ನರೇಂದ್ರ ಮೋದಿಗೆ ನೊಬೆಲ್ ಪುರಸ್ಕಾರ ಸಿಗಬೇಕು: ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಮುಖ್ಯಸ್ಥರ ಒತ್ತಾಯ
ಕೋಲ್ಕತಾ, ಏ. 30: ಕೋವಿಡ್ ಸಂಕಷ್ಟದಲ್ಲಿ ಬಡಜನರಿಗೆ ಉಚಿತ ಆಹಾರದ ವ್ಯವಸ್ಥೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೊಬೆಲ್ ಪಾರಿತೋಷಕ ಯಾಕೆ ಸಿಕ್ಕಿಲ್ಲ ಎಂದು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (BSE- Bombay Stock Exchange) ಮುಖ್ಯಸ್ಥ ಆಶೀಶ್ ಚೌಹಾಣ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರ ವಿಶ್ವದಲ್ಲೇ ಅತಿ ದೊಡ್ಡ ಉಚಿತ ಆಹಾರ ಯೋಜನೆ ಜಾರಿ ಮಾಡಿತ್ತು. ಈ ಕಾರ್ಯವನ್ನು ನೊಬೆಲ್ ಶಾಂತಿ ಪಾರಿತೋಷಕ ಸಮಿತಿ ಗಂಭೀರವಾಗಿ ಪರಿಗಣಿಸಲಿ ಎಂದು ಒತ್ತಾಯಿಸಿದ್ದಾರೆ.
ವಿಶ್ವಸಂಸ್ಥೆಯ ಅಹಾರ ಯೋಜನೆ (United Nations World Food Programme) ಅಡಿಯಲ್ಲಿ ಹನ್ನೊಂದೂವರೆ ಕೋಟಿ ಜನರಿಗೆ ಆಹಾರ ಕೊಡಲಾಗಿತ್ತು. ಅದಕ್ಕಾಗಿ 2020ರ ನೊಬೆಲ್ ಶಾಂತಿ ಪುರಸ್ಕಾರ ಸಿಕ್ಕಿತು. ಆದರೆ, ಭಾರತದಲ್ಲಿ 80 ಕೋಟಿ ಮಂದಿಗೆ ಉಚಿತ ಆಹಾರದ ವ್ಯವಸ್ಥೆ ಮಾಡಲಾಗಿತ್ತು ಎಂದು ಬಿಎಸ್ಇ ಎಂಡಿ ಮತ್ತು ಸಿಇಒ ಆಗಿರುವ ಆಶಿಶ್ ಚೌಹಾಣ್ ತಿಳಿಸಿದ್ದಾರೆ.
2019ರಲ್ಲಿ 88 ದೇಶಗಳಲ್ಲಿ ಅತೀ ಆಹಾರ ಕೊರತೆ ಮತ್ತು ಹಸಿವಿನಿಂದ ಬಳಲುತ್ತಿದ್ದ ಸುಮಾರು 9.7 ಕೋಟಿ ಮಂದಿಗೆ ಆಹಾರದ ನೆರವು ಒದಗಿಸಿದ ವಿಶ್ವಸಂಸ್ಥೆ ವಿಶ್ವ ಆಹಾರ ಯೋಜನೆ (WFP) ಸಂಸ್ಥೆಗೆ ನೊಬೆಲೆ ಶಾಂತಿ ಪುರಸ್ಕಾರವನ್ನು ಕೊಡಲಾಗಿತ್ತು. ಆದರೆ, ವಿಶ್ವಸಂಸ್ಥೆಯ ಈ ಕಾರ್ಯಕ್ಕಿಂತಲೂ ಭಾರತ ಕೋವಿಡ್ ಕಾಲಘಟ್ಟದಲ್ಲಿ ಮಾಡಿದ ಕೆಲಸ ಬಹಳ ದೊಡ್ಡದು. ಇದಕ್ಕಾಗಿ ಪ್ರಧಾನಿಗೆ ನೊಬೆಲ್ ಸಿಗಬೇಕು ಎಂಬುದು ಚೌಹಾಣ್ ಅನಿಸಿಕೆ.

"ಮುಂದುವರಿದ ದೇಶಗಳಿಗಿಂತ ನಮ್ಮ ತಲಾದಾಯ 10-30 ಪಟ್ಟು ಕಡಿಮೆ ಇದ್ದರೂ ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯನ್ನು ನಾವು ಉತ್ತಮವಾಗಿ ನಿಭಾಯಿಸಿದ್ದೇವೆ. ಇದಕ್ಕೆ ನಾವು ಹೆಮ್ಮೆ ಪಡಬೇಕು" ಎಂದು ಐಐಎಂ-ಕಲ್ಕತ್ತಾದ ಪದವಿಪ್ರದಾನ ಸಮಾರಂಭದ ವೇಳೆ ಅವರು ತಿಳಿಸಿದ್ದಾರೆ.
ಐಐಎಂ-ಕಲ್ಕತ್ತಾದ ಹಳೆಯ ವಿದ್ಯಾರ್ಥಿಯೂ ಆಗಿರುವ ಆಶಿಶ್ ಚೌಹಾಣ್ ಅವರು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮೋದಿ ಅವರ ಹೆಸರನ್ನು ಸಮಿತಿಯವರು ಪರಿಗಣಿಸಲಿ ಎಂದು ಒತ್ತಾಯಿಸಿದ್ದಾರೆ.
"ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ದೇಶದ 80 ಕೋಟಿ ಜನರಿಗೆ ಎರಡು ವರ್ಷ ಉಚಿತವಾಗಿ ಆಹಾರ ವ್ಯವಸ್ಥೆ ಮಾಡಲಾಗಿತ್ತು. 80 ಕೋಟಿ ಸಂಖ್ಯೆಗೆ ಅನೇಕ ದೇಶಗಳ ಜನಸಂಖ್ಯೆಯನ್ನ ಒಟ್ಟು ಸೇರಿಸಬೇಕು. ಇಂಥ ಮಹತ್ಕಾರ್ಯ ಮಾಡಿದ ಮೋದಿ ಅವರನ್ನ ನೊಬೆಲ್ ಪ್ರೈಜ್ ಕಮಿಟಿಯವರು ಗಂಭೀರವಾಗಿ ಪರಿಗಣಿಸುತ್ತಾರಾ ಎಂದು ಕಾದುನೋಡಬೇಕು" ಎಂದಿದ್ದಾರೆ.

ಬಿಎಸ್ಇ ಮುಖ್ಯಸ್ಥರಾದ ಅವರು ಕೋವಿಡ್ ಸಂದರ್ಭದಲ್ಲಿ ಬಹಳ ಶ್ರಮಿಸಿದ ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು, ವೈದ್ಯರು ಮೊದಲಾದವರನ್ನು ಬಹಳ ಪ್ರಶಂಸಿಸಿದ್ದಾರೆ. "ನಾವು ಸಾಮಾನ್ಯವಾಗಿ ರಾಜಕಾರಣಿಗಳಿಗೆ ಶಾಪ ಹಾಕತ್ತೇವೆ. ಆದರೆ ಈ ಸಂದರ್ಭದಲ್ಲಿ ಅವರು ಜನರ ಸೇವೆಗಾಗಿ ತಮ್ಮ ಜವಾಬ್ದಾರಿ ತೋರಿದರು" ಎಂದು ಅವರು ಹೇಳಿದ್ದಾರೆ.
ಆಶಿಶ್ ಚೌಹಾಣ್ ಅವರು ಎರಡು ಬಾರಿ ಬಿಎಸ್ಇ ಮುಖ್ಯಸ್ಥ ಹುದ್ದೆ ಅನುಭವಿಸಿದ್ದಾರೆ. ಇದೇ ನವೆಂಬರ್ನಲ್ಲಿ ಅವರ ಈ ಎರಡನೇ ಅಧಿಕಾರ ಅವಧಿ ಅಂತ್ಯ ಆಗುತ್ತದೆ.
(ಒನ್ಇಂಡಿಯಾ ಸುದ್ದಿ)
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications