World Wushu Championship: ಬೆಳ್ಳಿ ಗೆದ್ದ ಬಿಎಸ್ಎಫ್ ಕಾನ್ಸ್ಟೇಬಲ್ಗೆ ಹೆಡ್ ಕಾನ್ಸ್ಟೇಬಲ್ ಬಡ್ತಿ
ನವದೆಹಲಿ, ಅಕ್ಟೋಬರ್ 24: ವಿಶ್ವ ವುಶು ಚಾಂಪಿಯನ್ಶಿಪ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬಿಎಸ್ಎಫ್ನ ಕಾನ್ಸ್ಟೆಬಲ್ ಶಿವಾನಿ ಅವರು ಇಂದು (ಅಕ್ಟೋಬರ್ 24) ಹೆಡ್ ಕಾನ್ಸ್ಟೆಬಲ್ ಹುದ್ದೆಗೆ ಬಡ್ತಿ ಪಡೆದಿದ್ದಾರೆ. ಬಿಎಸ್ಎಫ್ ಕ್ಯಾಂಪ್ ಚಾವ್ಲಾದಲ್ಲಿ ಬಿಎಸ್ಎಫ್ನ ಡಿಜಿ ದಲ್ಜಿತ್ ಸಿಂಗ್ ಚೌಧರಿ ಅವರು ರ್ಯಾಂಕ್ ಸಮಾರಂಭದ ನೇತೃತ್ವದ ವಹಿಸಿದ್ದರು.
ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಸೇವೆ ಸಲ್ಲಿಸಿದ ಕೇವಲ ಐದು ತಿಂಗಳೊಳಗೆ ಕಾನ್ಸ್ಟೆಬಲ್ ಶಿವಾನಿ ಈ ಬಡ್ತಿಯನ್ನು ಗಳಿಸುವ ಮೂಲಕ ಮಹತ್ವ ಸಾಧನೆ ಮಾಡಿದ್ದಾರೆ. ಭಾರತ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಿಂದ (ಡಿಒಪಿಟಿ) ಅಗತ್ಯ ಸಡಿಲಿಕೆ ಮತ್ತು ಅನುಮತಿಗಳನ್ನು ಸಹ ಪಡೆದು ಉನ್ನತ ಪಟ್ಟಕ್ಕೇರಿದ್ದಾರೆ.

ಹೆಡ್ ಕಾನ್ಸ್ಟೆಬಲ್ ಹುದ್ದೆಗೆ ಬಡ್ತಿ ಪಡೆದ ಕಾನ್ಸ್ಟೆಬಲ್ ಶಿವಾನಿ ಅವರು ಬ್ರೆಜಿಲ್ನಲ್ಲಿ ನಡೆದ 17 ನೇ ವಿಶ್ವ ವುಶು ಚಾಂಪಿಯನ್ಶಿಪ್ 2025 ರಲ್ಲಿ ಭಾರತ ಪ್ರತಿನಿಧಿಸಿದ್ದರು. ಅಲ್ಲಿ ಅವರು ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್ಎಫ್ನ ಡಿಜಿ ದಲ್ಜಿತ್ ಸಿಂಗ್ ಚೌಧರಿ ಅವರು, ಹೆಡ್ ಕಾನ್ಸ್ಟೆಬಲ್ ಶಿವಾನಿ ಅವರನ್ನು ಅಭಿನಂದಿಸಿದರು. ಶಿವಾನಿ ಅವರ ಕ್ರೀಡೆಯಲ್ಲಿ ಅಸಾಧಾರಣ ಸಾಧನೆ ಶ್ಲಾಘಿಸಿದರು. ಅವರ ರ್ಯಾಂಕ್ ಆಫ್ ಟೂರ್ ಬಡ್ತಿ ಇತರರಿಗೆ ಸ್ಪೂರ್ತಿಯಾಗಿದೆ ಎಂದು ಸಮಾರಂಭದಲ್ಲಿದ್ದ ಬಿಎಸ್ಎಫ್ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು.

ಇದೇ ವರ್ಷ 2025 ಜುಲೈ ನಲ್ಲಿ ಬಿಎಸ್ಎಫ್ ಸೆಂಟ್ರಲ್ ವುಶು ತಂಡದ ಕಾನ್ಸ್ಟೆಬಲ್ ಅನುಜ್ ಅವರಿಗೆ ಏಪ್ರಿಲ್ 2025 ರಲ್ಲಿ ಚೀನಾದಲ್ಲಿ ಜರುಗಿದ್ದ 10ನೇ ಸಾಂಡಾ ವಿಶ್ವ ವುಶು ಚಾಂಪಿಯನ್ಶಿಪ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಔಟ್-ಆಫ್-ಟರ್ನ್ ಬಡ್ತಿ ನೀಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಇಂದಿನ ರ್ಯಾಂಕ್ ಸಮಾರಂಭದಲ್ಲಿ ಹಿರಿಯ ಬಿಎಸ್ಎಫ್ ಅಧಿಕಾರಿಗಳು ಮತ್ತು ಬಿಎಸ್ಎಫ್ನ ಕ್ರೀಡಾ ಸಿಬ್ಬಂದಿಯ ಸಭೆಯಲ್ಲಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications