ಅಕ್ರಮ ಬಯಲಿಗೆಳೆದ ಯೋಧ ಸೇವೆಯಿಂದ ವಜಾ
ನವದೆಹಲಿ, ಜು.3: ಭಾರತದ ಗಡಿಯಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಬಹಿರಂಗಗೊಳಿಸುವ ಸಿಡಿಯನ್ನು ಕನ್ನಡ ಖಾಸಗಿ ಸುದ್ದಿ ವಾಹಿನಿಗಳಿಗೆ ನೀಡಿದ್ದ ಬಿಎಸ್ಎಫ್ ಯೋಧ ಮಂಜುನಾಥ್ರನ್ನು ಸೇವೆಯಿಂದ ವಜಾಗೊಳಿಸಿ ಎಸ್ಎಸ್ಎಫ್ ಕೋರ್ಟ್ ಆದೇಶ ಹೊರಡಿಸಿದೆ.
ಗಡಿಯಲ್ಲಿ ನಡೆಯುತ್ತಿದ್ದ ಅಕ್ರಮಗಳಿಗೆ ಕೆಲ ಸೇನಾ ಅಧಿಕಾರಿಗಳು ಕುಮ್ಮಕ್ಕು ನೀಡುತ್ತಿದ್ದಾರೆ ಹಾಗೂ ಯೋಧರಿಗೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನುಖಾಸಗಿ ಸುದ್ದಿ ವಾಹಿನಿಗಳ ಮೂಲಕ ಮಂಜುನಾಥ್ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸಮರಿ ಸೆಕ್ಯುರಿಟಿ ಫೋರ್ಸ್ನ ನ್ಯಾಯಾಧಿಕಾರಿ ಕಮಾಂಡೆಂಟ್ ವಿ. ಬಡೋಲಾ ಅವರು ಶಿವಮೊಗ್ಗ ಮೂಲದ ಯೋಧ ಮಂಜುನಾಥ್ರನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸೇವೆಯಿಂದ ವಜಾಗೊಳಿಸಿದ ನಂತರ ಪ್ರತಿಕ್ರಿಯಿಸಿರುವ ಮಂಜುನಾಥ್, 'ತಾವು ನೀಡಿದ ದೇಶದ್ರೋಹದ ಆರೋಪಗಳ ಬಗ್ಗೆ ಸರಿಯಾಗಿ ತನಿಖೆ ಮಾಡದೇ ನಾನು ಮೇಲಾಧಿಕಾರಿಗಳ ಮೇಲೆ ಕೈಮಾಡಿದ್ದೇನೆ ಮತ್ತು ಕೆಟ್ಟ ಮಾತುಗಳಿಂದ ಬೈದಿದ್ದೇನೆ ಎಂಬ ಆರೋಪದ ಮೇಲೆ ವಿಚಾರಣೆ ನಡೆಸಿ ನನ್ನನ್ನು ವಜಾ ಮಾಡಿದ್ದಾರೆ' ಎಂದು ಮಂಜುನಾಥ್ ಆರೋಪಿಸಿದ್ದಾರೆ.

ಯೋಧ ಮಂಜುನಾಥ್ ಅವರು ಗಡಿಯಲ್ಲಿ ನಡೆಯುತ್ತಿದ್ದ ಅವ್ಯವಹರಗಳ ಕುರಿತಾಗಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ, ಹಿರಿಯ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಅಕ್ರಮ ನುಸುಳುವಿಕೆ, ಪ್ರಾಣಿಗಳ ಸಾಗಾಟ, ಕಿರಿಯ ಅಧಿಕಾರಿಗಳಿಗೆ ಕಿರುಕುಳ ಮುಂತಾದ ಗಂಭೀರವುಳ್ಳ ವಿಡಿಯೋವನ್ನು ಮಾಧ್ಯಮಗಳಿಗೆ ಯೋಧ ಮಂಜುನಾಥ್ ಕಳಿಸಿದ್ದರು.
ಹಿರಿಯ ಅಧಿಕಾರಿಗಳು ಗಡಿಯಲ್ಲಿ ನಡೆಯುವ ಅಕ್ರಮಗಳಿಗೆ ರಕ್ಷಣೆ ನೀಡುತ್ತಿದ್ದಾರೆ. ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದೊಳಗೆ ದನ ಹಾಗೂ ಒಂಟೆಗಳನ್ನು ಸಾಗಿಸುತ್ತಿರುವ ದೃಶ್ಯಾವಳಿಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು. ಟಿವಿ9 ಸುದ್ದಿ ವಾಹಿನಿಗೆ ನೀಡಿದ್ದ ವಿಡಿಯೋ ತುಣುಕು ಹೀಗಿದೆ ನೋಡಿ...
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications