ಖೋಟೋ ನೋಟು ಪತ್ತೆಗಾಗಿ ಬಿಎಸ್ಎಫ್ ಯೋಧರಿಗೆ ತರಬೇತಿ
ನೂತನವಾಗಿ ಬಿಡುಗಡೆಗೊಂಡಿರುವ 2000 ರು. ಮುಖಬೆಲೆಯ ನೋಟುಗಳನ್ನು ಹೋಲುವ ಖೋಟಾ ನೋಟುಗಳನ್ನು ಮುದ್ರಿಸಿ ಬಾಂಗ್ಲಾದೇಶದಿಂದ ಭಾರತಕ್ಕೆ ಖದೀಮರು ರವಾನೆ ಮಾಡುತ್ತಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಕ್ರಮ.
ನವದೆಹಲಿ, ಫೆಬ್ರವರಿ 12: ಭಾರತೀಯ ಕರೆನ್ಸಿಯ ಖೋಟಾ ನೋಟುಗಳು ನೆರೆಯ ಬಾಂಗ್ಲಾದೇಶದಿಂದ ಭಾರತದೊಳಕ್ಕೆ ಆಗಮಿಸುತ್ತಿರುವುದನ್ನು ತಡೆಯಲು ಭಾರತ-ಬಾಂಗ್ಲಾದೇಶದ ಗಡಿ ಕಾಯುತ್ತಿರುವ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಸೈನಿಕರಿಗೆ ಖೋಟಾ ನೋಟುಗಳನ್ನು ಪತ್ತೆ ಹಚ್ಚುವ ವಿಶೇಷ ತರಬೇತಿ ನೀಡುವ ಕುರಿತಂತೆ ಬಿಎಸ್ಎಫ್ ಚಿಂತನೆ ನಡೆಸಿದೆ.
ಈ ಕುರಿತಂತೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಬಿಎಸ್ಎಫ್ ಮಾತುಕತೆ ಆರಂಭಿಸಿದೆ ಎಂದು ಮೂಲಗಳು ಹೇಳಿವೆ.
ನೂತನವಾಗಿ ಬಿಡುಗಡೆಗೊಂಡಿರುವ 2000 ರು. ಮುಖಬೆಲೆಯ ನೋಟುಗಳನ್ನು ಹೋಲುವ ಖೋಟಾ ನೋಟುಗಳನ್ನು ಮುದ್ರಿಸಿ ಬಾಂಗ್ಲಾದೇಶದಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿದೆ.[ಹಠಾತ್ ನೋಟ್ ಬ್ಯಾನ್ ನಿಂದ ಸಂಕಷ್ಟ ಆಯ್ತು ಎಂದ ಊರ್ಜಿತ್]

ದಿನನಿತ್ಯವೂ ಇಲ್ಲಿಂದ ಖೋಟಾ ನೋಟುಗಳು ಭಾರತವನ್ನು ಪ್ರವೇಶಿಸದಂತೆ ಹಗಲು-ರಾತ್ರಿ ಬಿಎಸ್ಎಫ್ ಯೋಧರು ಗಡಿಗಳಲ್ಲಿನ ಚೆಕ್ ಪೋಸ್ಟ್ ಗಳ ಮೇಲೆ ಹದ್ದಿನ ಕಣ್ಣಿಟ್ಟು ತಪಾಸಣೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಗೊಂಡಿರುವ 2000 ರು. ಮುಖಬೆಲೆಯ ನಕಲಿ ನೋಟುಗಳ ಬಂಡಲ್ ಗಳನ್ನೂ ಯೋಧರು ವಶಪಡಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಖೋಟಾ ನೋಟುಗಳನ್ನು ಥಟ್ಟನೆ ಗುರುತಿಸಲು ಅನುಕೂಲವಾಗುವಂತೆ ಯೋಧರಿಗೆ ವಿಶೇಷ ತರಬೇತಿಯ ಅವಶ್ಯಕತೆಯಿದ್ದು, ಈ ಬಗ್ಗೆ ರಿಸರ್ವ್ ಬ್ಯಾಂಕ್ ನ ನೆರವು ಪಡೆಯಲು ಯೋಚಿಸಲಾಗಿದೆ ಎಂದು ಹೇಳಲಾಗಿದೆ.[500, 1000 ರು. ನೋಟು ನಿಷೇಧ ಸರ್ಕಾರದ್ದು, ಆರ್ ಬಿಐನದ್ದಲ್ಲ!]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications