ಪಠಾಣ್ ಕೋಟ್ನಲ್ಲಿ ಉಗ್ರನನ್ನು ಕೊಂದ ಬಿಎಸ್ಎಫ್ ಯೋಧರು
ಬೆಂಗಳೂರು, ಜನವರಿ 21 : ಪಾಕಿಸ್ತಾನದಿಂದ ಗಡಿ ನುಸುಳಿ ಪಠಾಣ್ ಕೋಟ್ ಪ್ರವೇಶಿಸಲು ಯತ್ನಿಸಿದ ಉಗ್ರನನ್ನು ಯೋಧರು ಹತ್ಯೆ ಮಾಡಿದ್ದಾರೆ. ಒಟ್ಟು ಮೂವರು ಉಗ್ರರು ಒಳನುಸುಳಲು ಯತ್ನಿಸಿದ್ದು, ಗುಂಡಿನ ಶಬ್ದ ಕೇಳಿದ ಬಳಿಕ ಇಬ್ಬರು ಪರಾರಿಯಾಗಿದ್ದಾರೆ.
ಗುರುವಾರ ಮುಂಜಾನೆ ತಾಷ್ ಚೆಕ್ಪೋಸ್ಟ್ ಬಳಿ ಈ ಘಟನೆ ನಡೆದಿದೆ. ಮುಂಜು ಮುಸುಕಿದ ವಾತಾವರಣವಿದ್ದ ವೇಳೆ ಮೂವರು ಗಡಿ ನುಸುಳಲು ಯತ್ನಿಸಿದ್ದರು. ಇದನ್ನು ಗಮನಿಸಿದ ಬಿಎಸ್ಎಫ್ ಯೋಧರು ಗುಂಡು ಹಾರಿಸಿದ್ದು, ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]

ಗುಂಡು ಹಾರಿಸಿದ ತಕ್ಷಣ ಇಬ್ಬರು ಪಾಕಿಸ್ತಾನದ ಕಡೆ ಓಡಿ ಹೋಗಿದ್ದಾರೆ. ಮೂವರು ಅಕ್ರಮವಾಗಿ ಗಡಿ ನುಸುಳಲು ಯತ್ನಿಸುತ್ತಿದ್ದರು ಎಂದು ಬಿಎಸ್ಎಫ್ ಪಡೆಗಳು ಹೇಳಿವೆ. ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿಯ ಬಳಿಕ ಭಾರತ-ಪಾಕ್ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದರೆ, ದಟ್ಟವಾದ ಮಂಜು ಕವಿದಿರುವಾಗ ಉಗ್ರರು ಒಳನುಗ್ಗಲು ಯತ್ನಿಸಿದ್ದಾರೆ. [ಪಾಕ್ ತನಿಖಾ ತಂಡ ಪಠಾಣ್ ಕೋಟ್ ಪ್ರವೇಶಿಸುವಂತಿಲ್ಲ]
ಪಠಾಣ್ ಕೋಟ್ ದಾಳಿಯ ಬಳಿಕ ಬಿಎಸ್ಎಫ್ ಯೋಧರು ಗಸ್ತು ಹೆಚ್ಚಿಸಿದ್ದಾರೆ. ಕೇಂದ್ರ ರಕ್ಷಣಾ ಇಲಾಖೆಯೂ ಅಕ್ರಮವಾಗಿ ಒಳನುಸುಳಿ ಉಗ್ರರು ಬಂದರೆ ಪಡೆಗಳೇ ಜಬಾಬ್ದಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದೆ. ಮೃತಪಟ್ಟ ವ್ಯಕ್ತಿಯ ಮಾಹಿತಿಗಳನ್ನು ಸಂಗ್ರಹಣೆ ಮಾಡಲಾಗುತ್ತಿದೆ.
ಜನವರಿ 2ರಂದು ಪಠಾಣ್ ಕೋಟ್ ವಾಯುನೆಲೆಗೆ 6 ಉಗ್ರರು ನುಗ್ಗಿದ್ದರು. ಸುಮಾರು 60 ಗಂಟೆಗಳ ಕಾರ್ಯಾಚರಣೆ ಬಳಿಕ ವಾಯುನೆಲೆಯಲ್ಲಿ ಅಡಗಿದ್ದ ಎಲ್ಲಾ ಉಗ್ರರನ್ನು ಎನ್ಎಸ್ಜಿ ಕಮಾಂಡೋಗಳು ಹತ್ಯೆ ಮಾಡಿದ್ದರು. ಈ ದಾಳಿಯ ಬಳಿಕ ಪಠಾಣ್ ಕೋಟ್ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications