ಬಜೆಟ್ 2021: ಕೇಂದ್ರ ಬಜೆಟ್ನ ಪ್ರಮುಖ ಅಂಶಗಳು
ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಬಜೆಟ್ ಅನ್ನು ಸೋಮವಾರ ಮಂಡಿಸಿದ್ದಾರೆ. ಅದರಲ್ಲಿ ಆರ್ಥಕತೆಯ ಉತ್ತೇಜನಕ್ಕಾಗಿ ಅನೇಕ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಸಾರಿಗೆ, ಉದ್ಯಮ, ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ಸಾಮಾಜಿಕ-ಆರ್ಥಿಕ ವಲಯಗಳಿಗೆ ಅನೇಕ ಯೋಜನೆಗಳನ್ನು ಘೋಷಿಸಲಾಗಿದೆ.
ವಿವಿಧ ವಲಯಗಳಲ್ಲಿನ ಉತ್ಪನ್ನಗಳ ಮೇಲೆ ಸೆಸ್ ವಿಧಿಸಲಾಗಿದೆ. ಕೆಲವು ಕ್ಷೇತ್ರಗಳಿಗೆ ತೆರಿಗೆ ಕಡಿಮೆ ಮಾಡಲಾಗಿದೆ. ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆ ವ್ಯವಸ್ಥೆಯಲ್ಲಿ ಕೂಡ ಬದಲಾವಣೆಗಳನ್ನು ಮಾಡಲಾಗಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ 20,000 ಕೋಟಿ ರೂ ಹೆಚ್ಚುವರಿ ನೆರವು, ಕೃಷಿ ಅನುದಾನದಲ್ಲಿನ ಒಂದು ಭಾಗವನ್ನು ಎಪಿಎಂಸಿ ಮೂಲಸೌಕರ್ಯ ಬಲವರ್ಧನೆಗೆ ಬಳಸುವುದು. ಒಂದು ದೇಶ ಒಂದು ರೇಷನ್ ಕಾರ್ಡ್ ಯೋಜನೆಗಳನ್ನು ಘೋಷಿಸಲಾಗಿದೆ.
ಪ್ರಸಕ್ತ ಸಾಲಿನ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿರುವ ಕೆಲವು ಪ್ರಮುಖ ಅಂಶಗಳು ಇಲ್ಲಿವೆ.

1.75 ಲಕ್ಷ ಕೋಟಿ ಬಂಡವಾಳ ಹಿಂದೆಗೆತ
1.75 ಲಕ್ಷ ಕೋಟಿ ಬಂಡವಾಳ ಹಿಂದೆಗೆತ
* 2022ರ ಹಣಕಾಸು ವರ್ಷದ ವೇಳೆಗೆ 1.75 ಲಕ್ಷ ಕೋಟಿ ಬಂಡವಾಳ ಹಿಂದೆಗೆತದ ಗುರಿಯನ್ನು ಸರ್ಕಾರ ಹೊಂದಿದೆ.
* 2022ರಲ್ಲಿ ಜೀವ ವಿಮಾ ನಿಗಮದ ಷೇರುಗಳನ್ನು ಮಾರಾಟ ಮಾಡಲು ಅನುಕೂಲವಾಗುವಂತೆ ಐಪಿಒ ಪ್ರಕ್ರಿಯೆ ಜಾರಿ.

ಕೃಷಿ ಸೆಸ್ ಏರಿಕೆ
* 2022ರ ವೇಳೆಗೆ ಏರ್ ಇಂಡಿಯಾ ಮತ್ತು ಬಿಪಿಸಿಎಲ್ ಮಾರಾಟ ಪ್ರಕ್ರಿಯೆ ಪೂರ್ಣ
* ಕೆಲವು ವಸ್ತುಗಳ ಮೇಲೆ ಕೃಷಿ ಮೂಲಸೌಕರ್ಯ ಸೆಸ್ ಹೇರಿಕೆ.
* 64,180 ಕೋಟಿ ರೂ ವೆಚ್ಚದಲ್ಲಿ ಪಿಎಂ ಆತ್ಮನಿರ್ಭರ ಸ್ವಸ್ಥ ಭಾರತ ಯೋಜನೆಯ ಜಾರಿ.

ಜಿಡಿಪಿ ವಿತ್ತೀಯ ಕೊರತೆ
* ವಿಮಾ ಕಂಪೆನಿಗಳಲ್ಲಿನ ಎಫ್ಡಿಐ ಶೇ 49ರಿಂದ ಶೇ 74ಕ್ಕೆ ಏರಿಕೆ. ಸುರಕ್ಷತಾ ನಿಯಮಗಳೊಂದಿಗೆ ವಿದೇಶಿ ಮಾಲೀಕತ್ವಕ್ಕೆ ಅವಕಾಶ.
* 2021ರ ಹಣಕಾಸು ವರ್ಷದ ವಿತ್ತೀಯ ಕೊರತೆಯು ಜಿಡಿಪಿಯ ಶೇ 9.5ರಷ್ಟು.
* 2022ರ ಹಣಕಾಸು ವರ್ಷದ ವಿತ್ತೀಯ ಕೊರತೆಯು ಜಿಡಿಪಿಯ ಶೇ 6.8ರಷ್ಟು.

ಮಾರುಕಟ್ಟೆ ಸಾಲ
* 2022ರ ಹಣಕಾಸು ವರ್ಷದ ಒಟ್ಟು ಮಾರುಕಟ್ಟೆ ಸಾಲದ ಗುರಿ 12 ಲಕ್ಷ ಕೋಟಿ ರೂ.
* 2025-26ರ ವೇಳೆಗೆ ಆರ್ಥಿಕ ಕೊರತೆಯನ್ನು ಶೇ 5ರ ಒಳಗೆ ಇಳಿಸಲು ಸರ್ಕಾರದ ಗುರಿ.
* ಸ್ಟಾರ್ಟ್ಅಪ್ಗಳ ತೆರಿಗೆ ವಿನಾಯಿತಿ ಒಂದು ವರ್ಷ ವಿಸ್ತರಣೆ
* ಹಿರಿಯ ನಾಗರಿಕರು ಐಟಿ ರಿಟರ್ನ್ಸ್ ಸಲ್ಲಿಸುವುದರಿಂದ ವಿನಾಯಿತಿ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications