ಸತ್ಯ ಹೇಳಿದ ಸೈನಿಕನ ತೇಜೋವಧೆಗೆ ಸಿದ್ಧವಾದ ಬಿಎಸ್ಎಫ್
ನವದೆಹಲಿ, ಜ. 11: ಗಡಿ ಕಾಯುವ ಸೈನಿಕರಿಗೆ ನೀಡಲಾಗುತ್ತಿರುವ ಕಳಪೆ ಆಹಾರ ವ್ಯವಸ್ಥೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅನಾವರಣಗೊಳಿಸಿರುವ ಬಿಎಸ್ಎಫ್ ಯೋಧ ತೇಜ್ ಬಹದೂರ್ ಯಾದವ್ ಒಬ್ಬ ಹುಚ್ಚ, ಮದ್ಯ ವ್ಯಸನಿ, ಅವಿಧೇಯ ಯೋಧ ಎಂದು ಬಿಎಸ್ಎಫ್ ಹೇಳಿದೆ.
ಯಾದವ್ ಅವರು ಸತ್ಯ ಸ್ಫೋಟಿಸಿರುವ ಬೆನ್ನಲ್ಲೇ, ಅಧಿಕೃತ ಪ್ರಕಟಣೆಯೊಂದನ್ನು ಹೊರಡಿಸಿರುವ ಬಿಎಸ್ಎಫ್, ಆತನ ತೇಜೋವಧಿಗೆ ಮುಂದಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾದವ್ ಅಪ್ ಲೋಡ್ ಮಾಡಿದ್ದ ವೀಡಿಯೋಗಳು ವೈರಲ್ ಆಗಿ, ದೇಶಾದ್ಯಂತ ಆ ಬಗ್ಗೆ ಚರ್ಚೆಗಳಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವಾಲಯ ತನಿಖೆಗೆ ಆದೇಶ ನೀಡಿದೆ.
ಆದರೆ, ಬಿಎಸ್ ಎಫ್ ಮಾತ್ರ ಯಾದವ್ ಅವರ ಚಾರಿತ್ರ್ಯವನ್ನೇ ವಧೆ ಮಾಡಲು ಹೆಜ್ಜೆಯಿಟ್ಟಿದ್ದು, ಆತನ ವಿರುದ್ಧ ಆರೋಪಗಳನ್ನು ಎಡೆಬಿಡದೇ ಮಾಡುತ್ತಿದೆ.
ಯಾದವ್ ಒಬ್ಬ ಕುಡುಕು, ಅವಿಧೇಯ ಸೈನಿಕ. ಅನುಮತಿ ಇಲ್ಲದೇ ರಜೆ ಪಡೆಯುವಂಥವನು, ಹಿರಿಯ ಅಧಿಕಾರಿಗಳೆಂದರೆ ಈತ ಅಗೌರವ ತೋರುತ್ತಾನೆ. ಹಾಗಾಗಿ, ಈತನಿಗೆ ಅನೇಕ ಬಾರಿ ಛೀಮಾರಿ ಹಾಕಲಾಗಿದೆ. ಈತನಿಗೆ ಬುದ್ಧಿ ಕಲಿಸಲೆಂದೇ ಕ್ಲಿಷ್ಟಕರವಾದ ಜಮ್ಮು-ಕಾಶ್ಮೀರ ಗಡಿಯಲ್ಲಿ ಆತನನ್ನು ಸೇವೆಗೆ ನಿಯೋಜಿಸಲಾಗಿದೆ.
ಬಿಎಸ್ ಎಫ್ ನ ಕ್ರಮಗಳಿಂದಾಗಿ ಹತಾಶೆಗೊಂಡಿರುವ ಆತ ಬಿಎಸ್ ಎಫ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾನೆಂದು ದೂರಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications