ಖೋಟೋ ನೋಟು ಪತ್ತೆಗಾಗಿ ಬಿಎಸ್ಎಫ್ ಯೋಧರಿಗೆ ತರಬೇತಿ
ನೂತನವಾಗಿ ಬಿಡುಗಡೆಗೊಂಡಿರುವ 2000 ರು. ಮುಖಬೆಲೆಯ ನೋಟುಗಳನ್ನು ಹೋಲುವ ಖೋಟಾ ನೋಟುಗಳನ್ನು ಮುದ್ರಿಸಿ ಬಾಂಗ್ಲಾದೇಶದಿಂದ ಭಾರತಕ್ಕೆ ಖದೀಮರು ರವಾನೆ ಮಾಡುತ್ತಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಕ್ರಮ.
ನವದೆಹಲಿ, ಫೆಬ್ರವರಿ 12: ಭಾರತೀಯ ಕರೆನ್ಸಿಯ ಖೋಟಾ ನೋಟುಗಳು ನೆರೆಯ ಬಾಂಗ್ಲಾದೇಶದಿಂದ ಭಾರತದೊಳಕ್ಕೆ ಆಗಮಿಸುತ್ತಿರುವುದನ್ನು ತಡೆಯಲು ಭಾರತ-ಬಾಂಗ್ಲಾದೇಶದ ಗಡಿ ಕಾಯುತ್ತಿರುವ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಸೈನಿಕರಿಗೆ ಖೋಟಾ ನೋಟುಗಳನ್ನು ಪತ್ತೆ ಹಚ್ಚುವ ವಿಶೇಷ ತರಬೇತಿ ನೀಡುವ ಕುರಿತಂತೆ ಬಿಎಸ್ಎಫ್ ಚಿಂತನೆ ನಡೆಸಿದೆ.
ಈ ಕುರಿತಂತೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಬಿಎಸ್ಎಫ್ ಮಾತುಕತೆ ಆರಂಭಿಸಿದೆ ಎಂದು ಮೂಲಗಳು ಹೇಳಿವೆ.
ನೂತನವಾಗಿ ಬಿಡುಗಡೆಗೊಂಡಿರುವ 2000 ರು. ಮುಖಬೆಲೆಯ ನೋಟುಗಳನ್ನು ಹೋಲುವ ಖೋಟಾ ನೋಟುಗಳನ್ನು ಮುದ್ರಿಸಿ ಬಾಂಗ್ಲಾದೇಶದಿಂದ ಭಾರತಕ್ಕೆ ರವಾನೆ ಮಾಡಲಾಗುತ್ತಿದೆ.[ಹಠಾತ್ ನೋಟ್ ಬ್ಯಾನ್ ನಿಂದ ಸಂಕಷ್ಟ ಆಯ್ತು ಎಂದ ಊರ್ಜಿತ್]

ದಿನನಿತ್ಯವೂ ಇಲ್ಲಿಂದ ಖೋಟಾ ನೋಟುಗಳು ಭಾರತವನ್ನು ಪ್ರವೇಶಿಸದಂತೆ ಹಗಲು-ರಾತ್ರಿ ಬಿಎಸ್ಎಫ್ ಯೋಧರು ಗಡಿಗಳಲ್ಲಿನ ಚೆಕ್ ಪೋಸ್ಟ್ ಗಳ ಮೇಲೆ ಹದ್ದಿನ ಕಣ್ಣಿಟ್ಟು ತಪಾಸಣೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಗೊಂಡಿರುವ 2000 ರು. ಮುಖಬೆಲೆಯ ನಕಲಿ ನೋಟುಗಳ ಬಂಡಲ್ ಗಳನ್ನೂ ಯೋಧರು ವಶಪಡಿಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಖೋಟಾ ನೋಟುಗಳನ್ನು ಥಟ್ಟನೆ ಗುರುತಿಸಲು ಅನುಕೂಲವಾಗುವಂತೆ ಯೋಧರಿಗೆ ವಿಶೇಷ ತರಬೇತಿಯ ಅವಶ್ಯಕತೆಯಿದ್ದು, ಈ ಬಗ್ಗೆ ರಿಸರ್ವ್ ಬ್ಯಾಂಕ್ ನ ನೆರವು ಪಡೆಯಲು ಯೋಚಿಸಲಾಗಿದೆ ಎಂದು ಹೇಳಲಾಗಿದೆ.[500, 1000 ರು. ನೋಟು ನಿಷೇಧ ಸರ್ಕಾರದ್ದು, ಆರ್ ಬಿಐನದ್ದಲ್ಲ!]
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications