್ಸಿಪಲ್ ಕಾರ್ಪೊರೇಶನ್ ಚುನಾವನೆಗಳು ಸೇರಿದಂತೆ ಮಹಾರಾಷ್ಟ್ರದ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. "ನಾವು ಮುಂದಿನ ಎಲ್ಲಾ ಲೋಕಸಭೆ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುತ್ತೇವೆ" ಎಂದು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಾದ್ಯಂತ ಅವರ ಮೂರು ರ್ಯಾಲಿಳ ಯಶಸ್ಸಿನ ನಂತರ, ಬಿಆರ್ಎಸ್ ಅಧ್ಯಕ್ಷರು ವಿದರ್ಭವನ್ನು ಪ್ರವೇಶಿಸಿದ್ದಾರೆ. ಇದಕ್ಕೂ ಮುನ್ನ ಅವರು ನಾಂದೇಡ್ (ಫೆಬ್ರವರಿ 5), ನಾಂದೇಡ್ ಜಿಲ್ಲೆಯ ಕಂಧರ್ ಲೋಹಾ (ಮಾರ್ಚ್ 26) ಮತ್ತು ಏಪ್ರಿಲ್ 24 ರಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ (ಔರಂಗಾಬಾದ್) ನಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು.
ತಮ್ಮದು ರಾಷ್ಟ್ರೀಯ ಪಕ್ಷವಾಗಿ ಬಿಂಬಿಸಿಕೊಳ್ಳುವ ಸ್ಪಷ್ಟ ಪ್ರಯತ್ನದಲ್ಲಿ, ಬಿಆರ್ಎಸ್ ಮಹಾರಾಷ್ಟ್ರದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸಲು ಮತ್ತು ರೈತರ ಆತ್ಮಹತ್ಯೆಗಳು ಮತ್ತು ದಲಿತರ ಕಲ್ಯಾಣದಂತಹ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಹಿಂದಿನ ಸಭೆಗಳಲ್ಲಿ, ಚಂದ್ರಶೇಖರ್ ರಾವ್, ಈ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ, ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದರೆ ಹಲವಾರು ಕಲ್ಯಾಣ ಕ್ರಮಗಳ ಭರವಸೆಯನ್ನೂ ನೀಡಿದ್ದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತೆಲಂಗಾಣ ಸಿಎಂ ಚಂದ್ರಶೇಖರ್ರಾವ್, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಹಲವು ಬದಲಾವಣೆಯನ್ನು ತರಲು ಬಯಸುತ್ತದೆ. ಇತರ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ತಮ್ಮ ಪಕ್ಷಕ್ಕೆ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದರು. "ಅವರು (ವಿರೋಧ ಪಕ್ಷಗಳು) ನನ್ನ ಕಾರ್ಯಸೂಚಿಯನ್ನು ಇಷ್ಟಪಟ್ಟರೆ, ಅವರು ನಮ್ಮೊಂದಿಗೆ ಸೇರಬಹುದು" ಎಂದು ಆಹ್ವಾನಿಸಿದ್ದಾರೆ.
ಚಂದ್ರಶೇಖರ್ ರಾವ್ 2024 ರಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ತನ್ನ ಸಂಘಟನಾ ಜಾಲವನ್ನು ಬಲಪಡಿಸುವ ಮೂಲಕ ಮತ್ತು 'ಅಬ್ ಕಿ ಬಾರ್ ಕಿಸಾನ್ ಸರ್ಕಾರ್' ಘೋಷಣೆಯಡಿಯಲ್ಲಿ ರಾಜ್ಯದ ಎಲ್ಲಾ 288 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೆಸಿಆರ್, ತಮ್ಮ ಪಕ್ಷವು ವಿರೋಧ ಪಕ್ಷದ ಮತಗಳನ್ನು ಲೂಟಿ ಮಾಡಲು ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡುತ್ತದೆ ಎಂಬ ಆರೋಪದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ವಿರೋಧ ಪಕ್ಷಗಳು ನನ್ನ ಸಂಘಟನೆಯನ್ನು ಬಿಜೆಪಿಯ ಬಿ ಅಥವಾ ಸಿ ತಂಡ ಎಂದು ಬ್ರಾಂಡ್ ಮಾಡಿದರೆ, ನಾನು ಅದರ ಬಗ್ಗೆ ಕನಿಷ್ಠ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೆಸಿಆರ್, ನೀರಿನ ಕೊರತೆ, ಅಸಮರ್ಪಕ ವಿದ್ಯುತ್ ಪೂರೈಕೆ ಮತ್ತು ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯ ಕೊರತೆಯಂತಹ ಜನರು ಎದುರಿಸುತ್ತಿರುವ ಸವಾಲುಗಳನ್ನು ಎತ್ತಿ ತೋರಿಸಿದರು. ರೈತರ ಆತ್ಮಹತ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಹೇರಳವಾದ ನದಿಗಳನ್ನು ಹೊಂದಿರುವ ರಾಜ್ಯದಲ್ಲಿ ರೈತರು ಇಂತಹ ಸ್ಥಿತಿಗೆ ಏಕೆ ತಲುಪುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ತೆಲಂಗಾಣದಲ್ಲಿ 24 ಗಂಟೆಗಳ ವಿದ್ಯುತ್ ಮತ್ತು ನೀರು ಸರಬರಾಜು ಅನುಷ್ಠಾನದಿಂದ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ಅವರು ಒತ್ತಿ ಹೇಳಿದ್ದು, ಹೊಸ ರಾಷ್ಟ್ರೀಯ ಜಲ ನೀತಿಯ ಅಗತ್ಯವನ್ನು ತಿಳಿಸಿದ್ದಾರೆ. ನಾಗ್ಪುರ ಕಾರ್ಯಕ್ರಮವು ಮಹಾರಾಷ್ಟ್ರದ ಅನೇಕ ಮಾಜಿ ಶಾಸಕರು ಮತ್ತು ನಾಯಕರು ಬಿಆರ್ಎಸ್ಗೆ ಸೇರ್ಪಡೆಗೊಳ್ಳಲು ಸಾಕ್ಷಿಯಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications