ಬಜೆಟ್ 2021: ವಿಪಕ್ಷ ನಾಯಕರ ಮನವೊಲಿಕೆಗೆ ಮುಂದಾದ ಕೇಂದ್ರ ಸರ್ಕಾರ
ನವದೆಹಲಿ, ಜನವರಿ 30: ಈ ಬಾರಿಯ ಬಜೆಟ್ ಅಧಿವೇಶನ ಯಾವುದೇ ಅಡೆತಡೆಗಳಿಲ್ಲದೆ ಸರಾಗವಾಗಿ ನಡೆಯುವಂತೆ ಮಾಡಲು ಕೇಂದ್ರ ಸರ್ಕಾರದ ಪ್ರಮುಖರು ವಿಪಕ್ಷಗಳ ನಾಯಕರ ಮನವೊಲಿಕೆ ಆರಂಭಿಸಿದ್ದಾರೆ. ವಿರೋಧಪಕ್ಷಗಳ ಸಂಸದೀಯ ನಾಯಕರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಭೇಟಿ ಮಾಡುತ್ತಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಅಧಿವೇಶನ ಸುಗಮವಾಗಿ ನಡೆಸಲು ಅನುವು ಮಾಡಿಕೊಡುವಂತೆ ಕೋರುತ್ತಿದ್ದಾರೆ.
ರಾಜ್ಯ ಖಾತೆ ಸಚಿವರಾದ ಅರ್ಜುನ್ ರಾಮ್ ಮೇಘ್ವಾಲ್ ಮತ್ತು ವಿ. ಮುರಳೀಧರನ್ ಕೂಡ ಈ ಸಭೆಯ ಭಾಗವಾಗಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಶುಕ್ರವಾರ, ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ಸಂಸತ್ತಿನ ಜಂಟಿ ಸದನಗಳನ್ನು ಉದ್ದೇಶಿಸಿ ಮಾತನಾಡಿದ್ದರು. ಆದರೆ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಾಗಿ ವಿರೋಧಪಕ್ಷಗಳು ಈ ಭಾಷಣವನ್ನು ಬಹಿಷ್ಕರಿಸಿದ್ದವು. ಈಹಿನ್ನೆಲೆಯಲ್ಲಿ ವಿಪಕ್ಷಗಳ ಮನವೊಲಿಸುವ ಕಾರ್ಯ ಮಾಡಲಾಗುತ್ತಿದೆ.
ಸೋಮವಾರದಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಆದರೆ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟ, ಗಲಭೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಅವಕಾಶಕ್ಕೆ ಕಾದಿರುವ ವಿಪಕ್ಷಗಳು, ಬಜೆಟ್ ಮಂಡನೆ ಹಾಗೂ ಅದರ ಚರ್ಚೆಗೆ ಅವಕಾಶ ನೀಡುವ ಸಾಧ್ಯತೆ ಕಡಿಮೆ. ಹೀಗಾಗಿ ಸಂಸತ್ನಲ್ಲಿನ ಗದ್ದಲವನ್ನು ಆದಷ್ಟು ಕಡಿಮೆ ಮಾಡುವ ಪ್ರಯತ್ನವಾಗಿ ಈ ಸಭೆಗಳನ್ನು ನಡೆಸಲಾಗುತ್ತಿದೆ. ಕಳೆದ ಮುಂಗಾರು ಅಧಿವೇಶನದಲ್ಲಿ ಕೂಡ ಭಾರಿ ಗದ್ದಲ, ಗಲಾಟೆ ನಡೆದಿದ್ದವು. ಅದರ ನಡುವೆಯೇ ಸಂಸತ್ತು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಅಂಗೀಕರಿಸಿತ್ತು.

ಕಳೆದ ವರ್ಷ ಕೃಷಿ ಮಸೂದೆಗಳನ್ನು ಮಂಡಿಸಿದ್ದಾಗ ವಿರೋಧಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ಕೃಷಿ ಮಸೂದೆಯ ಪ್ರತಿಗಳನ್ನು ಸಂಸತ್ತಿನ ಒಳಗೆಹರಿದು ಎಸೆದಿದ್ದವು. ಆದರೆ ಸಂಸತ್ನಲ್ಲಿ ಬಹುಮತ ಹೊಂದಿದ್ದ ಸರ್ಕಾರ, ಸುಲಭವಾಗಿ ಕಾಯ್ದೆಗಳನ್ನು ಅಂಗೀಕರಿಸಿತ್ತು.
Recommended Video
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications