ಭಾರತದಲ್ಲಿ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿ ವಿಸ್ತರಿಸಿದ ಕೇಂದ್ರ ಸರ್ಕಾರ
ನವದೆಹಲಿ, ಅಕ್ಟೋಬರ್ 14: ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು 50 ಕಿಲೋ ಮೀಟರ್ ವಿಸ್ತರಿಸಲಾಗಿದೆ. ಆ ಮೂಲಕ ಅಧಿಕಾರ ವ್ಯಾಪ್ತಿಯಲ್ಲಿ ಏಕರೂಪತೆ ತರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸ್ಪಷ್ಟಪಡಿಸಿದೆ.
ಬಿಎಸ್ಎಫ್ ಅಧಿಕಾರ ವ್ಯಾಪ್ತಿಯಲ್ಲಿ ಏಕರೂಪತೆ ನೀಡಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಈ "ತಿದ್ದುಪಡಿ"ಯಿಂದ ಗಡಿಯನ್ನು ರಕ್ಷಿಸುವ ಪಡೆಗೆ ಗಡಿಯಾಚೆಗಿನ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಯಲು ಸಹಾಯ ಮಾಡುತ್ತದೆ ಎಂದು ಬಿಎಸ್ಎಫ್ ಹೇಳಿಕೆಯಲ್ಲಿ ಉಲ್ಲೇಖಿಸಿದೆ.
"ಗಡಿಯಾಚೆಗಿನ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಯಲು ತಿದ್ದುಪಡಿಯು ಗಡಿ ಭದ್ರತಾ ಪಡೆಗೆ ಸಹಕಾರಿಯಾಗಿದೆ. ಹೊಸ ತಿದ್ದುಪಡಿಯಿಂದ ಗಡಿ ರಾಜ್ಯಗಳಾದ ಪಂಜಾಬ್, ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾನ ಮತ್ತು ಅಸ್ಸಾಂನಲ್ಲಿ ಗಡಿಯಿಂದ 50 ಕಿಮೀ ಪ್ರದೇಶದಲ್ಲಿ ಕಾರ್ಯ ನಿರ್ವಹಿಸಲು ಏಕರೂಪತೆ ತಂದಂತೆ ಆಗುತ್ತದೆ," ಎಂದು ಬಿಎಸ್ಎಫ್ ಹೇಳಿದೆ.

50 ಕಿ.ಮೀ ವ್ಯಾಪ್ತಿ ವಿಸ್ತರಿಸಿಕೊಂಡ ಬಿಎಸ್ಎಫ್
ಅಂತಾರಾಷ್ಟ್ರೀಯ ಗಡಿಯಿಂದ ಭಾರತೀಯ ಭೂಪ್ರದೇಶದ ಒಳಗೆ 50 ಕಿಮೀ ಪ್ರದೇಶಗಳವರೆಗೆ ಶೋಧನೆ ನಡೆಸಲು, ಶಂಕಿತರನ್ನು ಬಂಧಿಸಲು ಮತ್ತು ವಶಪಡಿಸಿಕೊಳ್ಳಲು ಬಿಎಸ್ಎಫ್ಗೆ ಕೇಂದ್ರ ಸರ್ಕಾರವು ಅಧಿಕಾರ ನೀಡಿದೆ ಎಂದು ಕೆಲವು ವರದಿಗಳಿಂದ ಸ್ಪಷ್ಟವಾಗುತ್ತಿದೆ. ಈ ಮೊದಲು ಬಿಎಸ್ಎಫ್ಗೆ ಪಂಜಾಬ್ ಒಳಗೆ ಕೇವಲ 15 ಕಿಮೀ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳುವ ಅಧಿಕಾರವಿತ್ತು.

ಬಿಎಸ್ಎಫ್ ಅಧಿಕಾರ ವ್ಯಾಪ್ತಿ ವಿಸ್ತರಣೆ ಬಗ್ಗೆ ಪ್ರಶ್ನೆ
ಭಾರತ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಿರುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಕ್ರಮವನ್ನು ರಾಜಕೀಯ ನಾಯಕರು ಪ್ರಶ್ನೆ ಮಾಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ, ಉಪ ಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧಾವ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 'ಈ ನಿರ್ಧಾರವನ್ನು ತಕ್ಷಣವೇ ಹಿಂದಕ್ಕೆ ಪಡೆಯಿರಿ' ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಟ್ವೀಟ್ ಮಾಡಿದ್ದಾರೆ.
"ಅಂತಾರಾಷ್ಟ್ರೀಯ ಗಡಿಗಳಲ್ಲಿ 50 ಕಿ.ಮೀ ವ್ಯಾಪ್ತಿಯಲ್ಲಿ ಬಿಎಸ್ಎಫ್ ಹೆಚ್ಚುವರಿ ಅಧಿಕಾರವನ್ನು ನೀಡುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಒಕ್ಕೂಟ ವ್ಯವಸ್ಥೆ ಮೇಲಿನ ನೇರ ದಾಳಿಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ತಕ್ಷಣವೇ ಈ ನಿರ್ಧಾರವನ್ನು ಹಿಂಪಡೆಯುವಂತೆ ನಾನು ಒತ್ತಾಯಿಸುತ್ತೇನೆ," ಎಂದು ಟ್ವೀಟ್ ಮಾಡಿದ್ದಾರೆ.

ಗಡಿ ಭದ್ರತಾ ಪಡೆಯ ಸಿಬ್ಬಂದಿ ಪೊಲೀಸ್ ಅಲ್ಲ
"ಕೇಂದ್ರ ಸರ್ಕಾರದ ಈ "ತಾರ್ಕಿಕವಲ್ಲದ" ನಿರ್ಧಾರವು ಗಡಿ ಭದ್ರತಾ ಪಡೆಗಳನ್ನು ಹೆಚ್ಚಿಸುವ ಮನೋಭಾವಕ್ಕೆ ವಿರುದ್ಧವಾಗಿದೆ," ಎಂದು ಸುಖಜಿಂದರ್ ಸಿಂಗ್ ರಾಂಧವಾ ಹೇಳಿದ್ದಾರೆ. ಅವರು ಅಂತಾರಾಷ್ಟ್ರೀಯ ಗಡಿಯ ಮೇಲೆ ಗಮನ ಹರಿಸಬೇಕು ಮತ್ತು ರಕ್ಷಣೆಗೆ ಮೊದಲ ಸಾಲಿನಲ್ಲಿ ನಿಂತು ಕಾರ್ಯನಿರ್ವಹಿಸಬೇಕು. ಒಳನಾಡಿನಲ್ಲಿ ಪೊಲೀಸರ ಕೆಲಸ ಮಾಡುವುದು ಗಡಿ ಭದ್ರತಾ ಪಡೆಯ ಕಾರ್ಯವಲ್ಲ ಎಂದು ಅವರು ಹೇಳಿದ್ದಾರೆ.

ರಾಜಕೀಯ ನಾಯಕರ ಟೀಕೆಗೆ ಬಿಎಸ್ಎಫ್ ಪ್ರತಿಕ್ರಿಯೆ
ಅಂತರರಾಷ್ಟ್ರೀಯ ಗಡಿಗಳಲ್ಲಿ ಅಧಿಕಾರ ವ್ಯಾಪ್ತಿಯ ವಿಸ್ತರಣೆಯ ಟೀಕೆಗಳಿಗೆ ಬಿಎಸ್ಎಫ್ ಪ್ರತಿಕ್ರಿಯೆ ನೀಡಿದೆ. ಹೊಸ ತಿದ್ದುಪಡಿಯಿಂದ ಗಡಿ ರಾಜ್ಯಗಳಾದ ಪಂಜಾಬ್, ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾನ ಮತ್ತು ಅಸ್ಸಾಂನಲ್ಲಿ ತನ್ನ ಕಾರ್ಯಾಚರಣೆಗೆ ಏಕರೂಪತೆಯನ್ನು ತರುತ್ತದೆ. ಈಗ ಅದು ಗಡಿಯಿಂದ 50 ಕಿಮೀ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬಹುದು ಎಂದು ಬಿಎಸ್ಎಫ್ ಹೇಳಿದೆ. ಈ ಹಿಂದೆ "ಅಕ್ಟೋಬರ್ 11 ರಂದು ಜಾರಿಗೆ ಬಂದ ತಿದ್ದುಪಡಿಯು ಬಿಎಸ್ಎಫ್ ತನ್ನ ಕರ್ತವ್ಯಗಳ ಚಾರ್ಟರ್ ಪ್ರಕಾರ ಕಾರ್ಯನಿರ್ವಹಿಸಬಹುದಾದ ಪ್ರದೇಶವನ್ನು ವ್ಯಾಖ್ಯಾನಿಸುವಲ್ಲಿ ಏಕರೂಪತೆಯನ್ನು ಸ್ಥಾಪಿಸುತ್ತದೆ ಮತ್ತು ಅದರ ಪ್ರದೇಶಗಳಲ್ಲಿ ಗಡಿ ಭದ್ರತಾ ಕಾರ್ಯವನ್ನು ನಿರ್ವಹಿಸುತ್ತದೆ," ಎಂದು ಗೃಹ ವ್ಯವಹಾರಗಳ ಸಚಿವಾಲಯವು ಸೂಚನೆ ನೀಡಿತ್ತು.

ಯಾವ ಗಡಿಯಲ್ಲಿ ಎಷ್ಟಿದೆ ಅಧಿಕಾರ ವ್ಯಾಪ್ತಿ?
ಗುಜರಾತ್ನಲ್ಲಿ ಬಿಎಸ್ಎಫ್ ಅಧಿಕಾರ ವ್ಯಾಪ್ತಿಯ ಪ್ರದೇಶವನ್ನು 80 ಕಿಮೀ ಪ್ರದೇಶದಿಂದ 50 ಕಿಮೀಗೆ ತಗ್ಗಿಸಲಾಗಿದೆ. ರಾಜಸ್ಥಾನದಲ್ಲಿ 50 ಕಿಮೀ ದೂರದಲ್ಲಿ ಹಾಗೆಯೇ ಉಳಿದಿದ್ದು, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ, ಮಣಿಪುರ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ನಲ್ಲಿ ಈ ಹಿಂದಿನಂತೆ ಯಾವುದೇ ಮಿತಿಯನ್ನು ನಿಗದಿಪಡಿಸಲಾಗಿಲ್ಲ. ಗಡಿ ಭದ್ರತಾ ಪಡೆ ಕಾಯಿದೆ, 1968ರ ಸೆಕ್ಷನ್ 139, ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿಯನ್ನು ಸೂಚಿಸಲು ಕೇಂದ್ರಕ್ಕೆ ಅಧಿಕಾರ ನೀಡುತ್ತದೆ. ಅಂತಹ ಯಾವುದೇ ಆದೇಶವನ್ನು ಸಂಸತ್ ಪ್ರತಿ ಸದನದ ಮುಂದೆ ಇಡಲಿದ್ದು, ಅದನ್ನು ಮಾರ್ಪಾಡು ಮಾಡುವ ಅಥವಾ ರದ್ದುಗೊಳಿಸುವ ಅಧಿಕಾರವನ್ನು ಸಂಸತ್ ಹೊಂದಿರುತ್ತದೆ.

ರಾಜ್ಯ ಮತ್ತು ಕೇಂದ್ರ ಪಡೆಗಳ ನಡುವೆ ಬಿಕ್ಕಟ್ಟು
"ಕೇಂದ್ರ ಸರ್ಕಾರದ ಕ್ರಮದಿಂದ ರಾಜ್ಯ ಮತ್ತು ಕೇಂದ್ರದ ಸಂಸ್ಥೆಗಳ ನಡುವೆ ಬಿಕ್ಕಟ್ಟು ಹೆಚ್ಚಾಗುತ್ತದೆ. ಕೇಂದ್ರದ ಆದೇಶದಂತೆ ಯಾರನ್ನು ಬಂಧಿಸಬೇಕು ಎಂಬುದರ ಮೇಲೆ ಅವರು ಪ್ರಭಾವ ಬೀರುತ್ತಾರೆ. 50 ಕಿಮೀ ಎಂದರೆ ನಿರ್ಣಾಯಕ ಜಿಲ್ಲೆಗಳು ಸೇರಿದಂತೆ ರಾಜ್ಯದ ಅರ್ಧ ಭಾಗವಾಗಿರುತ್ತದೆ. ಇದು ಹರಿಯಾಣದೊಂದಿಗೆ ಕೆಲವು ಅತಿಕ್ರಮಣವನ್ನು ಹೊಂದಿರಬಹುದು, ಈ ಬಗ್ಗೆ ಅಧಿಸೂಚನೆಯಲ್ಲಿ ಯಾವುದೇ ಉಲ್ಲೇಖವಿಲ್ಲ," ಎಂದು ಹಿರಿಯ ಪಂಜಾಬ್ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications