ಪಠಾಣ್ ಕೋಟ್ನಲ್ಲಿ ಉಗ್ರನನ್ನು ಕೊಂದ ಬಿಎಸ್ಎಫ್ ಯೋಧರು
ಬೆಂಗಳೂರು, ಜನವರಿ 21 : ಪಾಕಿಸ್ತಾನದಿಂದ ಗಡಿ ನುಸುಳಿ ಪಠಾಣ್ ಕೋಟ್ ಪ್ರವೇಶಿಸಲು ಯತ್ನಿಸಿದ ಉಗ್ರನನ್ನು ಯೋಧರು ಹತ್ಯೆ ಮಾಡಿದ್ದಾರೆ. ಒಟ್ಟು ಮೂವರು ಉಗ್ರರು ಒಳನುಸುಳಲು ಯತ್ನಿಸಿದ್ದು, ಗುಂಡಿನ ಶಬ್ದ ಕೇಳಿದ ಬಳಿಕ ಇಬ್ಬರು ಪರಾರಿಯಾಗಿದ್ದಾರೆ.
ಗುರುವಾರ ಮುಂಜಾನೆ ತಾಷ್ ಚೆಕ್ಪೋಸ್ಟ್ ಬಳಿ ಈ ಘಟನೆ ನಡೆದಿದೆ. ಮುಂಜು ಮುಸುಕಿದ ವಾತಾವರಣವಿದ್ದ ವೇಳೆ ಮೂವರು ಗಡಿ ನುಸುಳಲು ಯತ್ನಿಸಿದ್ದರು. ಇದನ್ನು ಗಮನಿಸಿದ ಬಿಎಸ್ಎಫ್ ಯೋಧರು ಗುಂಡು ಹಾರಿಸಿದ್ದು, ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]

ಗುಂಡು ಹಾರಿಸಿದ ತಕ್ಷಣ ಇಬ್ಬರು ಪಾಕಿಸ್ತಾನದ ಕಡೆ ಓಡಿ ಹೋಗಿದ್ದಾರೆ. ಮೂವರು ಅಕ್ರಮವಾಗಿ ಗಡಿ ನುಸುಳಲು ಯತ್ನಿಸುತ್ತಿದ್ದರು ಎಂದು ಬಿಎಸ್ಎಫ್ ಪಡೆಗಳು ಹೇಳಿವೆ. ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿಯ ಬಳಿಕ ಭಾರತ-ಪಾಕ್ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದರೆ, ದಟ್ಟವಾದ ಮಂಜು ಕವಿದಿರುವಾಗ ಉಗ್ರರು ಒಳನುಗ್ಗಲು ಯತ್ನಿಸಿದ್ದಾರೆ. [ಪಾಕ್ ತನಿಖಾ ತಂಡ ಪಠಾಣ್ ಕೋಟ್ ಪ್ರವೇಶಿಸುವಂತಿಲ್ಲ]
ಪಠಾಣ್ ಕೋಟ್ ದಾಳಿಯ ಬಳಿಕ ಬಿಎಸ್ಎಫ್ ಯೋಧರು ಗಸ್ತು ಹೆಚ್ಚಿಸಿದ್ದಾರೆ. ಕೇಂದ್ರ ರಕ್ಷಣಾ ಇಲಾಖೆಯೂ ಅಕ್ರಮವಾಗಿ ಒಳನುಸುಳಿ ಉಗ್ರರು ಬಂದರೆ ಪಡೆಗಳೇ ಜಬಾಬ್ದಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದೆ. ಮೃತಪಟ್ಟ ವ್ಯಕ್ತಿಯ ಮಾಹಿತಿಗಳನ್ನು ಸಂಗ್ರಹಣೆ ಮಾಡಲಾಗುತ್ತಿದೆ.
ಜನವರಿ 2ರಂದು ಪಠಾಣ್ ಕೋಟ್ ವಾಯುನೆಲೆಗೆ 6 ಉಗ್ರರು ನುಗ್ಗಿದ್ದರು. ಸುಮಾರು 60 ಗಂಟೆಗಳ ಕಾರ್ಯಾಚರಣೆ ಬಳಿಕ ವಾಯುನೆಲೆಯಲ್ಲಿ ಅಡಗಿದ್ದ ಎಲ್ಲಾ ಉಗ್ರರನ್ನು ಎನ್ಎಸ್ಜಿ ಕಮಾಂಡೋಗಳು ಹತ್ಯೆ ಮಾಡಿದ್ದರು. ಈ ದಾಳಿಯ ಬಳಿಕ ಪಠಾಣ್ ಕೋಟ್ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications