ದೇಶದ 2,500 ನಗರದಲ್ಲಿ ವೈ ಫೈ, ಮೈಸೂರಿಗೂ ಸಿಗುತ್ತೆ
ನವದೆಹಲಿ, ಫೆ. 7: ಕರ್ನಾಟಕ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಉಚಿತ ವೈ ಫೈ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಕೇಂದ್ರ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದ್ದು, ದೇಶದ 2,500 ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಬಿಎಸ್ಎನ್ಎಲ್ ಮೂಲಕ ವೈ ಫೈ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಕರ್ನಾಟಕದ ಮೈಸೂರಿನಲ್ಲೂ ವೈ ಫೈ ಸಂಪರ್ಕ ನೀಡಲು ಯೋಜನೆ ರೂಪಿಸಿದೆ.
ಈ ಕುರಿತು ಬಿಎಸ್ಎನ್ಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕ್ಷೇತ್ರವಾದ ವಾರಣಸಿಯ ದಶಾಶ್ವಮೇಧ ಘಾಟ್ನಲ್ಲಿ ಕೇಂದ್ರದ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಫೆ. 8ರಂದು ಮೋದಿ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಿದ್ದಾರೆ. [3 ತಿಂಗಳಲ್ಲಿ ಬೆಂಗಳೂರು ವೈ ಫೈಮಯ]

ಯೋಜನೆಯಡಿ ಕರ್ನಾಟಕ ಮೈಸೂರು ಸೇರಿದಂತೆ ಲಕ್ನೋ, ಚೆನ್ನೈ, ಭೋಪಾಲ್, ಪಾಟ್ನಾ, ಹೈದರಾಬಾದ್, ಇಂದೋರ್, ಜೈಪುರ, ಪುಣೆ, ವಡೋದರಾ, ಗಾಂಧಿ ನಗರ, ಅಹ್ಮದಾಬಾದ್ ಹಾಗೂ ಚಂಡೀಗಢಗಳಲ್ಲೂ ವೈ ಫೈ ಸೌಲಭ್ಯ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. [ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲೂ ವೈ ಫೈ]
ಆರಂಭದಲ್ಲಿ ಕೆಲವು ನಿಮಿಷ ಉಚಿತ ಬಳಕೆಗೆ ಅವಕಾಶ ನೀಡಲಾಗುತ್ತದೆ. ನಂತರ ನಿಗದಿತ ಶುಲ್ಕ ಪಾವತಿಸಬೇಕಾಗುತ್ತದೆ. ಸಿಮ್ ಕಾರ್ಡ್ ಹೊಂದಿರುವ ಮೊಬೈಲ್ ಹಾಗೂ ಟ್ಯಾಬ್ಲೆಟ್ಗಳಲ್ಲಿ ಈ ವೈ ಫೈ ಬಳಕೆ ಸಾಧ್ಯವಿದೆ. [ವಿಶ್ವಕ್ಕೇ ವೈ ಫೈ : ಅಮೆರಿಕ ಕನಸು]
ಈ ಯೋಜನೆಗೆ 7 ಸಾವಿರ ರು. ವೆಚ್ಚದ ಅಂದಾಜು ಮಾಡಲಾಗಿದೆ. 60 ಸಾವಿರ ಹಾಟ್ ಸ್ಪಾಟ್ ಸೃಷ್ಟಿಸಲಾಗುತ್ತದೆ ಎಂದು ಬಿಎಸ್ಎನ್ಎಲ್ ಅಧಿಕಾರಿಗಳು ತಿಳಿಸಿದ್ದಾರೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications