ಫೆಬ್ರವರಿ 01ರಂದು 2020-21ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ
ನವದೆಹಲಿ, ಜನವರಿ 09: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಫೆಬ್ರವರಿ 01ರಂದು ಮಂಡನೆಯಾಗಲಿದೆ. ಈ ಬಾರಿ ಎರಡು ಹಂತದಲ್ಲಿ ಬಜೆಟ್ ಅಧಿವೇಶನ ನಡೆಸಲು ಕೇಂದ್ರ ಸಚಿವ ಸಂಪುಟದ ಸಂಸದೀಯ ವ್ಯವಹಾರಗಳ ಸಮಿತಿ ಶಿಫಾರಸು ಮಾಡಿದೆ. ಸಂಸತ್ ರಜೆ ಇರುವ ದಿನ ಬಜೆಟ್ ಮಂಡನೆ ನಡೆಯುವುದೇ? ಇಲ್ಲವೇ? ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.
2020-21 ನೇ ಸಾಲಿನ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಮಂಡನೆಯಾಗಲಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಆರ್ಥಿಕ ಸಮೀಕ್ಷೆಯನ್ನು ಜನವರಿ 31 ರಂದು ಬಿಡುಗಡೆ ಮಾಡಲು ಕೇಂದ್ರ ನಿರ್ಧರಿಸಿದೆ.
ಎರಡು ಹಂತದಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಮೊದಲ ಹಂತ ಜನವರಿ 31ರಿಂದ ಫೆಬ್ರವರಿ 11 ಹಾಗೂ ಎರಡನೇ ಹಂತ ಮಾರ್ಚ್ 02 ರಿಂದ ಏಪ್ರಿಲ್ 03ರ ತನಕ ನಡೆಯಲಿದೆ. ಈ ಅವಧಿಯಲ್ಲಿ ಸಂಸದೀಯ ಸಮಿತಿಗಳು ವಿವಿಧ ಇಲಾಖೆಗೆ ಮಂಜೂರಾದ ಬಜೆಟ್ ಅನುದಾನವನ್ನು ಪರಿಶೀಲನೆ ನಡೆಸಲಿವೆ.

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಫೆಬ್ರವರಿ ಕೊನೆಯ ವಾರ ಬಜೆಟ್ ಮಂಡನೆಯಾಗುತ್ತಿತ್ತು. ಭಾರತೀಯ ಜನತಾ ಪಕ್ಷ 2014 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಫೆಬ್ರವರಿ 1 ರಂದು ಬಜೆಟ್ ಮಂಡನೆಯ ಸಂಪ್ರದಾಯ ಅನುಸರಿಸಿಕೊಂಡು ಬಂದಿದೆ.
ಬಜೆಟ್ ನಿರೀಕ್ಷೆ: ಸರಕು ಮತ್ತು ಸೇವೆಗಳ ಬಳಕೆಗೆ ಉತ್ತೇಜನ ನೀಡುವುದು, ವೈಯಕ್ತಿಕ ಆದಾಯ ತೆರಿಗೆಯಲ್ಲಿ ವಿನಾಯತಿ ನೀಡುವುದು ಸೇರಿದಂತೆ ಹಲವು ಪ್ರಮುಖ ಅಂಶಗಳ ಬಗ್ಗೆ ಕೇಂದ್ರ ಬಜೆಟ್ ಗೂ ಮುನ್ನ ಚರ್ಚೆ ನಡೆದಿದೆ.
ವೈಯಕ್ತಿಕ ಆದಾಯ ತೆರಿಗೆ ಮಿತಿ ಬದಲಾವಣೆಗೆ ಮುಂದಾಗಿದೆ. ಹಾಲಿ 5 ಲಕ್ಷ ರೂ. ನಿಂದ 10ಲಕ್ಷ ರೂ. ವರೆಗಿನ ಆದಾಯಕ್ಕೆ ಶೇಕಡ 20ರಷ್ಟು ತೆರಿಗೆಯನ್ನು ಶೇ. 10 ಪ್ರಮಾಣಕ್ಕೆ ತಗ್ಗಿಸುವ ಬಗ್ಗೆ ಚಿಂತನೆ ಇದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications