ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ
ಡ್ರಗ್ಸ್ ಹೊತ್ತು ಭಾರತದ ಗಡಿಯೊಳಕ್ಕೆ ನುಸುಳಲು ಯತ್ನಿಸುತ್ತಿದ್ದ ಡ್ರೋನ್ ಅನ್ನು ಭಾರತೀಯ ಗಡಿ ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಪಂಜಾಬ್ನ ಅಮೃತಸರ ಸೆಕ್ಟರ್ನಲ್ಲಿ ಡ್ರೋನ್ ಅನ್ನು ಹೊಡೆದುರುಳಿಸಿದ್ದು, ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಿಎಸ್ಎಫ್ ಪಂಜಾಬ್ ಫ್ರಾಂಟಿಯರ್ ಈ ಕಾರ್ಯಾಚರಣೆ ನಡೆಸಿದೆ. ಮಾದಕ ವಸ್ತುಗಳ ಮಾರಾಟಗಾರರು ಡ್ರೋನ್ ಮೂಲಕ ಭಾರತದೊಳಕ್ಕೆ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ್ದು ಇದೇ ಮೊದಲನೇನಲ್ಲ ಹಲವು ಬಾರಿ ಇಂತಹ ಪ್ರಯತ್ನಗಳನ್ನು ಮಾಡಿದ್ದು, ಸೇನೆ ಅದನ್ನು ವಿಫಲಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ ಭಾರತೀಯ ಭದ್ರತಾ ಪಡೆ ಹೊಡೆದುರುಳಿಸಿದ 6ನೇ ಡ್ರೋನ್ ಇದಾಗಿದೆ.

24 ಗಂಟೆಗಳ ಹಿಂದಷ್ಟೇ ಮತ್ತೊಂದು ಡ್ರೋನ್ ವಶಸಕ್ಕೆ
ಇನ್ನು 24 ಗಂಟೆಗಳ ಹಿಂದಷ್ಟೇ ಮತ್ತೊಂದು ಡ್ರೋನ್ ಅನ್ನು ಭದ್ರತಾ ಸಿಬ್ಬಂದಿ ಪಡೆ ವಶ ಪಡಿಸಿಕೊಂಡಿತ್ತು. ಗ್ರಾಮದ ಕಡೆಗೆ ಮೂವರು ವ್ಯಕ್ತಿಗಳು ಓಡುತ್ತಿರುವುದನ್ನು ಕಂಡ ಭದ್ರತಾ ಸಿಬ್ಬಂದಿ ಅವರನ್ನು ಬೆನ್ನಟ್ಟಿದಾಗ, 3.4 ಕೆಜಿಯ ಮೂರು ಪ್ಯಾಕೆಟ್ಗಳ ಶಂಕಿತ ಮಾದಕವಸ್ತುಗಳ ಮತ್ತು ಡ್ರೋನ್ ಸಿಕ್ಕಿತ್ತು.
ಮೇ 20 ರಂದು ಕೂಡ ಅಮೃತಸರದಲ್ಲಿ ಡ್ರೋನ್ ಅನ್ನು ಹೊಡೆದುರುಳಿಸಲಾಗಿತ್ತು. ಕಳೆದ ವಾರ ಪಂಜಾಬ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ಎಫ್ ಅಧಿಕಾರಿಗಳು ನಾಲ್ಕು ಪಾಕಿಸ್ತಾನಿ ಡ್ರೋನ್ಗಳನ್ನು ತಡೆದು ಅವುಗಳಲ್ಲಿ ಮೂರನ್ನು ಹೊಡೆದುರುಳಿಸಿದ್ದನ್ನು ಇಲ್ಲಿ ನೆನಪಸಿಕೊಳ್ಳಬಹುದು.
ಮೊದಲ ಡ್ರೋನ್ "ಡಿಜಿಐ ಮ್ಯಾಟ್ರಿಸ್ 300 ಆರ್ ಟಿಕೆ" ತಯಾರಿಕೆಯ ಕಪ್ಪು ಕ್ವಾಡ್ಕಾಪ್ಟರ್ ಆಗಿತ್ತು. ಎರಡನೆಯದು ಕೂಡ ಅದೇ ತಯಾರಿಕೆಯಾಗಿದ್ದು, ಅಮೃತಸರ ಜಿಲ್ಲೆಯ ರತ್ತನ್ ಖುರ್ದ್ ಗ್ರಾಮದಿಂದ ವಶಪಡಿಸಿಕೊಳ್ಳಲಾಗಿತ್ತು. ಮೂರನೇ ಡ್ರೋನ್ ಅನ್ನು ಹೊಡೆದುರುಳಿಸಲಾಯಿತು ಆದರೆ ಅದು ಪಾಕಿಸ್ತಾನದ ಕಡೆ ಬಿದ್ದಿದ್ದರಿಂದ ಅದನ್ನು ವಶಕ್ಕೆ ಪಡೆಯಲು ಸಾಧ್ಯವಾಗಿರಲಿಲ್ಲ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications