ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ
ಡ್ರಗ್ಸ್ ಹೊತ್ತು ಭಾರತದ ಗಡಿಯೊಳಕ್ಕೆ ನುಸುಳಲು ಯತ್ನಿಸುತ್ತಿದ್ದ ಡ್ರೋನ್ ಅನ್ನು ಭಾರತೀಯ ಗಡಿ ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಪಂಜಾಬ್ನ ಅಮೃತಸರ ಸೆಕ್ಟರ್ನಲ್ಲಿ ಡ್ರೋನ್ ಅನ್ನು ಹೊಡೆದುರುಳಿಸಿದ್ದು, ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಿಎಸ್ಎಫ್ ಪಂಜಾಬ್ ಫ್ರಾಂಟಿಯರ್ ಈ ಕಾರ್ಯಾಚರಣೆ ನಡೆಸಿದೆ. ಮಾದಕ ವಸ್ತುಗಳ ಮಾರಾಟಗಾರರು ಡ್ರೋನ್ ಮೂಲಕ ಭಾರತದೊಳಕ್ಕೆ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ್ದು ಇದೇ ಮೊದಲನೇನಲ್ಲ ಹಲವು ಬಾರಿ ಇಂತಹ ಪ್ರಯತ್ನಗಳನ್ನು ಮಾಡಿದ್ದು, ಸೇನೆ ಅದನ್ನು ವಿಫಲಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ ಭಾರತೀಯ ಭದ್ರತಾ ಪಡೆ ಹೊಡೆದುರುಳಿಸಿದ 6ನೇ ಡ್ರೋನ್ ಇದಾಗಿದೆ.

24 ಗಂಟೆಗಳ ಹಿಂದಷ್ಟೇ ಮತ್ತೊಂದು ಡ್ರೋನ್ ವಶಸಕ್ಕೆ
ಇನ್ನು 24 ಗಂಟೆಗಳ ಹಿಂದಷ್ಟೇ ಮತ್ತೊಂದು ಡ್ರೋನ್ ಅನ್ನು ಭದ್ರತಾ ಸಿಬ್ಬಂದಿ ಪಡೆ ವಶ ಪಡಿಸಿಕೊಂಡಿತ್ತು. ಗ್ರಾಮದ ಕಡೆಗೆ ಮೂವರು ವ್ಯಕ್ತಿಗಳು ಓಡುತ್ತಿರುವುದನ್ನು ಕಂಡ ಭದ್ರತಾ ಸಿಬ್ಬಂದಿ ಅವರನ್ನು ಬೆನ್ನಟ್ಟಿದಾಗ, 3.4 ಕೆಜಿಯ ಮೂರು ಪ್ಯಾಕೆಟ್ಗಳ ಶಂಕಿತ ಮಾದಕವಸ್ತುಗಳ ಮತ್ತು ಡ್ರೋನ್ ಸಿಕ್ಕಿತ್ತು.
ಮೇ 20 ರಂದು ಕೂಡ ಅಮೃತಸರದಲ್ಲಿ ಡ್ರೋನ್ ಅನ್ನು ಹೊಡೆದುರುಳಿಸಲಾಗಿತ್ತು. ಕಳೆದ ವಾರ ಪಂಜಾಬ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ಎಫ್ ಅಧಿಕಾರಿಗಳು ನಾಲ್ಕು ಪಾಕಿಸ್ತಾನಿ ಡ್ರೋನ್ಗಳನ್ನು ತಡೆದು ಅವುಗಳಲ್ಲಿ ಮೂರನ್ನು ಹೊಡೆದುರುಳಿಸಿದ್ದನ್ನು ಇಲ್ಲಿ ನೆನಪಸಿಕೊಳ್ಳಬಹುದು.
ಮೊದಲ ಡ್ರೋನ್ "ಡಿಜಿಐ ಮ್ಯಾಟ್ರಿಸ್ 300 ಆರ್ ಟಿಕೆ" ತಯಾರಿಕೆಯ ಕಪ್ಪು ಕ್ವಾಡ್ಕಾಪ್ಟರ್ ಆಗಿತ್ತು. ಎರಡನೆಯದು ಕೂಡ ಅದೇ ತಯಾರಿಕೆಯಾಗಿದ್ದು, ಅಮೃತಸರ ಜಿಲ್ಲೆಯ ರತ್ತನ್ ಖುರ್ದ್ ಗ್ರಾಮದಿಂದ ವಶಪಡಿಸಿಕೊಳ್ಳಲಾಗಿತ್ತು. ಮೂರನೇ ಡ್ರೋನ್ ಅನ್ನು ಹೊಡೆದುರುಳಿಸಲಾಯಿತು ಆದರೆ ಅದು ಪಾಕಿಸ್ತಾನದ ಕಡೆ ಬಿದ್ದಿದ್ದರಿಂದ ಅದನ್ನು ವಶಕ್ಕೆ ಪಡೆಯಲು ಸಾಧ್ಯವಾಗಿರಲಿಲ್ಲ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications