ರಾಜೀನಾಮೆ ಕೊಡುವಂತೆ 80,000 ನೌಕರರಿಗೆ BSNL ಸೂಚನೆ ನೀಡುವುದು ನಿಜವೇ?
ನವದೆಹಲಿ, ಸೆಪ್ಟೆಂಬರ್ 6: ಸಂಬಳ ಪಾವತಿಯಾಗದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದ ನೌಕರರಿಗೆ ರಾಜೀನಾಮೆ ನೀಡಿ ಹೊರ ಹೋಗುವಂತೆ ಭಾರತ ಸಂಚಾರ ನಿಗಮ (ಬಿಎಸ್ಎನ್ಎಲ್) ಸೂಚನೆ ನೀಡಲಿದೆ ಎಂಬ ಸುದ್ದಿ ಕೆಲವೆಡೆ ಹರಿದಾಡುತ್ತಿದೆ.
ಸರ್ಕಾರಿ ಸ್ವಾಮ್ಯದ ದೂರವಾಣಿ ಸಂಸ್ಥೆಯಾದ ಬಿಎಸ್ಎನ್ಎಲ್ ತನ್ನ ಶೇ 50 ರಷ್ಟು ಉದ್ಯೋಗಿಗಳಿಗೆ ರಜೆಯ ಮೇಲೆ ಹೋಗುವಂತೆ ಸೂಚನೆ ನೀಡಲು ಮುಂದಾಗಿದೆ ಎಂದು ಕೆಲವು ವೆಬ್ತಾಣಗಳಲ್ಲಿ ವರದಿಯಾಗಿದೆ. ಆದರೆ, ಇದು ಸತ್ಯಕ್ಕೆ ದೂರ ಎಂದು ಬಿಎಸ್ಎನ್ಎಲ್ ಉದ್ಯೋಗಿಗಳ ಒಕ್ಕೂಟ ಸ್ಪಷ್ಟಪಡಿಸಿದೆ.
ಉದ್ಯೋಗಿಗಳ ಆಗಸ್ಟ್ ತಿಂಗಳಿನ ವೇತನ ಪಾವತಿ ವಿಳಂಬವಾಗಿತ್ತು. ಇದರಿಂದ ದೇಶದ ವಿವಿಧೆಡೆ ಬಿಎಸ್ಎನ್ಎಲ್ ನೌಕರರ ಒಕ್ಕೂಟಗಳು ಪ್ರತಿಭಟನೆ ನಡೆಸಿದ್ದವು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೌಕರರಲ್ಲಿ ಸುಮಾರು ಶೇ 50ರಷ್ಟು ಮಂದಿಯನ್ನು ಸ್ವಯಂ ಪ್ರೇರಿತ ರಜೆ ಹೋಗುವಂತೆ ತಿಳಿಸುವುದಾಗಿ ಬಿಎಸ್ಎನ್ಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಕುಮಾರ್ ಪುರ್ವಾರ್ ಹೇಳಿದ್ದಾರೆ ಎಂದು ಟ್ರ್ಯಾಕ್.ಇನ್ ಎಂಬ ವೆಬ್ಸೈಟ್ ವರದಿ ಮಾಡಿದೆ.
ಮುಂಬರುವ ದಿನಗಳಲ್ಲಿ ಶೇ 50ರಷ್ಟು ಉದ್ಯೋಗಿಗಳಿಗೆ ವಿಆರ್ಎಸ್ ಯೋಜನೆ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗುತ್ತದೆ. ಇದರಿಂದ ಸುಮಾರು 80 ಸಾವಿರ ಉದ್ಯೋಗಿಗಳು ಹೊರಹೋಗುತ್ತಾರೆ. ಒಂದು ಲಕ್ಷ ಉದ್ಯೋಗಿಗಳು ಉಳಿದುಕೊಳ್ಳುತ್ತಾರೆ. ಬಿಎಸ್ಎನ್ಎಲ್ ಉದ್ಯೋಗಿಗಳ ವೇತನ ವೆಚ್ಚವು ಆದಾಯದ ಶೇ 75ರಷ್ಟನ್ನು ವ್ಯಯಿಸುತ್ತದೆ. ಇದರಿಂದ ಸಂಸ್ಥೆಗೆ ಆದಾಯ ಕಡಿತದಲ್ಲಿ ಉಳಿತಾಯವಾಗುತ್ತದೆ ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.
ಈ ವರದಿ ಬಗ್ಗೆ ಬಿಎಸ್ಎನ್ಎಲ್ ನೌಕರರ ಒಕ್ಕೂಟದ ಬಳಿ 'ಒನ್ ಇಂಡಿಯಾ' ಮಾಹಿತಿ ಕೇಳಿದಾಗ, ಇದು ಸತ್ಯಕ್ಕೆ ದೂರವಾದ ವರದಿ ಎಂದು ಸ್ಪಷ್ಟಪಡಿಸಿದ್ದಾರೆ. 'ನಾವೆಲ್ಲರೂ ಕೇಂದ್ರ ಸರ್ಕಾರದ ಉದ್ಯೋಗದ ವ್ಯಾಪ್ತಿಯಲ್ಲಿ ಇರುವವರು. ಯಾವುದೇ ಅಧಿಸೂಚನೆ ಇಲ್ಲದೆ ಏಕಾಏಕಿ ಯಾರಿಗೂ ರಾಜೀನಾಮೆ ನೀಡುವಂತೆ ಅಥವಾ ವಿಆರ್ಎಸ್ ತೆಗೆದುಕೊಳ್ಳುವಂತೆ ಸೂಚನೆ ನೀಡಲು ಸಾಧ್ಯವಿಲ್ಲ' ಎಂದು ಒಕ್ಕೂಟದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications