'ನನಗೆ ಕಿರುಕುಳ ನೀಡುತ್ತಿದ್ದಾರೆ' ತೇಜ್ ಬಹದ್ದೂರ್ ಮತ್ತೊಂದು ವಿಡಿಯೋ
ಬಿಎಸ್ಎಫ್ ಜವಾನ ತೇಜ್ ಬಹದ್ದೂರ್ ಯಾದವ್ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. 5 ದಿನಗಳ ಹಿಂದೆ ಈ ವಿಡಿಯೋ ಬಿಡುಗಡೆ ಮಾಡಿದ್ದು 'ಭ್ರಷ್ಟಾಚಾರ ಬಯಲಿಗೆಳೆದ ನಂತರ ನನಗೆ ಹಿಂಸೆ ನೀಡುತ್ತಿದ್ದಾರೆ' ಎಂದು ಆಪಾದಿಸಿದ್ದಾರೆ.
ಬೆಂಗಳೂರು, ಮಾರ್ಚ್ 3: ಬಿಎಸ್ಎಫ್ ಜವಾನ ತೇಜ್ ಬಹದ್ದೂರ್ ಯಾದವ್ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. 5 ದಿನಗಳ ಹಿಂದೆ ಈ ವಿಡಿಯೋ ಬಿಡುಗಡೆ ಮಾಡಿದ್ದು 'ಭ್ರಷ್ಟಾಚಾರ ಬಯಲಿಗೆಳೆದ ನಂತರ ನನಗೆ ಹಿಂಸೆ ನೀಡುತ್ತಿದ್ದಾರೆ' ಎಂದು ಆಪಾದಿಸಿದ್ದಾರೆ.
ಸದ್ಯ ಈ ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಬಳಿ ನೆರವು ನೀಡುವಂತೆ ಅವರು ಕೇಳಿಕೊಂಡಿದ್ದಾರೆ. ಹೈಕೋರ್ಟಿನ ನಿರ್ದೇಶನದಂತೆ ಪತ್ನಿ ಜಮ್ಮುವಿನ ಅತಿಥಿ ಗೃಹದಲ್ಲಿ ತೇಜ್ ಬಹದ್ದೂರ್ ಯಾದವ್ ಭೇಟಿ ಮಾಡಿದ ವೇಳೆ ಈ ವಿಡಿಯೋ ತೆಗೆಯಲಾಗಿದೆ. ಫೆಬ್ರವರಿ ಎರಡನೇ ವಾರದಲ್ಲಿ ಈ ಭೇಟಿ ನಡೆದಿತ್ತು.[ನನ್ನ ಗಂಡನನ್ನು ಹುಡುಕಿಕೊಡಿ.. ತೇಜ್ ಬಹದ್ದೂರ್ ಪತ್ನಿಯ ಅಳಲು]

ವೀಡಿಯೋದಲ್ಲಿ ಸರಣಿ ಆರೋಪಗಳನ್ನು ಹೊರಿಸಿರುವ ತೇಜ್ ಬಹದ್ದೂರ್, "ನನ್ನ ಫೋನನ್ನು ಕಿತ್ತುಕೊಳ್ಳಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನನಗಿರುವ ಪಾಕಿಸ್ತಾನ ಗೆಳೆಯರ ಮೇಲೆ ಕಣ್ಣಿಡಲಾಗಿದೆ," ಎಂದು ಹೇಳಿದ್ದಾರೆ. ಮಾತ್ರವಲ್ಲದೆ ಪಾಕಿಸ್ತಾನ ಗೆಳೆಯರ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ.
ಇಷ್ಟಲ್ಲದೆ ನನ್ನ ಸ್ವಯಂ ನಿವೃತ್ತಿ ಅರ್ಜಿಯನ್ನೂ ರದ್ದು ಮಾಡಿದ್ದಾರೆ. ದಯವಿಟ್ಟು ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ನಾನು ಹೇಳುತ್ತಿರುವುದೆಲ್ಲಾ ಸತ್ಯ ಎಂದು ಹೇಳಿದ್ದಾರೆ.[ಯೋಧ ಯಾದವ್ ನನ್ನು ಬಂಧಿಸಿಲ್ಲ: ಹೈಕೋರ್ಟ್ ಗೆ ಕೇಂದ್ರದ ಸ್ಪಷ್ಟನೆ]
ಆದರೆ ಇದನ್ನು ಗೃಹ ಇಲಾಖೆ ಅಧಿಕಾರಿಗಳು ತಳ್ಳಿ ಹಾಕಿದ್ದಾರೆ. 'ಅವರ ಫೋನನ್ನು ಕಿತ್ತೊಕೊಂಡಿಲ್ಲ, ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಅಷ್ಟೆ. ಬಹುಶಃ ಅವರ ಹೆಂಡತಿ ಭೇಟಿ ವೇಳೆ ಹೊಸ ಫೋನು ಕೊಟ್ಟಿರಲೂಬಹುದು. ವಿಚಾರಣೆ ಜಾರಿಯಲ್ಲಿರುವುದರಿಂದ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಕ್ಯಾನ್ಸಲ್ ಮಾಡಲಾಗಿದೆ ಅಷ್ಟೆ,' ಎಂದು ಹೇಳಿದೆ.
ಇದೀಗ ಗೃಹ ಇಲಾಖೆ ಅಧಿಕಾರಿಗಳು ವಿಡಿಯೋ ಮಾಡಿ ವೈರಲ್ ಮಾಡುತ್ತಿರುವುದರ ಹಿಂದೆ ವೃತ್ತಿಪರರ ಕೈವಾಡ ಇರಬಹುದು ಎಂದು ಅಂದಾಜಿಸಿದ್ದು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ವಿಡಿಯೋ ಎಡಿಟ್ ಮಾಡಿ ಕ್ಯಾಪ್ಷನ್ ಹಾಕಿ ಬಿಡುಗಡೆ ಮಾಡಲಾಗಿದೆ. ಹಾಗಾಗಿ ಇದರ ಹಿಂದೆ ವೃತ್ತಿಪರರ ಕೈವಾಡ ಇರಬಹುದು ಎಂದು ನಾವು ನಂಬಿದ್ದೇವೆ. ಹೀಗಾಗಿ ಇದರ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications